ಬೆಂಗಳೂರು: ಕಲ್ಲು ಕ್ವಾರಿ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಅಂತ ಕೇಂದ್ರ ಸಚಿವ ಕುಮಾರಸ್ವಾಮಿಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು Xನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು …
Read More »ಬದುಕು ಕಟ್ಟಿಕೊಳ್ಳಲು ಬಂದಿದ್ದ ಯಾದಗಿರಿ ಕಾರ್ಮಿಕ ಕಲ್ಲು ಕ್ವಾರಿ ದುರಂತದಲ್ಲಿ ಸಾವು
ಯಾದಗಿರಿ: ಬದುಕು ಕಟ್ಟಿಕೊಳ್ಳಲು ಹೋಗಿದ್ದ ಯಾದಗಿರಿ ಕಾರ್ಮಿಕನೋರ್ವ ಕಲ್ಲು ಕ್ವಾರಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಡಿಹಾಳ ದೇವಸು ನಾಯಕ ತಾಂಡಾದ ನಿವಾಸಿ ರಾಮು ನಾಯಕ (೪೫ ) ಮೃತ ದುರ್ದೈವಿ. ಮೃತ ಕಾರ್ಮಿಕ 4 ವರ್ಷ ಹಿಂದೆ ಯಾದಗಿರಿಯಿಂದ ಬೆಂಗಳೂರಿಗೆ ವಲಸೆ ಬಂದಿದ್ದರು. ಆದರೆ ಇಂದು (ಜು.2) ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ ಕಾರ್ಮಿಕರ ಜೊತೆ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದಿದ್ದು, ಪರಿಣಾಮ ಸಾವನ್ನಪ್ಪಿದ್ದಾರೆ.
Read More »ಸತೀಶ್ ಕಡತನಮಲೆಗೆ ಶಾಕ್ – ಬಿಜೆಪಿಯಿಂದ 6 ವರ್ಷ ಉಚ್ಚಾಟನೆ
ಬೆಂಗಳೂರು: ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ ಅವರನ್ನು ಭಾರತೀಯ ಜನತಾ ಪಾರ್ಟಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಅವರು ಉಚ್ಚಾಟಿಸಿ ಆದೇಶ ಪ್ರಕಟಿಸಿದ್ದಾರೆ. ಉಚ್ಚಾಟಿಸಿದ್ದು ಯಾಕೆ? ಯಲಹಂಕ ಶಾಸಕ …
Read More »ಕಲ್ಲು ಕ್ವಾರಿ ದುರಂತ – ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಡಿಕೆಶಿ
ಬೆಂಗಳೂರು: ಮಾಗಡಿ ರಸ್ತೆ ಬಳಿ ಕಲ್ಲು ಕ್ವಾರಿ ದುರಂತದಲ್ಲಿ 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಫೋಟದಿಂದಾಗಿ ಈ ದುರಂತ ಸಂಭವಿಸಿಲ್ಲ ಎಂಬ …
Read More »ಚಿಕ್ಕಮಗಳೂರು ಕೋರ್ಟ್ಗೆ ಬಾಂಬ್ ಬೆದರಿಕೆ – ಕಲಾಪ ನಿಲ್ಲಿಸದೇ ತಪಾಸಣೆಗೆ ಸೂಚಿಸಿದ ಜಡ್ಜ್
ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರೋ ಜಿಲ್ಲಾ ನ್ಯಾಯಾಲಯಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಬೆದರಿಕೆಯ ನಡುವೆಯೇ ಕೋರ್ಟ್ ಕಲಾಪ ನಡೆದಿದೆ. ಮಧ್ಯಾಹ್ನ 1:30 ರಿಂದ 3:30ರ ಒಳಗೆ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಆದರೆ ಜಡ್ಜ್ ಕಲಾಪ ನಿಲ್ಲಿಸದೇ ಪೊಲೀಸರಿಗೆ ತಪಾಸಣೆ ನಡೆಸುವಂತೆ ಸೂಚಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ನಡೆಯುತ್ತಿದೆ. ನ್ಯಾಯಾಲಯಕ್ಕೆ ಎಸ್ಪಿ ಜಿತೇಂದ್ರ ದಯಾಮ ಭೇಟಿ ನೀಡಿ, ಪೊಲೀಸ್ …
Read More »ಮೊಟ್ಟೆ ಖರೀದಿ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ – ಮೂವರು ಆರೋಪಿಗಳು ಅರೆಸ್ಟ್, ಇನ್ನೋರ್ವ ಪರಾರಿ
ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಅಮಾಯಕ ವ್ಯಕ್ತಿಯೊಬ್ಬರ ಜೀವವನ್ನು ಬಲಿ ಪಡೆದಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮೊಟ್ಟೆ ಖರೀದಿ ವೇಳೆ ಹಣದ ವಿಚಾರವಾಗಿ ಆರಂಭವಾದ ವಾಗ್ವಾದ, ತಳ್ಳಾಟ ಹಲ್ಲೆಗೆ ತಿರುಗಿ, ಗೂಡಂಗಡಿ ನಡೆಸುತ್ತಿದ್ದ 55 ವರ್ಷದ ಶಿವಾಜಿರಾವ್ ಬೈರೋಜಿ ಸಾವನ್ನಪ್ಪಿದ್ದಾರೆ. ಪ್ರಕರಣದ ಸಂಬಂಧ ನಾಲ್ವರು ಯುವಕರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ವಿಶೇಷ …
