ಮಂಡ್ಯ: ‘ಶಾಸಕ ಮುನಿರತ್ನ ಅವರು ದಲಿತ ನಿಂದನೆ ಮಾಡಿರುವುದು ಸಾಕ್ಷಿ ಸಮೇತ ಸಿಕ್ಕಿರುವುದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಬಂಧಿಸಿದ್ದು, ಜಾಮೀನು ನೀಡಬಾರದು. ಶಾಸಕ ಸ್ಥಾನದಿಂದಲೂ ವಜಾ ಮಾಡಬೇಕು ಎಂದು ನಗರದ ಎಸ್ಪಿ ಕಚೇರಿ ಸರ್ಕಲ್ ಇನ್ಸ್ಪೆಕ್ಟರ್ ಯಶ್ವಂತ್ ಮೂಲಕ ಭಾನುವಾರ ಕಾಂಗ್ರೆಸ್ ಸಮಿತಿ(ಪರಿಶಿಷ್ಟ ಜಾತಿ ವಿಭಾಗ) ಕಾರ್ಯಕರ್ತರು ಸರ್ಕಾರಕ್ಕೆ ಮನವಿ ನೀಡಿದರು. ದಲಿತ(ಹೊಲೆಯ) ಮತ್ತು ಒಕ್ಕಲಿಗ ಜಾತಿ ಪದಗಳನ್ನು ಬಳಿಸಿ ಮುನಿರತ್ನ …
Read More »ಮಕ್ಕಳಿಗೆ ‘ರಾಷ್ಟ್ರಪ್ರೇಮ’ದ ಪಾಠ
ಮೂಡಲಗಿ: ತಾಲ್ಲೂಕಿನ ಯಾದವಾಡದ ಸುಧೀಂದ್ರ ಇಟ್ನಾಳ ಭಾರತೀಯ ಸೇನೆಯಲ್ಲಿ 34 ವರ್ಷ ಸೇವೆ ಸಲ್ಲಿಸಿ, ಬ್ರಿಗೇಡಿಯರ್ ಆಗಿ ನಿವೃತ್ತಿ ಹೊಂದಿದ್ದಾರೆ. ಆದರೆ, ನಿವೃತ್ತಿ ನಂತರ ಮನೆಯಲ್ಲಿ ಕೈಕಟ್ಟಿ ಕುಳಿತಿಲ್ಲ. ಬದಲಿಗೆ ಸ್ವಯಂ ಪ್ರೇರಣೆಯಿಂದ ಶಾಲೆ-ಕಾಲೇಜುಗಳಿಗೆ ಹೋಗಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ. ರಾಷ್ಟ್ರಾಭಿಮಾನ ಮತ್ತು ಬದುಕಿನಲ್ಲಿ ಶಿಸ್ತು ಮೂಡಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಇದಕ್ಕಾಗಿ ಯಾವುದೇ ಶುಲ್ಕ ಪಡೆಯುತ್ತಿಲ್ಲ. ನಿಸ್ವಾರ್ಥ ಮನೋಭಾವದಿಂದ ಉಚಿತವಾಗಿ ಇಂಥದ್ದೊಂದು ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕರ್ನಾಟಕ ಮಾತ್ರವಲ್ಲದೆ; …
Read More »ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: 145 ಕಿ.ಮೀ ಮಾನವ ಸರಪಳಿ
ಬೆಳಗಾವಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಭಾನುವಾರ 145 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಿಂದ ಯರಗಟ್ಟಿ, ಹಲಕಿ ಕ್ರಾಸ್, ನೇಸರಗಿ, ಸಾಂಬ್ರಾ, ಬೆಳಗಾವಿ, ಹಿರೇಬಾಗೇವಾಡಿ, ಎಂ.ಕೆ.ಹುಬ್ಬಳ್ಳಿ ಮಾರ್ಗವಾಗಿ ಚನ್ನಮ್ಮನ ಕಿತ್ತೂರಿನವರೆಗೆ ಮಾನವ ಸರಪಳಿ ರಚಿಸಲಾಗುತ್ತಿದೆ. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆಯೋಜಿಸಿದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಜಾನಪದ ಕಲಾತಂಡಗಳ ಪ್ರದರ್ಶನ ಮನಸೆಳೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ …
Read More »ಪ್ರಜಾಪ್ರಭುತ್ವ ದಿನಾಚರಣೆ : ವಿಶ್ವದಾಖಲೆಯ `ಮಾನವ ಸರಪಳಿ’ ಕಾರ್ಯಕ್ರಮಕ್ಕೆ `CM’ ಸಿದ್ದರಾಮಯ್ಯ ಚಾಲನೆ
ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಚಾಲನೆ ನೀಡಿದ್ದಾರೆ. ಆನಂತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಗಳ ಸಮಸ್ತ ಜನರು ಸಂವಿಧಾನ ಪೀಠಿಕೆ ಓದಿ ಮಾನವ ಸರಪಳಿ ನಿರ್ಮಿಸುತ್ತಾರೆ. ಆ ಪ್ರದೇಶದಲ್ಲೇ ಗಿಡ ನೆಡುತ್ತಾರೆ. ಹೀಗಾಗಿ ಪ್ರತಿ ಜಿಲ್ಲೆ ತಾಲೂಕುಗಳಲ್ಲೂ …
