Breaking News

belagavi: ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ

ಸತ್ತಿಗೇರಿ:  ಸವದತ್ತಿ ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಗುಡುಮಕೇರಿ ಗ್ರಾಮದಲ್ಲಿ 70 ಲ ರೂ.ವೆಚ್ಚದಲ್ಲಿ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗುಡಮಕೇರಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ರೈತರಿಗೆ ಅನುಕೂಲವಾಗಲಿದೆ. ಸಮರ್ಪಕ ರಸ್ತೆ ನಿರ್ಮಾಣದ ಮೂಲಕ ಪ್ರತಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗುವುದು …

Read More »

ವಿದ್ಯಾರ್ಜನೆಯ ಕೇಂದ್ರ ಗ್ರಂಥಾಲಯ

ಕಡಬಿ: ಗ್ರಂಥಾಲಯ ವಿದ್ಯಾರ್ಥಿಗಳ ಮತ್ತು ಯುವಜನರ ಭವಿಷ್ಯಕ್ಕೆ ಮಹತ್ವದ ಹೆಜ್ಜೆಯಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಜ್ಞಾನದ ಬೆಳಕಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಗೊರಗುದ್ದಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಅಂದಾಜು 4 ಲ ರೂ. ವೆಚ್ಚದಲ್ಲಿ ನಿರ್ಮಿಸಲಾದ ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಂಥಾಲಯ ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಾ ಅಭ್ಯರ್ಥಿಗಳು, ಓದುಗರಿಗೆ ಉಪಯುಕ್ತವಾಗಲಿದೆ. ಗ್ರಂಥಾಲಯದಲ್ಲಿ ವಿವಿಧ ವಿಷಯಗಳ ಪುಸ್ತಕ, ಪತ್ರಿಕೆ ಹಾಗೂ ಸ್ಪರ್ಧಾತ್ಮಕ …

Read More »

ಹುಬ್ಬಳ್ಳಿ ಪಾದಯಾತ್ರೆಗೆ ಇಂದು ಚಾಲನೆ

ಬೆಟಗೇರಿ: ಗ್ರಾಮದ ಬಸವೇಶ್ವರ ವೃತ್ತದಲ್ಲಿ ಫೆ. .12ರಂದು ಬೆಳಗ್ಗೆ 9ಗಂಟೆಗೆ ಹುಬ್ಬಳ್ಳಿ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಸದ್ಗುರು ಸಿದ್ಧಾರೂಢರ ಸದ್ಭಭಕ್ತರಿಂದ 11ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ ಸಾನ್ನಿಧ್ಯ ವಹಿಸಲಿದ್ದಾರೆ. ಶರಣರಾದ ಮಲ್ಲಪ್ಪ ಪಣದಿ, ಸಿದ್ದಪ್ಪ ಹೊರಟ್ಟಿ, ಬಾಳಪ್ಪ ಕನೋಜಿ ನೇತೃತ್ವವಹಿಸಲಿದ್ದಾರೆ. ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಪ್ರಧಾನ ಸಂಚಾಲಕ ಈಶ್ವರ ಬಳಿಗಾರ ಅಧ್ಯತೆ ವಹಿಸಲಿದ್ದು, ತಾಪಂ …

Read More »

ಬೆಳಗಾವಿಯಲ್ಲಿ ಅನಧಿಕೃತ ಖಾಸಗಿ ಹೂವಿನ ಮಾರುಕಟ್ಟೆ ಅಟ್ಟಹಾಸಕ್ಕೆ ಸರ್ಕಾರಿ ವ್ಯಾಪಾರಿಗಳು ಕಂಗಾಲು ದಂಡು ಮಂಡಳಿ ಮೊರೆ ಹೋಗಿ ನ್ಯಾಯಕ್ಕಾಗಿ ಆಗ್ರಹ..ಕೂಡಲೇ ಮಾರುಕಟ್ಟೆ ಬಂದ್ ಮಾಡಲೂ ಒತ್ತಾಯ!!!

