Breaking News

ಜನರ ಸಂಚಾರಕ್ಕೆ ಮುಕ್ತವಾಯ್ತು ಹೈಟೆಕ್ ಹೈವೆ

ದೇವನಹಳ್ಳಿ, ಮಾರ್ಚ್​ 28: ಸಿಲಿಕಾನ್ ಸಿಟಿ ಅಂದರೆ ಇತ್ತೀಚೆಗೆ ಟ್ರಾಪಿಕ್​​ನಿಂದಾಗಿ ವಾಹನ ಸವಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಪೀಕ್ ಅವರ್​​ನಲ್ಲಿ ಪೀಣ್ಯ ಕಡೆಯಿಂದ ಹಾಸನ- ತುಮಕೂರು ಹೆದ್ದಾರಿ(highway)ತಲುಪಲು ಸವಾರರು ಹೈರಣಾಗುತ್ತಿದ್ದರು. ಆದರೆ ಈಗ ಸಿಟಿ ಹೊರ ವಲಯದಲ್ಲಿ ಜನರಿಗೆ ಸಂಚಾರಕ್ಕೆ ಹೈಟೆಕ್ ಹೈವೆ ಮುಕ್ತವಾಗಿದೆ. ಆ ಮೂಲಕ ಹೆದ್ದಾರಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಹಾಡುವ ಜೊತೆಗೆ ಸುರಕ್ಷತೆಗೂ ಒತ್ತು ನೀಡಲಾಗಿದೆ. ಹೊಸಕೋಟೆಯಿಂದ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ದಾಬಸ್ ಪೇಟೆವರೆಗೂ ಹೆದ್ದಾರಿ …

Read More »

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

 ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ   ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ ಎಂದು ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘  ಚುನಾವಣೆಗಾಗಿ ಕಾಂಗ್ರೆಸ್ ಕೇಸರಿ ಶಾಲಿನ ಮೊರೆ ಹೋಗಿದೆ’ ಎಂದು ಹೇಳಿದ್ದಾರೆ. ಬೆಳಗಾವಿ, ಮಾರ್ಚ್​ 28: ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಹೊರಗೆ ಹಾಕಿಸಿಕೊಂಡು ಇಲ್ಲಿ ಬಂದು ಮಾತನಾಡುತ್ತಿದ್ದಾರೆ. ಇದು ನನ್ನ ಕರ್ಮ …

Read More »

ಪಬ್ಲಿಕ್ ನಲ್ಲೇ ರೂಂ ಗೆ ಬೇಗ ಬಾ ಎಂದು ಪತ್ನಿಗೆ ಆರ್ಡರ್ ಮಾಡಿದ ಕ್ರಿಕೆಟರ್ ಜಡೇಜಾ!

ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ರವೀಂದ್ರ ಜಡೇಜಾ ಪತ್ನಿ ರಿವಾಬ ಗುಜರಾತ್ ನ ಜಾಮ್ನಾನಗರದ ಬಿಜೆಪಿ ಶಾಸಕಿ. ಸಾಮಾನ್ಯವಾಗಿ ರಿವಾಬ ಸಾಂಪ್ರದಾಯಿಕ ಡ್ರೆಸ್ ನಲ್ಲೇ ಕಾಣಿಸಿಕೊಳ್ಳುತ್ತಾರೆ. ಆದರೆ ಅಪರೂಪಕ್ಕೆ ಟಿ-ಶರ್ಟ್ ತೊಟ್ಟುಕೊಂಡಿರುವ ಫೋಟೋ ಒಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಪತಿ ರವೀಂದ್ರ ಜಡೇಜಾ ಫೋಟೋ ಹಿನ್ನಲೆಯಲ್ಲಿತ್ತು. ಅವರು ಧರಿಸಿದ್ದ ಟಿ-ಶರ್ಟ್ ನಲ್ಲಿ ‘ಹುಕುಂ’ (ಆರ್ಡರ್) ಎಂದು ಬರೆದಿತ್ತು. …

Read More »

