ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ದಡ್ಡಿ ಗ್ರಾಮದ ಹೊರವಲಯದಲ್ಲಿ ಬರುವ ಹೊಸ ರಸ್ತೆಯ ಬಳಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಕಳೆದ ವರ್ಷ ಲೋಕೋಪಯೋಗಿ ಇಲಾಖೆಯಿಂದ ₹ 20 ಲಕ್ಷ ವೆಚ್ಚದಲ್ಲಿ ಆಗಿರುವ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿದೆ. ಹೀಗಾಗಿ ಈ ರಸ್ತೆಯ ಮೇಲೆ ಹರಿಯುವ ಮಳೆ ನೀರು ಗಟಾರಕ್ಕೆ ಹೋಗದೆ ಮನೆಗೆ ನುಗ್ಗುತ್ತಿದೆ ಎಂದು ನಿವಾಸಿಗಳು ದೂರಿದ್ದಾರೆ. ‘ಈ ಬಗ್ಗೆ ಇಲ್ಲಿಯ ಮುಸ್ಲಿಂ ಸಮುದಾಯದವರು …
Read More »ಮಹಾದಾಯಿಗೆ ಶೀಘ್ರದಲ್ಲಿ ತಾರ್ಕಿಕ ಅಂತ್ಯ: ಶೆಟ್ಟರ
ಸವದತ್ತಿ: ಮಹಾದಾಯಿ, ಕಳಸಾ-ಬಂಡೂರಿ ಸೇರಿ 13 ಟಿಎಂಸಿ ಅಡಿ ನೀರು ಮಲಪ್ರಭೆಗೆ ಹರಿಸಬೇಕಿದೆ. ಗೋವಾ ಸರ್ಕಾರದ ಉದ್ಧಟತನದಿಂದ ವಿಳಂಬವಾಗುತ್ತಿದೆ. ಅರಣ್ಯ, ನೀರಾವರಿ ಇಲಾಖೆಗಳಿಂದ ಕ್ಲಿಯರನ್ಸ್ ಬಂದಿದ್ದು, ಕೆಲ ದಿನಗಳಲ್ಲಿ ಇದಕ್ಕೊಂದು ತಾರ್ಕಿಕ ಅಂತ್ಯ ನೀಡಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು. ಇಲ್ಲಿನ ಕಲ್ಮಠದ ಆರವಣದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ ತಾಲ್ಲೂಕು ಘಟಕದಿಂದ ಭಾನುವಾರ ಜರುಗಿದ ಪ್ರತಿಭಾ ಪುರಸ್ಕಾರ ಮತ್ತು ಗೌರವ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. …
Read More »ಮಳೆಗಾಲದಲ್ಲಿ ಸಂಪರ್ಕ ಕಡಿದುಕೊಳ್ಳುವ ಹಳ್ಳಿಗಳು
ಖಾನಾಪುರ: 93 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶದಿಂದ ಸುತ್ತುವರಿದ ಖಾನಾಪುರ ತಾಲ್ಲೂಕಿನ 100ಕ್ಕೂ ಹೆಚ್ಚು ಗ್ರಾಮಗಳು ದಟ್ಟ ಅರಣ್ಯ ಪ್ರದೇಶದಲ್ಲಿವೆ. ಪ್ರತಿ ಬಾರಿ ಮಳೆಗಾಲದಲ್ಲಿ ಈ ಗ್ರಾಮಗಳು ಮುಖ್ಯ ವಾಹಿನಿಯಿಂದ ಸಂಪರ್ಕ ಕಡಿತಗೊಳ್ಳುತ್ತವೆ. ಮಳೆಗಾಲ ಮುಗಿಯುವವರೆಗೂ ಭಯದಲ್ಲೇ ಬದುಕಬೇಕಾದ ಅನಿವಾರ್ಯವಿದೆ. ಲೋಂಡಾ, ನಾಗರಗಾಳಿ, ಕಣಕುಂಬಿ ಮತ್ತು ಭೀಮಗಡ ವನ್ಯಧಾಮ ವ್ಯಾಪ್ತಿಯಲ್ಲಿರುವ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಹೊಲ- ಗದ್ದೆಗಳು ಮತ್ತು ಜನವಸತಿಗಿಂತ ಅರಣ್ಯ ಪ್ರದೇಶವೇ ಅಧಿಕ ಪ್ರಮಾಣದಲ್ಲಿದೆ. ವನ್ಯಜೀವಿಗಳ ಮೇಲೆ …
Read More »ಪೋಷಕರ ಗಮನಕ್ಕೆ : ಇನ್ಮುಂದೆ ಮಕ್ಕಳಿಗೆ ʻಆಧಾರ್ ಕಾರ್ಡ್ʼ ಮಾಡಿಸಲು ಹೊಸ ನಿಯಮ ಜಾರಿ