ಕುಂದಾನಗರಿ ಬೆಳಗಾವಿಯಲ್ಲಿ ಹೂವಿನ ವ್ಯಾಪಾರಿಗಳ ನಡುವೆ ಕಿಚ್ಚು ಹತ್ತಿಕೊಂಡಿದೆ. ಎಪಿಎಂಸಿ ಮತ್ತು ತೋಟಗಾರಿಕಾ ಇಲಾಖೆಯ ಅನುಮತಿ ಇಲ್ಲದೆ ತಲೆ ಎತ್ತಿರುವ ಖಾಸಗಿ ಹೂವಿನ ಮಾರುಕಟ್ಟೆ ವಿರುದ್ಧ ಸರ್ಕಾರಿ ಮಾರುಕಟ್ಟೆಯ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಇಂದು ದಂಡು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಭೇಟಿ ಮಾಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. :ಬೆಳಗಾವಿಯ ಭರತೇಶ್ ಶಿಕ್ಷಣ ಸಂಸ್ಥೆಯ ಸಮೀಪ ಯಾವುದೇ ಕಾನೂನುಬದ್ಧ ಅನುಮತಿ ಇಲ್ಲದೆ ಖಾಸಗಿ ಸಗಟು ಹೂವಿನ ಮಾರುಕಟ್ಟೆಯನ್ನು ಆರಂಭಿಸಲಾಗಿದೆ. ಇದರಿಂದಾಗಿ ರೈತರು …

Read More »

ಅದ್ದೂರಿಯಾಗಿ ಜರುಗಿದ ನೂತನ ರಥೋತ್ಸವ,ಕಳಸದ‌ ಪುರಪ್ರವೇಶ ಕಾರ್ಯಕ್ರಮ

ಚಿಕ್ಕೋಡಿ:ನಗರದ ಶ್ರೀ ಮಹಾದೇವ ತ್ರಿಲಿಂಗ ದೇವಾಲಯದ ನೂತನ ರಥೋತ್ಸವ ಮತ್ತು ಕಳಸದ ಪುರ ಪ್ರವೇಶ ಕಾರ್ಯಕ್ರಮವು ಉತ್ಸಾಹದಿಂದ ಜರುಗಿತು. ಶ್ರೀ ಶೈಲ ಜಗದ್ಗುರು ಡಾ! ಚನ್ನಸಿಧ್ದ ರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಹುಕ್ಕೇರಿ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ, ಚಿಕ್ಕೋಡಿಯ ಸಂಪದನಾ ಮಹಾಸ್ವಾಮಿಜಿ, ಕಬ್ಬೂರು ಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯ ಮಹಾಸ್ವಾಮಿಜಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ಅವರ ದಿವ್ಯ ಸಾನಿಧ್ಯದಲ್ಲಿ ಚಿಕ್ಕೋಡಿ ನಗರ ಬಸನಿಲ್ದಾಣದಿಂದ ಮಹಾದೇವ ದೇವಾಲಯಕ್ಕೆ …

Read More »

ಶಾಸಕ ಯತ್ನಾಳಗೆ ಮಂತ್ರಾಲಯ ಪರಿಮಳ ಪ್ರಶಸ್ತಿ

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ 2026ನೇ ಸಾಲಿನ ಮಂತ್ರಾಲಯ ಪರಿಮಳ ಪ್ರಶಸ್ತಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರಿಗೆ ಸಂದಿದೆ. ಸಮಾಜ ಸೇವೆ, ಕಲಾ, ಸಾಹಿತ್ಯ ಮತ್ತು ಇತರೆ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಸಾಮಾಜಿಕ ಜಾಲತಾಣ ಪೋಸ್ಟಿನಲ್ಲಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ಈ …

Read More »