Read More »ಇಂದು `ರಾಷ್ಟ್ರೀಯ ಇಂಜಿನಿಯರ್ಸ್ ಡೇ’ : ಇತಿಹಾಸ, ಮಹತ್ವ ತಿಳಿಯಿರಿ |
ನವದೆಹಲಿ : ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ರಾಷ್ಟ್ರೀಯ ಇಂಜಿನಿಯರ್ಗಳ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ದಿನವು ಸಮಾಜಕ್ಕೆ ಇಂಜಿನಿಯರ್ಗಳ ಅಮೂಲ್ಯ ಕೊಡುಗೆಗಳನ್ನು ಸ್ಮರಿಸುತ್ತದೆ ಮತ್ತು ಗೌರವಿಸುತ್ತದೆ. ಇದು ಅವರ ವಿಶಿಷ್ಟ ಸಾಮರ್ಥ್ಯಗಳನ್ನು ಗುರುತಿಸುವುದು ಮಾತ್ರವಲ್ಲದೆ ನಾವು ವಾಸಿಸುವ ಜಗತ್ತನ್ನು ರೂಪಿಸುವಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸುತ್ತದೆ. ಈ ದಿನವು ವಿಶೇಷವಾಗಿ ಮಹತ್ವದ್ದಾಗಿದೆ ಏಕೆಂದರೆ ಇದು ಭಾರತದ ಅತ್ಯಂತ ಪ್ರಸಿದ್ಧ ಇಂಜಿನಿಯರ್ ಮತ್ತು ದಾರ್ಶನಿಕರಲ್ಲಿ ಒಬ್ಬರಾದ ಸರ್ …
Read More »ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಚಿಕ್ಕೋಡಿ: ‘ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರದಲ್ಲಿ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಕಾಂಗ್ರೆಸ್ ಸರ್ಕಾರ ಮತೀಯ ಶಕ್ತಿಗಳನ್ನು ಪ್ರೋತ್ಸಾಹಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಮತ್ತೊಂದು ತಾಲಿಬಾನ್, ಬಾಂಗ್ಲಾದೇಶ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೊರಟಿದ್ದಾರೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಕಿಡಿಕಾರಿದರು. ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಕಚೇರಿಯ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡ ಜಿಲ್ಲಾ ಮಟ್ಟದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ …
Read More »ಉತ್ತಮ ಸೇವೆ ಸಲ್ಲಿಸಲು ಸಹಕಾರ ಸಂಘಕ್ಕೆ ಸಲಹೆ: ಪವನ್ ಕತ್ತಿ
ಹುಕ್ಕೇರಿ: ರಾಷ್ಟ್ರೀಕೃತ ಬ್ಯಾಂಕ್ಗಳಿಗಿಂತ ಉತ್ತಮ ಸೇವೆ ನೀಡುವ ಸಂಘ ಸಂಸ್ಥೆಗಳು ದೀರ್ಘಾವಧಿ ಸೇವೆ ಸಲ್ಲಿಸಲು ಸಾಧ್ಯ ಎಂದು ಬೆಲ್ಲದ ಬಾಗೇವಾಡಿ ಅರ್ಬನ್ ಸಹಕಾರ ಬ್ಯಾಂಕ್ ಅಧ್ಯಕ್ಷ ಪವನ್ ಕತ್ತಿ ಹೇಳಿದರು. ಶುಕ್ರವಾರ ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿ ‘ಶಿರಗಾಂವ ಸೌಹಾರ್ದ ಸಹಕಾರ ಸಂಘ’ ಉದ್ಘಾಟಿಸಿ ಮಾತನಾಡಿದರು. ‘ಸಹಕಾರದಿಂದ ಆರ್ಥಿಕ ವ್ಯವಹಾರದ ಜತೆ ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಬೀಜ, ರಸಗೊಬ್ಬರ ಮತ್ತು ಕ್ರಮಿನಾಶಕ ಔಷಧ ಮಾರಾಟ ಪ್ರಾರಂಭಿಸಿರುವುದು ಶ್ಲಾಘನೀಯ’ ಎಂದರು. ಸಹಕಾರ ಸಂಘದ …