ನವದೆಹಲಿ : ನೀವು ಆಧಾರ್ ಕಾರ್ಡ್ ಗೆ ಸಂಬಂಧಿಸಿದ ಕೆಲವು ಪ್ರಮುಖ ನಿಯಮಗಳು ಮತ್ತು ಸೂಚನೆಗಳನ್ನು ತಿಳಿದುಕೊಳ್ಳಬೇಕು, ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ, ಈಗ ನೀವು ಅವರಿಗೂ ಆಧಾರ್ ಕಾರ್ಡ್ ಪಡೆಯುವುದು ಕಡ್ಡಾಯವಾಗಿದೆ. ಇಂದಿನ ಕಾಲದಲ್ಲಿ, ಶಾಲೆಗಳಿರಲಿ ಅಥವಾ ಶಿಕ್ಷಣ ಸಂಸ್ಥೆಗೆ ದಾಖಲಾಗಿರಲಿ ಅಥವಾ ಸರ್ಕಾರಿ ಯೋಜನೆಗಳ ಲಾಭವನ್ನು ಪಡೆಯಲಿ ಅಥವಾ ಉಳಿತಾಯ ಖಾತೆಯನ್ನು ತೆರೆಯಲಿ ಅಥವಾ ಮಗುವಿನ ಗುರುತಿನ ಚೀಟಿಯನ್ನು ತಯಾರಿಸಲಿ, ಆಧಾರ್ ಕಾರ್ಡ್ ಮಾತ್ರ ಹೆಚ್ಚು ಬಳಸಲಾಗುವ ಗುರುತಿನ …
Read More »ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿರುವ ಪರಿಣಾಮವಾಗಿ ಕೃಷ್ಣಾ ನದಿಗೆ 2 ಲಕ್ಷ 75 ಸಾವಿರ ಕ್ಯುಸೆಕ್ಗೂ ಹೆಚ್ಚು ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿರುವ ಚಿಕ್ಕೋಡಿ ತಾಲ್ಲೂಕಿನ ಯಡೂರು ಗ್ರಾಮದ ಪೌರಾಣಿಕ ಹಿನ್ನೆಲೆಯ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿ ಸಂಪೂರ್ಣ ಜಲಾವೃತಗೊಂಡಿದೆ. ಶನಿವಾರ ತಡರಾತ್ರಿ ದೇವಸ್ಥಾನದ ದಕ್ಷಿಣ ದ್ವಾರದಿಂದ ಕೃಷ್ಣಾ ನದಿ ನೀರು ಗರ್ಭಗುಡಿಯೊಳಗೆ ಪ್ರವೇಶಿಸಿತು. ನದಿ ನೀರು …
Read More »ಮುಳುಗಡೆ ಹೊಂದಿದ್ದ ಗೋಕಾಕ ನಗರದ ಚಿಕ್ಕೊಳಿ ಸೇತುವೆಗೆ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ
ಮುಳುಗಡೆ ಹೊಂದಿದ್ದ ಚಿಕ್ಕೊಳಿ ಸೇತುವೆ ಪರಿಶೀಲಿಸಿದ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ, ತುರ್ತು ಕ್ರಮ ಅಧಿಕಾರಿಗಳಿಗೆ ಸೂಚನೆ. ಮುಳುಗಡೆ ಹೊಂದಿದ್ದ ಗೋಕಾಕ ನಗರದ ಚಿಕ್ಕೊಳಿ ಸೇತುವೆಗೆ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಅಧಿಕಾರಿಗಳೊಡನೆ ದೂರವಾಣಿಯಲ್ಲಿ ಮಾತನಾಡಿ ಜನರಿಗೆ ತೊಂದರೆಯಾಗದಂತೆ ಸೇತುವೆ ಮೇಲೆ ವಾಹನ ಸಂಚಾರ ಪ್ರಾರಂಭ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
Read More »ಬಿಜೆಪಿ ಕಾಲದಲ್ಲಿ ಆದ ಹಗರಣ ಒಪ್ಪಿಕೊಳ್ಳಲಿ: ಸಂತೋಷ್ ಲಾಡ್
ಹುಬ್ಬಳ್ಳಿ; ಬಿಜೆಪಿಯವರು ಮಾಡಿದ ಹಗರಣ ಮೊದಲು ಒಪ್ಪಿಕೊಳ್ಳಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಹಾಗೂ ವಾಲ್ಮೀಕಿ ನಿಗಮದಲ್ಲಿ ಹಗರಣದಲ್ಲಿ ಸಿಎಂ ರಾಜೀನಾಮೆಗೆ ವಿಚಾರವಾಗಿ ವಿರೋಧ ಪಕ್ಷಗಳು ಒತ್ತಾಯ ನಡೆಸಿವೆ. ಇದಕ್ಕೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ. ವಿಪಕ್ಷಗಳಿಗೆ ಸಿಎಂ ಹೇಗೆ ಸ್ಪಷ್ಟನೇ ನೀಡಬೇಕು. ಬಿಜೆಪಿ ಕಾಲದಲ್ಲಿ ಏನು ಆಗಿದೆ ಮೊದಲು ಅವರನ್ನು ಹೇಳಲಿ ಎಂದು ಗುಡುಗಿದರು. ಬಿಜೆಪಿ …