Read More »ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಳ್ಳಾರಿ ಕಾಮುಕ ಉಪನ್ಯಾಸಕ ಅರೆಸ್ಟ್
ಬಳ್ಳಾರಿ: ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಿ ಸನ್ಮಾರ್ಗದಲ್ಲಿ ನಡೆಸಬೇಕಾದ ಉಪನ್ಯಾಸಕನೊಬ್ಬನೇ ತನ್ನ ಕಾಮದ ಹಸಿವಿಗಾಗಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ದ್ರೋಹ ಬಗೆದಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ ಎರಡು ಮಕ್ಕಳಿದ್ದರೂ ವಿದ್ಯಾರ್ಥಿನಿಯ ಜೀವನದ ಜೊತೆ ಆಟವಾಡಿದ ಕಾಮುಕ ಉಪನ್ಯಾಸಕನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಳ್ಳಾರಿ ನಗರದ ಖಾಸಗಿ ಕಾಲೇಜೊಂದರ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಬಂಧಿತ ಆರೋಪಿಯಾಗಿದ್ದಾನೆ. ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನೇ ಈತ ಟಾರ್ಗೆಟ್ ಮಾಡಿದ್ದನು. 2025 ರಲ್ಲಿ …
Read More »ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ನಾಲ್ವರ ಬಂಧನ
ನವದೆಹಲಿ: ದೆಹಲಿ–ಎನ್ಸಿಆರ್ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಬೆಂಬಲಿತ ಜಾಲವನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭದೀಪ್ ಸಿಂಗ್, ಗುರ್ಜಂತ್ ಸಿಂಗ್, ಸಜನ್ ಸಿಂಗ್ ಹಾಗೂ ಗಗನ್ಪ್ರೀತ್ ಸಿಂಗ್ ಹೆಸರಿನ ಶಂಕಿತರನ್ನು ಬಂಧಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತರು ಐಎಸ್ಐ ಹ್ಯಾಂಡ್ಲರ್ ಶಹಜಾದ್ ಭಟ್ ಹಾಗೂ ಆತನ ಸಹಚರರ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಗುರುತು ಪತ್ತೆಯಾಗದಂತೆ …
Read More »ಸಿಕ್ಕಸಿಕ್ಕವರ ಮೇಲೆ ಹುಚ್ಚುನಾಯಿ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿಗೆ ಗಾಯ
ಹಾಸನ: ಸಿಕ್ಕ ಸಿಕ್ಕವರ ಮೇಲೆ ಹುಚ್ಚುನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಅರಕಲಗೂಡಿನ ಉಳ್ಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಚ್ಚುನಾಯಿಯ ದಾಳಿಯಿಂದ ಇಬ್ಬರು ಮಕ್ಕಳು ಸೇರಿ 8 ಮಂದಿ ಗಾಯಗೊಂಡಿದ್ದಾರೆ. ರಾಜು, ರಘು, ಅಂಜಲಿ, ಮಂಜಯ್ಯ ಹಾಗೂ ಇಬ್ಬರು ಮಕ್ಕಳು ಸೇರಿದಂತೆ 8 ಜನರಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದೆ. ಗಾಯಾಳುಗಳಿಗೆ ಕೊಣನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಚ್ಚುನಾಯಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. …
Read More »ರಾಮಮಂದಿರ ದೇಣಿಗೆ ಕಳ್ಳತನದಲ್ಲಿ ಟಿನ್ನು ಯಾದವ್ ಕಿಂಗ್ಪಿನ್: ಚಂಪತ್ ರಾಯ್ ಬಹಿರಂಗ
ಲಕ್ನೋ: ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಪ್ರತಿದಿನ ಹೊಸ ಹೊಸ ವಿಷಯಗಳು ಬಹಿರಂಗವಾಗುತ್ತಿವೆ. ಕಾಣಿಕೆ ಕಳ್ಳತನದಲ್ಲಿ ಟಿನ್ನು ಯಾದವ್ ಪ್ರಮುಖ ಪಾತ್ರಧಾರಿ ಎಂದು ಪೊಲೀಸರ ವಿಚಾರಣೆಯಲ್ಲಿ ಚಂಪತ್ ರಾಯ್ ಗಂಭೀರ ಆರೋಪ ಮಾಡಿದ್ದಾರೆ. ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಕೂಡ ಚಂಪತ್ ರಾಯ್ ಚಾಲಕನಾಗಿದ್ದ. ಇಡೀ ಹಗರಣದ ಹಿಂದಿನ ಪ್ರಮುಖ ವ್ಯಕ್ತಿ ಟಿನ್ನು ಯಾದವ್ ಎಂದು ಚಂಪತ್ ರಾಯ್ ಒಪ್ಪಿಕೊಂಡಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ. ಟಿನ್ನು ಯಾದವ್ …
Read More »
Laxmi News 24×7