Breaking News

ಯೋಗೀಶ್‌ಗೌಡ ಕೊಲೆ ಪ್ರಕರಣ : ಆರೋಪಿ ಅಶ್ವತ್ಥ್‌ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿಯ ಜಿಲ್ಲಾ ಪಂಚಾಯತ್​ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅಶ್ವತ್ಥ್​ ಅವರ ಜಾಮೀನನ್ನು ಹೈಕೋರ್ಟ್​ ತಾತ್ಕಾಲಿಕವಾಗಿ ರದ್ದುಪಡಿಸಿ ಆದೇಶ ಹೊರಡಿಸಿದೆ. ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಒಂಬತ್ತನೇ ಆರೋಪಿ ಅಶ್ವತ್ಥ್‌ ಎಂಬುವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಐ. ಅರುಣ್‌ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಪ್ರಕರಣ ಸಂಬಂಧ ಇತರೆ ಸಾಕ್ಷಿಗಳ …

Read More »

ಅಮೆರಿಕದ ಐಸಿಎಸ್ ಇಂಟರ್‌ನ್ಯಾಷನಲ್‌ನಿಂದ ಉಡುಪಿಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್​ಗೆ ಗೌರವ ಫೆಲೋಶಿಪ್‌

ಉಡುಪಿ: ವಿಶ್ವ ಛಾಯಾಗ್ರಹಣ ದಿನದಂದು ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಇಮೇಜ್‌ ಕಾಲಿಗ್‌ ಸೊಸೈಟಿ ಇಂಟರ್‌ನ್ಯಾಷನಲ್‌ (ICS) ವತಿಯಿಂದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಆನರರಿ ಫೆಲೋಶಿಪ್‌ (Hon.FICS) ಅನ್ನು ಪ್ರದಾನ ಮಾಡಲಾಗಿದೆ. ಟೋನಿ ಲೀ ಕಿಮ್ ಥುವಾನ್ APSA, Hon.EFIAP, ಕು. ಸಾರಾ ತೈ ಮೇ ಲಿನ್ ARPS ಹಾಗೂ ICS ಗೌರವ ಸಮಿತಿ ಅವರ ನೇತೃತ್ವದಲ್ಲಿ ನೀಡಲಾದ ಈ ಪ್ರಶಸ್ತಿ, ಛಾಯಾಗ್ರಹಣ ಕಲೆ ಹಾಗೂ ಸಂಸ್ಕೃತಿಯ …

Read More »

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಪರಿಷತ್​​ನಲ್ಲಿ ಪ್ರಶ್ನೋತ್ತರ ಅವಧಿಯ ವೇಳೆ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗಿದೆ. ಗುಣಮಟ್ಟದ ಶಿಕ್ಷಣ ಕೊಡುವ ಪ್ರಯತ್ನ …

Read More »

ಕಾನೂನು ಮೀರಿ ಬಗರ್ ಹುಕುಂ ಅರ್ಜಿ ವಿಲೇವಾರಿ ಇಲ್ಲ:ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್ ಹುಕುಂ ಅರ್ಜಿಗಳ ವಿಲೇವಾರಿ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ. ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿ ಭರವಸೆ ನೀಡಿದ್ದಾರೆ. ಇಂದು ಪ್ರಶ್ನೋತ್ತರ ವೇಳೆ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಗರ್ ಹುಕುಂ ಸಮಿತಿ ಮುಂದೆ ಅಧಿಕಾರಿಗಳು ಅರ್ಹ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು ಎಂಬ ಕಾನೂನು ಇದೆ. …

Read More »

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ

ಗಂಗಾವತಿ (ಕೊಪ್ಪಳ): ತುಂಗಭದ್ರಾ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ಪ್ರಮಾಣದ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ, ಯಾವುದೇ ಕ್ಷಣದಲ್ಲಿ ತಾಲೂಕಿನ ಕಂಪ್ಲಿ ಸೇತುವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಹಾಗೂ ರಸ್ತೆ ಸಂಚಾರದ ಹಿತದೃಷ್ಟಿಯಿಂದ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಶ್ವನಾಥ್ ಅವರು ಈಗಾಗಲೇ ಗಂಗಾವತಿ ಗ್ರಾಮೀಣ ಪೊಲೀಸರಿಗೆ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ!!

ವಿವಿಧ ಬೇಡಿಕೆ ಈಡೇರಿಕೆಗೆ ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ!! ಕನಿಷ್ಠ ವೇತನ ತಿಂಗಳಿಗೆ 36 ಸಾವಿರಕ್ಕೆ ಆಗ್ರಹ ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ ಹೊರಗುತ್ತಿಗೆ ನೌಕರರ ಬೆಳಗಾವಿ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಜಾರಿಗೆ ತಂದಿರುವ ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹೊರಗುತ್ತಿಗೆ ನೌಕರರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸೋಮವಾರ …

Read More »

ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಅಧ್ಯಕ್ಷರ ಅವಿರೋಧ ಆಯ್ಕೆ!! ನಾಲ್ಕು ಸ್ಥಾಯಿ ಸಮಿತಿಗೆ ಅಧ್ಯಕ್ಷರ ಅವಿರೋಧ ಆಯ್ಕೆ

ಬೆಳಗಾವಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಅಧ್ಯಕ್ಷರ ಅವಿರೋಧ ಆಯ್ಕೆ!! ನಾಲ್ಕು ಸ್ಥಾಯಿ ಸಮಿತಿಗೆ ಅಧ್ಯಕ್ಷರ ಅವಿರೋಧ ಆಯ್ಕೆ ಸೋಮವಾರ ಜರುಗಿದ ಸ್ಥಾಯಿ ಸಮಿತಿ ಚುನಾವಣೆ ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಮೇಯರ ಹಾಗೂ ಉಪಮೇಯರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹೊಸ ಇತಿಹಾಸ ಯಾರಿಗೂ ಮನಸ್ತಾಪ ಬಾರದ ಹಾಗೆ ಮತ್ತು ಸಮಾನ ನ್ಯಾಯ ಕೊಡುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗೆ ಅವಿರೋಧವಾಗಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. …

Read More »

ಆರ್ಟಿಫೀಷಿಯಲ್ ಟೆಕ್ನಾಲಜಿ ಪೊಟೋ ಗ್ರಾಫಿ ಕ್ಷೇತ್ರಕ್ಕೂ ಕಾಲಿಟ್ಟಿದೆ: ರೋಟರಿ ಕಾರ್ಯದರ್ಶಿ ಶಶಿಕಾಂತ ನಾಯಿಕ!!

ಆರ್ಟಿಫೀಷಿಯಲ್ ಟೆಕ್ನಾಲಜಿ ಪೊಟೋ ಗ್ರಾಫಿ ಕ್ಷೇತ್ರಕ್ಕೂ ಕಾಲಿಟ್ಟಿದೆ: ರೋಟರಿ ಕಾರ್ಯದರ್ಶಿ ಶಶಿಕಾಂತ ನಾಯಿಕ!! ಬೆಳಗಾವಿಯಲ್ಲಿ ವಿಶ್ವ ಪೊಟೋ ದಿನಾಚರಣೆ ಆರ್ಟಿಫೀಷಿಯಲ್ ಟೆಕ್ನಾಲಜಿ ಪೊಟೋ ಗ್ರಾಫಿ ಕ್ಷೇತ್ರಕ್ಕೂ ಕಾಲಿಟ್ಟಿದೆ ರೋಟರಿ ಕಾರ್ಯದರ್ಶಿ ಶಶಿಕಾಂತ ನಾಯಿಕ ಅಭಿಮತ ಛಾಯಾಗ್ರಾಹಕರೂ ಕಾಲಕ್ಕೆ ತಕ್ಕಂತೆ ಅಪಗ್ರೆಡ್ ವಾಗಬೇಕು ಮೊದಲಿಗಿಂತಲೂ ತಂತ್ರಜ್ಞಾನ ಬಹಳಷ್ಟು ಬೆಳೆದಿದ್ದು, ಈಗ ಆರ್ಟಿಫೀಷಿಯಲ್ ಟೆಕ್ನಾಲಜಿ ಪೊಟೋ ಗ್ರಾಫಿ ಕ್ಷೇತ್ರಕ್ಕೂ ಕಾಲಿಟ್ಟಿದೆ. ಮುಂದಿನ ಪೀಳಿಗೆಗೆ ಉಳಸಿಕೊಂಡು ಹೋಗಬೇಕಾಗಿದೆ ಎಂದು ರೋಟರಿ ಕಾರ್ಯದರ್ಶಿ ಶಶಿಕಾಂತ ನಾಯಿಕ …

Read More »

ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ 10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಮುಲ್ ಗೆ ಬಂದ 13 ಕೋಟಿ ರೂಪಾಯಿ ಲಾಭದಲ್ಲಿ ಹೈನುಗಾರ ರೈತರಿಗೆ ವಿವಿಧ ಸೌಲಭ್ಯಗಳಿಗಾಗಿ 10 ಕೋಟಿ ರೂಪಾಯಿ ಮೀಸಲು- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹಾಲು ಉತ್ಪಾದಕ ಸಹಕಾರಿ ಸಂಘಗಳ ರೈತರಿಗೆ 6 ಕೋಟಿ ರೂಪಾಯಿ ವೆಚ್ಚದ ರಬ್ಬರ್ ಮ್ಯಾಟ್, ವಿದ್ಯುತ್ ಚಾಲಿತ 2 ಹೆಚ್.ಪಿ. ಮೇವು ಕತ್ತರಿಸುವ ಯಂತ್ರಗಳು, ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಜಿಲ್ಲಾ ಹಾಲು ಒಕ್ಕೂಟಕ್ಕೆ …

Read More »

ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತ ರೋಹಿಣಿ ಅಜ್ಜಿ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾಳೆ.

ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಬೆಳಗಾವಿ ಜಿಲ್ಲೆಯ ಬೆಳವಟ್ಟಿ ಗ್ರಾಮದ ಯುವತಿ ಸಾವನ್ನಪ್ಪಿ ಆಕೆಯ ತಾಯಿ ಮತ್ತು ಮಾವ ಗಾಯಗೊಂಡ ದುರ್ಘಟನೆಯು ಭಾನುವಾರ ಸಂಜೆ ಬಿಜಗರ್ಣಿ-ಬೆಳವಟ್ಟಿ ರಸ್ತೆಯ ಕವಳೆವಾಡಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ಬೆಳವಟ್ಟಿಯ ನಿವಾಸಿ, 18 ವರ್ಷದ ರೋಹಿಣಿ ರಾಮಲಿಂಗ ಚೌಗುಲೆ ಎಂದು ಗುರುತಿಸಲಾಗಿದೆ. ಆಕೆಯ ತಾಯಿ ಲಕ್ಷ್ಮೀ ರಾಮಲಿಂಗ ಚೌಗುಲೆ (45) ಮತ್ತು ಚಂದಗಡ ತಾಲೂಕಿನ ತುಡಯೇ …

Read More »