Read More »‘ಕಮಲ’ ಚಕ್ರವ್ಯೂಹವನ್ನು ಆರು ಜನರು ನಿಯಂತ್ರಿಸುತ್ತಾರೆ; ರಾಹುಲ್ಗಾಂಧಿ
ನವದೆಹಲಿ: ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಯುವಕರು, ರೈತರು, ಮಹಿಳೆಯರು ಮತ್ತು ಸಣ್ಣ ಉದ್ಯಮಗಳ ಸುತ್ತ ಚಕ್ರವ್ಯೂಹವನ್ನು (ಮಹಾಭಾರತದ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಯುದ್ಧ ರಚನೆ) ರಚಿಸುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ(ಜುಲೈ 29) ಆರೋಪಿಸಿದ್ದಾರೆ. ಸದನವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಮಲ (ಬಿಜೆಪಿಯ ಚಿಹ್ನೆ) ರಚನೆಯ ಕೇಂದ್ರದಲ್ಲಿ ನರೇಂದ್ರ ಮೋದಿ, ಅಮಿತ್ ಷಾ, ಮೋಹನ್ ಭಾಗವತ್, ಅಜಿತ್ ದೋವಲ್, ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ …
Read More »ನೆರೆಪೀಡಿತ ಪ್ರದೇಶಗಳ ಭೇಟಿಗೆ ಮುಂದಾದ ಬಿಜೆಪಿ ನಾಯಕರ ತಂಡ
ಬೆಂಗಳೂರು,ಜು.29- ಭಾರತದಲ್ಲಿ ಉಂಟಾಗಿರುವ ನೆರೆ ಹಾವಳಿಯನ್ನು ಪರಿಶೀಲಿಸಿ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷ ಬಿಜೆಪಿ ನಾಯಕರ ತಂಡವನ್ನು ರಚಿಸಿದೆ. ಈಗಾಗಲೇ ಉತ್ತರಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಹಾಗೂ ಆಸ್ತಿಪಾಸ್ತಿ ಹಾನಿಗೊಂಡಿದ್ದು, ಈ ಸಂದರ್ಭದಲ್ಲಿ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವರಾದ ಅಶ್ವಥನಾರಾಯಣ, ಅರಗ ಜ್ಞಾನೇಂದ್ರ, ಶ್ರೀರಾಮುಲು ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ , ಮೇಲನೆ ವಿಪಕ್ಷ ನಾಯಕ …
Read More »ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ..!
ಬೆಂಗಳೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡಿ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಂಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮಾನಸ (25) ಎಂದು ಗುರುತಿಸಲಾಗಿದೆ. ಗಂಡನ ಮನೆಯಲ್ಲೇ ಆಕೆ ಮೊಬೈಲ್ ನಲ್ಲಿ ವಿಡಿಯೋ ಮಾಡಿ ನಂತರ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 6 ವರ್ಷದ ಹಿಂದೆ ದಿಲೀಪ್ ಜೊತೆ ಮಾನಸ ಮದುವೆಯಾಗಿದ್ದರು. 1 ವರ್ಷದಿಂದ ದಿಲೀಪ್ ಅನ್ಯ ಮಹಿಳೆ ಜೊತೆ ಸಂಪರ್ಕ ಇಟ್ಟುಕೊಂಡಿದ್ದರು …
Read More »
Laxmi News 24×7