Breaking News

45 ಕೋಟಿ ಮೌಲ್ಯದ 4 ಸಾವಿರ ಕೆ.ಜಿ ಡ್ರಗ್ಸ್ ನಾಶ, ದಂಧೆಯಲ್ಲಿದ್ದ 200ಕ್ಕೂ ಹೆಚ್ಚು ವಿದೇಶಿಗರ ಗಡಿಪಾರು: ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಕಳೆದೊಂದು ವರ್ಷದಲ್ಲಿ 4 ಸಾವಿರ ಕೆ.ಜಿ. ಗಾಂಜಾ ಸೇರಿದಂತೆ 45 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ. ವಿದೇಶಿ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗುತ್ತಿದ್ದು, 200ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್​ ತಿಳಿಸಿದರು. ಬೆಂಗಳೂರು ನಗರ ಪೊಲೀಸ್ ವತಿಯಿಂದ‌ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಕ್ಕೆ ಚಾಲನೆ ನೀಡಿ …

Read More »

ಸಿದ್ದರಾಮಯ್ಯನವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ: ಡಿಸಿಎಂ

ಬೆಂಗಳೂರು: ”ಸಿಎಂ‌ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ನಾನು ಅದರ ಬಗ್ಗೆ ಏನೂ ಕೇಳಿಲ್ಲ. ನಮಗೆ ಹೈಕಮಾಂಡ್​ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ಬ್ಲೋ ಅಪ್ ಮಾಡುತ್ತಿದ್ದಾರೆ” ಎಂದರು. …

Read More »

4 ಹುಲಿಗಳ ಅಸಹಜ ಸಾವು

4 ಹುಲಿಗಳ ಅಸಹಜ ಸಾವು ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿವೆ. ಹಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್​ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 …

Read More »

ಸಮಾಧಾನ, ಅಸಮಾಧಾನ ಅಂತಾ ನಂದೇನೂ ಇಲ್ಲ:ಬಿ.ಆರ್.ಪಾಟೀಲ್

ಬೆಂಗಳೂರು : ಸಮಾಧಾನ, ಅಸಮಾಧಾನ ನಂದೇನೂ ಇಲ್ಲ. ನಡೆದಿದ್ದನ್ನು ಅವರಿಗೆ ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಶಾಸಕ ಬಿ. ಆರ್. ಪಾಟೀಲ್ ತಿಳಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಏನೆಲ್ಲ ಹೇಳಬೇಕಾಗಿತ್ತೋ ಹೇಳಿದ್ದೇನೆ. ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಎಲ್ಲ ವಿವರವಾಗಿ ಹೇಳಿದ್ದೇನೆ ಎಂದಿದ್ದಾರೆ. ಅವರು ಸಮಾಧಾನದಿಂದ ನಮ್ಮ ವಿಚಾರಗಳನ್ನು ಕೇಳಿದ್ದಾರೆ. …

Read More »

ವರ್ಷಾಂತ್ಯಕ್ಕೆ ಭಾರಿ ಬದಲಾವಣೆ ಆಗಲ್ಲ, ಕೆಲ ಸಚಿವರ ಬದಲಾವಣೆಯಾಗಲಿದೆ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ”ವರ್ಷಾಂತ್ಯಕ್ಕೆ ಭಾರೀ ಬದಲಾವಣೆ ಆಗುವುದಿಲ್ಲ, ಸಣ್ಣಪುಟ್ಟ ಬದಲಾವಣೆಗಳಾಗಲಿವೆ” ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ವರ್ಷಾಂತ್ಯಕ್ಕೆ ಕಾಂಗ್ರೆಸ್​​ನಲ್ಲಿ ಭಾರೀ ಬದಲಾವಣೆ ಆಗಲಿದೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಣ್ಣಪುಟ್ಟ ಬದಲಾವಣೆಗಳಾಗಲಿದೆ. ಹಾಗಂತ ಭಾರಿ ಬದಲಾವಣೆ ಯಾವುದೂ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ” ಎಂದರು.‌ ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರವಾಗಿ …

Read More »

ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್‌ನಿಂದಲ್ಲೇ 53 ಕೋಟಿ ದರೋಡೆ, ಮೂವರು ಬಂಧನ.. ಬ್ಯಾಂಕ್‌ನಲ್ಲಿ ಮಾಟಮಂತ್ರ ನಡೆಸಿ ದರೋಡೆ.. ಉಳಿದ ಆರೋಪಿಗಳು ಎಸ್ಕೇಪ್..

ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಮ್ಯಾನೇಜರ್‌ನಿಂದಲ್ಲೇ 53 ಕೋಟಿ ದರೋಡೆ, ಮೂವರು ಬಂಧನ.. ಬ್ಯಾಂಕ್‌ನಲ್ಲಿ ಮಾಟಮಂತ್ರ ನಡೆಸಿ ದರೋಡೆ.. ಉಳಿದ ಆರೋಪಿಗಳು ಎಸ್ಕೇಪ್.. ಕಳೆದ ತಿಂಗಳು 25 ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ನಡೆದಿದ್ದು ಕೋಟ್ಯಾಂತರ ಮೌಲ್ಯದ ದರೋಡೆ ಪ್ರಕರಣವನ್ನು ಭೇದಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ …

Read More »

