Breaking News

40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ಐತಿಹಾಸಿಕ ಭೇಟಿ – ಮುಂದಿನ ವಾರ ನ್ಯೂಜಿಲೆಂಡ್‌ಗೆ ಮೋದಿ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ನ್ಯೂಜಿಲೆಂಡ್‌ಗೆ  ತಮ್ಮ ಮೊದಲ ಅಧಿಕೃತ ದ್ವಿಪಕ್ಷೀಯ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ 40 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ ಆಗಿರುವುದರಿಂದ ಈ ಪ್ರವಾಸಕ್ಕೆ ವಿಶೇಷ ಮಹತ್ವ ಲಭಿಸಿದೆ. ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್  ಈ ಭೇಟಿ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಭಾರತ-ನ್ಯೂಜಿಲೆಂಡ್ ಸಂಬಂಧದಲ್ಲಿ ಇದು ಐತಿಹಾಸಿಕ ಘಟ್ಟವಾಗಲಿದೆ. ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ, …

Read More »

ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – ʻದಾಸʼನಿಗೆ 1 ವರ್ಷ ಜೈಲೇ ಗತಿ

ನವದೆಹಲಿ: ಜಾಮೀನು ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಪ್ರಮುಖ ಆರೋಪಿ ನಟ ದರ್ಶನ್ ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಇದರಿಂದ ʻದಾಸʼ ಇನ್ನೂ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ. ಹೌದು. 1 ವರ್ಷದ ವರೆಗೆ ಜಾಮೀನು  ಕೋರಿ ಅರ್ಜಿ ಸಲ್ಲಿಸದಂತೆ ಸೂಚಿಸಿದ್ದ ಸುಪ್ರೀಂ ಆದೇಶ ತಿದ್ದುಪಡಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದೆ. ಖುದ್ದು ಸುಪ್ರೀಂ ಕೋರ್ಟ್‌ನ ರಿಜಿಸ್ಟರ್‌ ಅವರೇ ಅರ್ಜಿಯನ್ನ ತಿರಸ್ಕರಿಸಿದ್ದಾರೆ. ತುರ್ತು ಪರಿಸ್ಥಿತಿಗಳಲ್ಲಿ …

Read More »

ರಾಮನಗರದ ಚೌಟ್ರಿಯಲ್ಲಿ ಎಸ್‌ಐಆರ್‌ ಪ್ರಕ್ರಿಯೆ – ಹೆಚ್‌ಡಿಕೆಯಿಂದ ವಿಡಿಯೋ ಸಾಕ್ಷಿ ಬಿಡುಗಡೆ

ಬೆಂಗಳೂರು: ರಾಮನಗರದಲ್ಲಿ ಚೌಟ್ರಿಯಲ್ಲಿ ಕುಳಿತು ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ ಎಂದು ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಗಂಭೀರ ಆರೋಪ ಮಾಡಿದ್ದಾರೆ. ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಅಕ್ರಮಗಳ ಕುರಿತು ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಗೃಹ ಸಚಿವರಿಗೆ ದೂರು ನೀಡುವುದಾಗಿ ತಿಳಿಸಿದರು. ರಾಮನಗರದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಲೋಪವಾಗುತ್ತಿದೆ. ನಿಯಮಗಳ ಪ್ರಕಾರ ಬಿಎಲ್‌ಒ ಗಳು …

Read More »

ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ. ಬಿಡುಗಡೆ: ಈಶ್ವರ ಖಂಡ್ರೆ

ಬೆಂಗಳೂರು: ಎಲ್ ನಿನೋ  ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸುಮಾರು 85 ಕೋಟಿ ರೂಪಾಯಿಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ. ವೆಚ್ಚ …

Read More »

ಚೌಟ್ರಿಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ – ಹೆಚ್‌ಡಿಕೆ ವಿಡಿಯೋ ರಿಲೀಸ್‌ ಬೆನ್ನಲ್ಲೇ ಡಿಕೆಶಿ ವಾರ್ನಿಂಗ್‌