Read More »ಹುಕ್ಕೇರಿ: ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್ಡಿಪಿಐನಿಂದ ಪ್ರತಿಭಟನೆ
ಹುಕ್ಕೇರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಲು ಉದ್ಧೇಶಿಸಿರುವ ‘ವಕ್ಫ್ ತಿದ್ದುಪಡಿ ಮಸೂದೆ 2024’ ಅನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಮುಸ್ಲಿಮರು ಸೇರಿ ಎಸ್ಡಿಪಿಐ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಪ್ರಮುಖ ಬೀದಿಗಳಲ್ಲಿ ನೂರಾರು ಸದಸ್ಯರು ಮೆರವಣಿಗೆ ಮೂಲಕ ಪ್ರತಿಭಟಿಸುತ್ತ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪಟ್ಟಣದ ಕೋರ್ಟ್ ಸರ್ಕಲ್ ಬಳಿ ಬಂದು ಕೆಲ ಸಮಯ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರು. ಟ್ರಾಫಿಕ್ ಜಾಂ ಆಗದಂತೆ ಪೊಲೀಸ್ …
Read More »ರಾಜ್ಯ ಸರ್ಕಾರ ದಿವಾಳಿಯಾಗಿದೆ: ಪ್ರಹ್ಲಾದ ಜೋಶಿ
ರಾಜ್ಯ ಸರ್ಕಾರ ದಿವಾಳಿಯಾಗಿದೆ: ಪ್ರಹ್ಲಾದ ಜೋಶಿ ಹುಬ್ಬಳ್ಳಿ: ರೈತರ ಹೆಸರು ಹೇಳಿ ಹಾಲಿನ ದರ ಹಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ, ಇದೊಂದು ದಿವಾಳಿ ಸರ್ಕಾರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ (Prahlada Joshi) ಆಕ್ರೋಶ ವ್ಯಕ್ತಪಡಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ರೈತರಿಗೆ ಹಾಲು ಉತ್ಪಾದನೆ ಪ್ರೋತ್ಸಾಹ ಧನ ಸ್ಥಗಿತಗೊಳಿಸಿತು. ಇದೀಗ ರೈತರ ಹೆಸರಲ್ಲಿ ದರ ಹಚ್ಚಿಸಿ ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿದೆ. ದರ ಹೆಚ್ಚಳದ …
Read More »ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು: ಡಿ.ಕೆ. ಸುರೇಶ್ ಆರೋಪ ಏನು?
ಮುನಿರತ್ನ ನಾಯ್ಡು ವಿರುದ್ಧ ಕ್ಷಣ ಕ್ಷಣಕ್ಕೂ ಆಕ್ರೋಶದ ಬಿರುಗಾಳಿ ಹೆಚ್ಚಾಗುತ್ತಿದ್ದು, ಈ ಮೂಲಕ ಕರ್ನಾಟಕದಲ್ಲಿ ಶಾಸಕ ಮುನಿರತ್ನ ನಾಯ್ಡು ಆಡಿಯೋ ಬಿರುಗಾಳಿ ಎಬ್ಬಿಸುತ್ತಿದೆ. ಇದೇ ಸಮಯದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಕೂಡ ಸಂಚಲನ ಸೃಷ್ಟಿಸುವ ಆರೋಪ ಮಾಡಿದ್ದು, ತಾಯಂದಿರನ್ನೂ ಮಂಚಕ್ಕೆ ಕರೆಯುವ ಮುನಿರತ್ನ ನಾಯ್ಡು? ಎಂಬ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಹಾಗಾದ್ರೆ ಈಗ ಮಾಜಿ ಸಂಸದ ಡಿ.ಕೆ. ಸುರೇಶ್ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ವಿರುದ್ಧ …
Read More »
Laxmi News 24×7