ಬಾಹ್ಯಾಕಾಶದಲ್ಲಿ ಹೆಸರು ಕಾಳು, ಮೆಂತ್ಯೆ ಕೃಷಿ ಪ್ರಯೋಗ; ಧಾರವಾಡದ ಕೊಡುಗೆ ಶ್ಲಾಘಿಸಿದ ಜೋಷಿ

ಬಾಹ್ಯಾಕಾಶದಲ್ಲಿ ಹೆಸರು ಕಾಳು, ಮೆಂತ್ಯೆ ಕೃಷಿ ಪ್ರಯೋಗ; ಧಾರವಾಡದ ಕೊಡುಗೆ ಶ್ಲಾಘಿಸಿದ ಜೋಷಿ ನವದೆಹಲಿ/ಹುಬ್ಬಳ್ಳಿ: ಹೆಸರು ಕಾಳು ಮತ್ತು ಮೆಂತ್ಯೆ ಬೀಜಗಳನ್ನು ‘ಆಕ್ಸಿಯಂ-4’ ಮಿಷನ್‌ ಯೋಜನೆಗಾಗಿ ಬಾಹ್ಯಾಕಾಶ ನಿಲ್ದಾಣಕ್ಕೆ ಕಳುಹಿಸಲಾಗಿದ್ದು, ಬಾಹ್ಯಾಕಾಶ ಕೃಷಿ ಮತ್ತು ಗಗನಯಾತ್ರಿಗಳ ಪೋಷಣೆಗೆ ಕೈಗೊಂಡಿರುವ ಮಹತ್ತರ ಅಧ್ಯಯನಕ್ಕೆ ಧಾರವಾಡದ ಕೊಡುಗೆ ಅನನ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ತಿಳಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಸುದೀರ್ಘ 41 ವರ್ಷಗಳ ಬಳಿಕ ಭಾರತೀಯ ಗಗನಯಾನಿ ಶುಭಾಂಶು …

Read More »

ಪಂಢರಪುರದತ್ತ ಹೊರಟಿರುವ ಪಾದಯಾತ್ರಿಗಳು

ಬೆಳಗಾವಿ: ವಾರಕರಿಗಳ ನೇತೃತ್ವದಲ್ಲಿ ತಾಳ ಹಾಕುತ್ತಾ, ತಂಬೂರಿ-ಭಜನೆ ಬಾರಿಸುತ್ತಾ, ವೀಣೆ ನುಡಿಸುತ್ತಾ, ಅಭಂಗಗಳ ಮೂಲಕ ವಿಠ್ಠಲನ ನಾಮ ಸ್ಮರಿಸುತ್ತಾ, ತಲೆಯ ಮೇಲೆ ತುಳಸಿ ಹೊತ್ತು, ಕೈಯಲ್ಲಿ ವಿಠಲನ ಧ್ವಜ ಹಿಡಿದು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪಂಢರಪುರದತ್ತ ಭಕ್ತರ ಪಾದಯಾತ್ರೆ ಹೊರಟಿದೆ. ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ಭಕ್ತವರ್ಗ ತಮ್ಮ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ. ಹೌದು, ಈ ಎಲ್ಲ ದೃಶ್ಯ ಕಂಡು ಬಂದಿದ್ದು, ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ. ಬೆಳಗಾವಿ ತಾಲೂಕಿನ ಸುಳಗಾ (ಯಳ್ಳೂರ) …

Read More »

ಗರ್ಭಿಣಿಯರಿಗೆ ಉಡಿ ತುಂಬಿ, ಆರತಿ ಬೆಳಗಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು…

ಗರ್ಭಿಣಿಯರಿಗೆ ಉಡಿ ತುಂಬಿ, ಆರತಿ ಬೆಳಗಿದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು…. ಪೋಷಣ ಅಭಿಯಾನದ ಸಮುದಾಯ ಆಧಾರಿತ ಚಟುವಟಿಕೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ರಾಜೀವಗಾಂಧಿ ನಗರದ ಸಮುದಾಯ ಭವನದಲ್ಲಿ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಗರ್ಭಿಣಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಯವರು ಗರ್ಭಿಣಿ ಮಹಿಳೆಯರಿಗೆ ಉಡಿತುಂಬಿ ಶುಭ …

Read More »

ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ; ಶಶಿಧರ ಕುರೇರ್

ಮಾದಕ ವಸ್ತು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಿ; ಶಶಿಧರ ಕುರೇರ್ ಇಂದು ಇಂಟರ್’ನ್ಯಾಷನಲ್ ಡ್ರಗ್ ಅಬ್ಯೂಸ್ ಡೇ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯಾದ್ಯಂತ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು. ಇಂದು ಬಾಗಲಕೋಟೆ ಜಿಲ್ಲೆಯಾದ್ಯಂತ ವಿಶ್ವ ಮಾದಕ ವಸ್ತು ವಿರೋಧಿ ದಿನದ ಹಿನ್ನೆಲೆ ಜಿಲ್ಲೆಯ ಒಟ್ಟು 4 ಲಕ್ಷ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಲಾಯಿತು. ಈ ವೇಳೆ 1600 ಪೊಲೀಸ್, ಶಿಕ್ಷಣ ಇಲಾಖೆ, ಅರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಜ್ಞಾ …

Read More »