ಬೆಂಗಳೂರು: ಆನ್ಲೈನ್ ಮತ್ತು ಆಫ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಸಮನ್ಸ್ ಜಾರಿಗೊಳಿಸದೆ, ನಿಯಮಗಳನ್ನು ಉಲ್ಲಂಘಿಸಿ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ. ಚಿತ್ರದುರ್ಗದ ಶಾಸಕರಾದ ತಮ್ಮ ಪತಿ ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ಕ್ರಮ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ …
Read More »98ರ ಮಂಗಳೂರು ಕೋಮುಗಲಭೆ: 26 ವರ್ಷದ ಬಳಿಕ ಇಬ್ಬರ ಬಂಧನ
98ರ ಮಂಗಳೂರು ಕೋಮುಗಲಭೆ: 26 ವರ್ಷದ ಬಳಿಕ ಇಬ್ಬರ ಬಂಧನ ಮಂಗಳೂರು(ದಕ್ಷಿಣ ಕನ್ನಡ): 1998ಲ್ಲಿ ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು 26 ವರ್ಷಗಳ ಬಳಿಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಬಂಧಿತರು. ಲೀಲಾಧರ್ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದನು. ಚಂದ್ರಹಾಸ್ ಕೇಶವ ಶೆಟ್ಟಿ ದುಬೈನಿಂದ ಊರಿಗೆ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 30ರಂದು ಬಂಧಿಸಲಾಗಿದೆ. …
Read More »ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ಇಂದಿನ ಸಂಪುಟ ಸಭೆಯಲ್ಲಿ ಭೂಸ್ವಾಧೀನ ದರ ನಿಗದಿ
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತಿದೆ. ಈ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ …
Read More »ಚಾಮುಂಡಿ ಬೆಟ್ಟ ಸುತ್ತಮುತ್ತ ಚಿರತೆ ಓಡಾಟ
ಮೈಸೂರು: ಚಾಮುಂಡಿ ಬೆಟ್ಟದ ದೇವಿಕೆರೆ ಕಟ್ಟೆ ಹಾಗೂ ತಾವರೆಕಟ್ಟೆಯ ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದು, ನಿವಾಸಿಗಳು ಹಾಗೂ ಭಕ್ತರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ, ಚಾಮುಂಡಿ ಬೆಟ್ಟ ಗ್ರಾಮ ಹಾಗೂ ಇಲ್ಲಿನ ನಾಗರಿಕ ಬಂಧುಗಳಿಗೆ ಈ ಮೂಲಕ ತಿಳಿಸುವುದೇನೆಂದರೆ, ಇತ್ತೀಚೆಗೆ ಚಾಮುಂಡಿ ಬೆಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಚಲನವಲನಗಳು ಕಂಡುಬಂದಿರುವುದಾಗಿ ವರದಿಯಾಗಿದೆ. ಈ ವಿಷಯದ ಕುರಿತು ಅರಣ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು …
Read More »ಹುಕ್ಕೇರಿ ತಾಲೂಕಿನ ಯಾದಗೂಡ, ಅಮ್ಮಣಗಿ ಮತ್ತು ಎಲಿಮುನ್ನೋಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಸಭೆ
ಹುಕ್ಕೇರಿ ತಾಲೂಕಿನ ಯಾದಗೂಡ, ಅಮ್ಮಣಗಿ ಮತ್ತು ಎಲಿಮುನ್ನೋಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಸಭೆಗಳಲ್ಲಿ ಪಾಲ್ಗೊಂಡು, ಮುಂಬರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಶ್ರೀ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ.
Read More »ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಮಧ್ಯರಾತ್ರಿ ಕಳ್ಳತನ
ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಮಧ್ಯರಾತ್ರಿ ಕಳ್ಳತನ ನಡೆದ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ದೇವಸ್ಥಾನದ ದಾನಪೆಟ್ಟಿಗೆ ಒಡೆದು ನಗದು ಹಣ ಹಾಗೂ ದೇವಿಯ ಆಭರಣಗಳನ್ನು ಅಪರಿಚಿತ ಕಳ್ಳರು ಕದಿಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಪ್ರಕಾರ, ಭಾನುವಾರ ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ ಈ ಕಳ್ಳತನ ನಡೆದಿದೆ. ದೇವಸ್ಥಾನ ಆವರಣದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರು ಸ್ಪಷ್ಟವಾಗಿ ಸೆರೆಯಾಗಿದ್ದಾರೆ. ಬೆಳಿಗ್ಗೆ …
Read More »ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಬುಧವಾರದಂದು* *ಗೋಕಾಕದಲ್ಲಿ ಮೂಡಲಗಿ- ಗೋಕಾಕ ತಾಲೂಕಿನ ಪಿಕೆಪಿಎಸ್ ಅಧ್ಯಕ್ಷರು ಸದಸ್ಯರುಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ-* ನಾನು ಮತ್ತು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಯವರು ಸೇರಿಕೊಂಡು ಇದೇ ತಿಂಗಳ ಅಂತ್ಯದೊಳಗೆ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. …
Read More »ಸಿಸಿಬಿ ಪೊಲೀಸ್ ಸಿಬ್ಬಂದಿಯ ಸೋಗಿನಲ್ಲಿ ಬಾಂಗ್ಲಾ ಪ್ರಜೆಗಳನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಬಾಂಗ್ಲಾ ಪ್ರಜೆಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದಲ್ಲಿ ಬಂಧಿಸಲಾಗಿದೆ. ರಾಜ್ಯ ಜನ ಸದ್ಭಾವನಾ ಸಂಘಟನೆಯ ಸದಸ್ಯರು ನೀಡಿದ್ದ ದೂರಿನ ಅನ್ವಯ ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗದ ಕಾನ್ಸ್ಟೇಬಲ್ ಪ್ರಶಾಂತ್ ನಾವಿ ಹಾಗೂ ಮತ್ತೋರ್ವ ಖಾಸಗಿ ವ್ಯಕ್ತಿ ನಾಸೀರ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಆಂತರಿಕ ಭದ್ರತಾ ವಿಭಾಗದಲ್ಲಿ …
Read More »‘ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ’
ಬೆಂಗಳೂರು: ಕೋಮು ಭಾವನೆಗಳನ್ನು ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದರು. ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟ ಹಾಗೂ ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಮದ್ದೂರಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದ ಬಗ್ಗೆ ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ …
Read More »ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು
ಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ವಿಚಿತ್ರ ಎಂದರೆ ವೃಷಭ ರೂಪಿ ಶನೇಶ್ವರ ಮೂಕಪ್ಪಸ್ವಾಮಿ ಈ ನಿಧಿಗಳ್ಳರನ್ನು ಪತ್ತೆ ಮಾಡಿದೆ ಎಂದು ಗ್ರಾಮಸ್ಥರು ಹೇಳಿದ್ದು, ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಹಾನಗಲ್ ತಾಲೂಕು ಮಲಗುಂದ ಗ್ರಾಮದ ಹೊರವಲಯದಲ್ಲಿ ಕೋಣಕಲ್ಲು ಭರಮಪ್ಪ ದೇವರ ಕಲ್ಲು ಇತ್ತು. ಅದರ ಕೆಳಗೆ ಸಾಕಷ್ಟು ನಿಧಿ ಇದೆ ಎಂಬ ಆಸೆಗೆ …
Read More »
Laxmi News 24×7