ಒಳ ರಾಜಕೀಯ, ಕಂತ್ರಿ ಕೆಲಸ ಎಂದಿಗೂ ಮಾಡಿಲ್ಲ; ಟಿಕೆಟ್ ತಪ್ಪಿದ್ದಕ್ಕೆ ನಾರಾಯಣಸ್ವಾಮಿ ಅಸಮಾಧಾನ

ಚಿತ್ರದುರ್ಗ: ಲೋಕಸಭಾ ಚುನಾವಣೆ (Loksabha Election) ಟಿಕೆಟ್ ವಂಚಿತ ಹಾಲಿ ಸಂಸದ, ಕೇಂದ್ರ ಸಚಿವ ನಾರಾಯಣಸ್ವಾಮಿ (Union Minister Narayanaswamy), ಸ್ವಪಕ್ಷದವರ ವಿರುದ್ಧವೇ ಅಸಮಾಧಾನ ಹೊರ ಹಾಕಿದ್ದಾರೆ. ನ್ಯೂಸ್ 18 ಜೊತೆ ಮಾತನಾಡಿದ ನಾರಾಯಣಸ್ವಾಮಿ, ಚಿತ್ರದುರ್ಗ ಅಭಿವೃದ್ಧಿ ಹಾಗೂ ಸಮಸ್ಯೆಗಳ ಬಗ್ಗೆ ಬಹಳ ನೋವಿದೆ. ಅಲ್ಲಿನ ರಾಜಕಾರಣಿಗಳು ಕೇಳಿಲ್ಲ ಅಂತಾನೇ ನಾನು ರಾಜಕಾರಣ ಬಿಟ್ಟಿದ್ದೇನೆ. ಅವರು ಎಲ್ಲಾ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ರಾಜಕಾರಣ ಮಾಡ್ತಿದ್ದಾರೆ. ನನ್ನ ನಡವಳಿಕೆ ಬಗ್ಗೆ …

Read More »

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ ಗದಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಿದ್ದು, ಕೆ ಎಸ್ ಆರ‍್ ಟಿ ಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ದಾಖಲೆಗಳಿಲ್ಲದೇ ಯಾವುದೇ ವಸ್ತು, ಹಣ ಸಾಗಿಸುವಂತಿಲ್ಲ. ಕೆ ಎಸ್ …

Read More »

ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ ಹುಣಸಗಿ: ಕುಡಿಯುವ ನೀರಿನ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸಗಿ ಪಟ್ಟಣದಲ್ಲಿ ಮಾ. 27ರ ಬುಧವಾರ ರಾತ್ರಿ ನಡೆದಿದೆ. ನಂದಕುಮಾರ ಕಟ್ಟಿಮನಿ (21)ಕೊಲೆಯಾದ ಯುವಕ. ಕುಡಿಯುವ ನೀರಿಗಾಗಿ ಎರಡು ಕುಟುಂಬಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಘಟನೆ ವಿಕೋಪಕ್ಕೆ ತಿರುಗಿ ನಂದಕುಮಾರ ಕಟ್ಟಿಮನಿ ಎಂಬ ಯುವಕನನ್ನು ಹಣುಮಂತ ಎಂಬಾತ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ. ತೀವ್ರ ಗಾಯಗೊಂಡವನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ …

Read More »

2024: 28 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ – ಜೆಡಿಎಸ್‌; ಇಲ್ಲಿದೆ ಸಂಪೂರ್ಣ ಪಟ್ಟಿ!

ಬೆಂಗಳೂರು, ಮಾರ್ಚ್‌ 28: ಕರ್ನಾಟದಕ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಹಾಗೂ ಜೆಡಿಎಸ್‌ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಕೆ ಆರಂಭಕ್ಕೂ ಮುನ್ನ ಎಲ್ಲ ಕ್ಷೇತ್ರಗಳಿಗೂ ಉಮೇದುವಾರರನ್ನು ಘೋಷಿಸಿವೆ. ಆಡಳಿತರೂಢ ಕಾಂಗ್ರೆಸ್‌ ಇನ್ನೂ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸುವುದು ಬಾಕಿ ಉಳಿದಿದೆ. ಆದರೆ, ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್‌ ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿದೆ. ಇತ್ತ ಬಿಜಪಿ ಮೊದಲ ಪಟ್ಟಿಯಲ್ಲೇ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಣೆ …

Read More »

ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಕುಡಿಯುವ ನೀರಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೊಪ್ಪಳ: ರಾಜ್ಯದಲ್ಲಿ ಒಂದೆಡೆ ತೀವ್ರ ಬರಗಾಲ. ಮತ್ತೊಂದೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕೊಪ್ಪಳದ ಬೀಸರಹಳ್ಳಿಯಲ್ಲಿ ಹಿರಿಯ ನಾಗರಿಕರು ಕುಡಿಯುವ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಕೊಡ ಹಿಡಿದು ಉಪವಾಸ ಸತ್ಯಾಗ್ರಹ ಆರಂಭಿಸಿರುವ ಹಿರಿಯ ನಾಗರಿಕರು, ತಮ್ಮ ಜೀವ ಹೋದರ್ ಚಿಂತೆ ಇಲ್ಲ, ನೀರು ಸಿಗುವವರೆಗೂ ಸತ್ಯಾಗ್ರಹ ನಿಲ್ಲಿಸಲ್ಲ ಎಂದು ಪಟ್ತು ಹಿಡಿದಿದ್ದಾರೆ.   ಬೀಸರಹಳ್ಳಿ ಗ್ರಾಮದಲ್ಲಿ …

Read More »

ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಮಹಿಳಾ ಸಂಸದೆ ಆಯ್ಕೆಯಾಗ್ತಾರಾ? ಇತಿಹಾಸ ಏನ್‌ ಹೇಳುತ್ತೆ?

ಬೆಂಗಳೂರು, ಮಾರ್ಚ್‌ 28: ಕಳೆದ 73 ವರ್ಷಗಳಲ್ಲಿ 17 ಲೋಕಸಭಾ ಚುನಾವಣೆಗಳು ನಡೆದಿದ್ದರೂ ಬೆಂಗಳೂರಿನಲ್ಲಿ ಒಬ್ಬ ಮಹಿಳಾ ಸಂಸದರೂ ಆಯ್ಕೆಯಾಗಿಲ್ಲ. ಈ ಬಾರಿ ಬೆಂಗಳೂರು ವ್ಯಾಪ್ತಿಯ ಎರಡು ಕ್ಷೇತ್ರದಲ್ಲಿ ಪ್ರಬಲ ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಹೌದು, 18ನೇ ಚುನಾವಣೆ ನಡೆಯುತ್ತಿದ್ದು, ಬೆಂಗಳೂರಿನಿಂದ ಈವರೆಗೆ ಒಬ್ಬ ಸಂಸದೆಯೂ ಆಯ್ಕೆಯಾಗಿಲ್ಲ. ಈ ಬಾರಿಯಾದರೂ ಬೆಂಗಳೂರಿನಿಂದ ಸಂಸತ್‌ಗೆ ಕಳಿಸುವ ಮೂಲಕ ಬೆಂಗಳೂರು ಹೊಸ ಇತಿಹಾಸ ಬರೆಯುವುದೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಬೆಂಗಳೂರು …

Read More »

ಎನ್ ಕೌಂಟರ್ ನಲ್ಲಿ ಕೊಲ್ಲುವುದಾಗಿ ಸಚಿವ `ಪ್ರಿಯಾಂಕ್ ಖರ್ಗೆ’ ಗೆ `ಜೀವ ಬೆದರಿಕೆ

ಕಲಬುರಗಿ : ಎಲ್ ಕೌಂಟರ್ ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ನನ್ನ ಕಚೇರಿಗೆ ಕಳುಹಿಸಿದ್ದಾರೆ. ಜಾತಿ ಹೆಸರನ್ನು ಸಹ ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನನ್ನ ಕುಟುಂಬವನ್ನು ನಿಂಧಿಸಿದ್ದಾರೆ ಎಂದು ತಿಳಿಸಿದ್ದಾರೆ. ಕಲಬುರಗಿಯಿಂದ …

Read More »