ಡಾ.ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವಿಜಯೇಂದ್ರ ಅವರು ಕೆ ಎಲ್ ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರನ್ನು ಸತ್ಕರಿಸಿದರು. ಭಾರತ ಸರ್ಕಾರದ ಪ್ರತಿಷ್ಠಿತ ನಾಗರಿಕ ಸೇವಾ ಪ್ರಶಸ್ತಿ ಪದ್ಮಶ್ರೀಗೆ ಪುರಸ್ಕೃತರಾದ ಕೋರೆಯವರ ಸೇವೆ ಅಪಾರವಾದದು. ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಅದ್ವಿತೀಯ ಕೊಡುಗೆಯನ್ನು ಸಲ್ಲಿಸಿದ್ದಾರೆ. ಸಮಾಜಮುಖಿಯಾಗಿ ಅವರು ನೀಡಿರುವ ಸೇವೆಗೆ ಬೆಲೆಕಟ್ಟಲಾಗದು. ಅವರಿಗೆ ಪದ್ಮಶ್ರೀ ಗೌರವ ಸಂದಿರುವುದು ಹೆಮ್ಮೆಯನ್ನು ತಂದಿದೆ ಎಂದು ವಿಜಯೇಂದ್ರ ಹೇಳಿದರು. ಈ …

Read More »

1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PWD ಇಲಾಖೆ ಅಧಿಕಾರಿಗಳು

ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಪೊಲೀಸರಿಗೆ ನೀಡಿದ ದೂರು ನೀಡಿದ್ದರು. ಇಂದು ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ …

Read More »

ರಾಯಬಾಗ:ಕೊನೆಗೂ ಬದುಕುಳಿಯದ ವೈಷ್ಣವಿ ; ಅಪಘಾತದಲ್ಲಿ ಬಾಲಕಿ ಸಾವು

ರಾಯಬಾಗ: ತಾಲ್ಲೂಕಿನ ಆಳಗವಾಡಿ ಗ್ರಾಮದ ವೈಷ್ಣವಿ ತೇರದಾಳೆ (9) ರಸ್ತೆ ಅಪಘಾತದಿಂದಾಗಿ ಮಂಗಳವಾರ ಮೃತ ಪಟ್ಟಿದ್ದಾಳೆ. ಶಿಕ್ಷಣ ಸಂಯೋಜಕ ವಿಠಲ ತೇರದಾಳೆ ಅವರ ಸುಪುತ್ರಿ ವೈಷ್ಣವಿ ಇತ್ತೀಚೆಗೆ ಅಳಗವಾಡಿ ಗ್ರಾಮದ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಒಂದು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಕೊನೆಗೆ ಮಂಗಳವಾರ ಬೆಳಗಾವಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ತಂದೆ, ತಾಯಿ, ಸಹೋದರ, ಅಜ್ಜ, ಅಜ್ಜಿಯನ್ನು ಬಿಟ್ಟು ಅಗಲಿದ್ದಾರೆ.

Read More »

ಮಲಪ್ರಭಾ ನದಿಯಲ್ಲಿ ಮೂರು ಬೈಕ್ ಪತ್ತೆ ; ಹೆಚ್ಚಿದ ಅನುಮಾನ

ಬೈಲಹೊಂಗಲ:ತಾಲೂಕಿನ ನಯಾನಗರ ಸಮೀಪದ ಮಲಪ್ರಭಾ ನದಿಯಲ್ಲಿ ಮಂಗಳವಾರ ಬೆಳಿಗ್ಗೆ ಮೂರು ದ್ವಿಚಕ್ರ ವಾಹನಗಳು ಪತ್ತೆಯಾಗಿರುವ ಘಟನೆ ಸಂಶಯಕ್ಕೆ ಕಾರಣವಾಗಿದೆ. ಯಾರೋ ದುಷ್ಕರ್ಮಿಗಳು ಮೂರು ಬೈಕ್‌ಗಳನ್ನು ತಂದು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಸಿಪಿಐ ಪ್ರಮೋದ ಯಲಿಗಾರ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಮಾಜಸೇವಕ ಮಲ್ಲಿಕಾರ್ಜುನ ಗಾಣಿಗೇರ ಹಾಗೂ ಅವರ ಗೆಳೆಯರ ಬಳಗ ನದಿಗೆ ಇಳಿದು ಸುಮಾರು ಎರಡು ಗಂಟೆಗಳ …

Read More »