ಬೆಂಗಳೂರು: ಕಲ್ಯಾಣ ಮಂಟಪಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಅವರು ಬಿಎಲ್‌ಓಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕೆಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರು  ಕಲ್ಯಾಣ ಮಂಟಪಗಳಲ್ಲಿ ಸಿಬ್ಬಂದಿ SIR ಫಾರಂ ತುಂಬುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಕಲ್ಯಾಣ ಮಂಟಪಗಳಲ್ಲಿ SIR ಫಾರಂ ತುಂಬಲು ಅವಕಾಶ ಇಲ್ಲ. ಬಿಎಲ್ಓಗಳೇ ಅರ್ಜಿಗಳನ್ನ ಹಂಚಬೇಕು, ಅವರೇ ಮನೆಗೆ ಹೋಗಿ ಅರ್ಜಿ ಕೊಡಬೇಕು, ಅಲ್ಲಿಯೇ ತುಂಬಬೇಕು …

Read More »

ಬರ ಪರಿಸ್ಥಿತಿ ಗಂಭೀರವಾಗ್ತಿದೆ, ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ – ರೈತರಿಗೆ ಡಿಕೆಶಿ ಮನವಿ

ಬೆಂಗಳೂರು: ಮಳೆ ಕೊರತೆಯಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗ್ತಿದೆ ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬಾರದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  ಕರೆ ನೀಡಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ , ಘಟ್ಟಪ್ರಭಾ, ಮಲಪ್ರಭಾ, ನಾರಾಯಣಪುರ, ವಾಣಿವಿಲಾಸ ಅಣೆಕಟ್ಟೆಗಳ ಒಳಹರಿವಿನ ಪ್ರಮಾಣ ಶೂನ್ಯವಾಗಿದೆ ಎಂದು ತಿಳಿಸಿದರು. ಕಾವೇರಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ …

Read More »

ಶೀಲ ಶಂಕಿಸಿ ಪತಿಯಿಂದ ಪತ್ನಿಯ ಭೀಕರ ಹತ್ಯೆ

ಮಂಡ್ಯ: ಪತ್ನಿಯ ಶೀಲ ಶಂಕಿಸಿ ಪತಿಯೇ  ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆಲಗೂಡು ಗ್ರಾಮದಲ್ಲಿ ಜರುಗಿದೆ. ರಶ್ಮಿ ಕೊಲೆಯಾದ ದುರ್ದೈವಿ ಮಹಿಳೆ. ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಪತಿ ರಮೇಶ್ ಈ ಕೃತ್ಯ ಎಸಗಿದ್ದಾನೆ. ಆಲಗೂಡು ಗ್ರಾಮದ ನಿವಾಸಿಯಾದ ರಮೇಶ್, ಕಳೆದ ಕೆಲವು ಸಮಯದಿಂದ ಪತ್ನಿ ರಶ್ಮಿ ಅವರ ನಡತೆಯ ಮೇಲೆ ಸಂಶಯ ಪಡುತ್ತಿದ್ದ ಎನ್ನಲಾಗಿದೆ. ಇದೇ ವಿಷಯವಾಗಿ ಇಬ್ಬರ …

Read More »

ಬೈಕ್‌ ಸಮೇತ ಸುಟ್ಟು ಕರಕಲಾದ ಯುವಕನ ಶವ ಪತ್ತೆ – ಕೊಲೆ ಶಂಕೆ

ಆನೇಕಲ್: ಸರ್ಜಾಪುರ ಸಮೀಪದ ಬಿಕ್ಕನಹಳ್ಳಿ ರಸ್ತೆಯಲ್ಲಿ ಬೈಕ್ ಜೊತೆಗೆ ಸುಟ್ಟು ಕರಕಲಾದ ಯುವಕನ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಪ್ರತಿಷ್ಠಿತ ಅಜೀಂ ಪ್ರೇಮ್ ಜೀ ಕಾಲೇಜಿನ ರಸ್ತೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸುಮಾರು 20 ರಿಂದ 25 ವರ್ಷ ವಯಸ್ಸಿನ ಯುವಕನ ಮೃತದೇಹ ಇದಾಗಿದ್ದು, ಕಾಲೇಜು ವಿದ್ಯಾರ್ಥಿ ಇರಬಹುದು ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ರಸ್ತೆ ಬದಿಯಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ ಜನರು. ಸ್ಥಳಕ್ಕೆ …

Read More »

ವಿದ್ಯುತ್ ಖಾಸಗೀಕರಣಕ್ಕೆ ರಾಜ್ಯ ಸರ್ಕಾರ ವಿರೋಧ – ಸಿಎಂ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ವಿದ್ಯುತ್ ಖಾಸಗೀಕರಣಕ್ಕೆ ರಾಜ್ಯ ಸರ್ಕಾರ ವಿರೋಧಿಸಿದ್ದು, ಈ ಬಗ್ಗೆ ಶುಕ್ರವಾರ (ಜು.3) ಕೆಇಆರ್‌ಸಿ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಅಂತಾ ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ, ವಿದ್ಯುತ್ ಖಾಸಗೀಕರಣಕ್ಕೆ ಟಾಟಾ ಸಂಸ್ಥೆಯವರು ಅರ್ಜಿ ಹಾಕಿದ್ದಾರೆ. ಎಲ್ಲಾ ಎಸ್ಕಾಂಗಳು ಆಕ್ಷೇಪಣೆ ಸಲ್ಲಿಸಬೇಕು ಅಂತ ಹೇಳಿದ್ದೀನಿ. ಎಲ್ಲ ಆಕ್ಷೇಪಣೆ ಸಲ್ಲಿಸಲಿದ್ದಾರೆ. ಸರ್ಕಾರದ ನಿಲುವು ಸ್ಪಷ್ಟಪಡಿಸಿದ್ದೇನೆ. ಖಾಸಗೀಕರಣಕ್ಕೆ ಒಪ್ಪಬೇಡಿ ಎಂದಿದ್ದೇವೆ ಅಂತಾ ತಿಳಿಸಿದರು. ಇನ್ನು ಈ ಬಗ್ಗೆ ಶುಕ್ರವಾರದ …

Read More »

ಗೃಹ ಸಚಿವರ ತವರಲ್ಲೇ ಪೊಲೀಸ್‌ ಠಾಣೆಯಿಂದ ಪೋಕ್ಸೊ ಕೇಸ್‌ ಆರೋಪಿ ಪರಾರಿ

ಕಲಬುರಗಿ: ಗೃಹ ಸಚಿವರ ತವರಲ್ಲೇ ಪೊಲೀಸ್‌ ಠಾಣೆಯಿಂದ ಪೋಕ್ಸೊ ಪ್ರಕರಣದ  ಆರೋಪಿ ಪರಾರಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅಫಜಲಪುರ್ ಪೊಲೀಸ್ ಠಾಣೆಯಿಂದ  ಪೋಕ್ಸೊ ಪ್ರಕರಣದ ಆರೋಪಿ ಮಂಜಾನಾಥ್ ಪರಾರಿಯಾಗಿದ್ದಾನೆ. ಕಳೆದ ಒಂದು ವಾರದ ಹಿಂದೆ ಪೋಕ್ಸೊ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಠಾಣೆಗೆ ಪೊಲೀಸರು ಕರೆತಂದಿದ್ದರು. ಗುರುವಾರ ಮಧ್ಯರಾತ್ರಿ ಠಾಣೆಯ‌ ಲಾಕಪ್‌ನಿಂದ ಆರೋಪಿ ಎಸ್ಕೇಪ್ ಆಗಿದ್ದಾನೆ. ಪೊಲೀಸರು ಠಾಣೆಯಲ್ಲಿ ಮಲಗಿರುವುದನ್ನ ಕಂಡು ಆರೋಪಿ ಪರಾರಿಯಾಗಿದ್ದಾನೆ. ಆರೋಪಿ ಎಸ್ಕೇಪ್‌ ಆಗುವ …

Read More »