Breaking News

ಮೂನ್ನೂರು ರೂಪಾಯಿ ಹಣಕ್ಕಾಗಿ ಕಲ್ಲು ಎತ್ತಿ ಹಾಕಿ ಅಪರಿಚಿತ ವ್ಯಕ್ತಿಯ ಕೊಲೆ

ಬಳ್ಳಾರಿ: ಕುಡಿದ ಮತ್ತಿನಲ್ಲಿ ಹಣ ನೀಡಲಿಲ್ಲ ಎನ್ನುವ ಕಾರಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬನ ಬಳಿ ಇದ್ದ ಮೂನ್ನೂರು ರೂಪಾಯಿ ಕಸಿದುಕೊಂಡು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ಶುಕ್ರವಾರ (ಸೆ. 5ರಂದು) ನಡೆದಿದೆ. ಸೋಮವಾರ ಆರೋಪಿಗಳನ್ನು ಬಂಧಿಸಲಾಗಿದ್ದು, ಮೃತಪಟ್ಟ ವ್ಯಕ್ತಿ ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಇನ್ನೂ ತಡರಾತ್ರಿ ನಡೆದ ಕಾರಣ ಆರಂಭದಲ್ಲಿ ಯಾರಿಗೂ ಗೊತ್ತಾಗಲಿಲ್ಲ. ಯಾರೋ ಗಿಡದ ಪೊದೆಯಲ್ಲಿ ಮಲಗಿಕೊಂಡಿದ್ಧಾರೆ ಎಂದು ನೋಡಿಲ್ಲ. ಮಧ್ಯಾಹ್ನದ ನಂತರ ಸ್ಥಳೀಯರೊಬ್ಬರು ಪೊಲೀಸರಿಗೆ …

Read More »

ದೇವಾಲಯದ ಸುತ್ತ ಮಾಂಸಾಹಾರ ನಿಷೇಧ ನೋಟಿಸ್‌ ವಾಪಸ್​: ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್‌ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್‌ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್‌ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ …

Read More »

ಅಂಬಾವಿಲಾಸ ಅರಮನೆಯ ಚಿನ್ನದ ಹೊಳಪಿನ ದೀಪಾಲಂಕಾರ ಅದ್ಭುತ

ಮೈಸೂರು: ಮೈಸೂರಿನ ಪ್ರಮುಖ ಆಕರ್ಷಣೆ ಅಂಬಾವಿಲಾಸ ಅರಮನೆ. ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಈ ಅಂಬಾವಿಲಾಸ ಅರಮನೆಯ ಚಿನ್ನದ ಹೊಳಪಿನ ದೀಪಾಲಂಕಾರದ ಇತಿಹಾಸ ಏನು? ಎಂಬ ಕುತೂಹಲಕಾರಿ ಅಂಶಗಳನ್ನು ಒಳಗೊಂಡ ವಿಶೇಷ ವರದಿ ಇಲ್ಲಿದೆ. ಮೈಸೂರು ಅರಮನೆಯ ಚಿನ್ನದ ಹೊಳಪಿನ ದೀಪಾಲಂಕಾರ ನೋಡುವುದೇ ಒಂದು ಖುಷಿ. ಮೈಸೂರು ಅರಮನೆಯ ದೀಪಾಲಂಕಾರಕ್ಕೆ ಒಟ್ಟು 96,700 ವಿಶೇಷ ಬಲ್ಬ್​ಗಳನ್ನು ಅಳವಡಿಸಲಾಗುತ್ತದೆ. ವಿಶೇಷವೆಂದರೆ ಹಳೆಯ ಮಾದರಿಯ ಬುರುಡೆಯ ಆಕಾರದ ಎಂ ಆಕೃತಿಯ ತಂತಿಯನ್ನೊಳಗೊಂಡ 15 ವ್ಯಾಟ್ ಸಾಮರ್ಥ್ಯದ …

Read More »

14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ

14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ ನಿಪ್ಪಾಣಿ ಮೂಲದ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಗೆ 30 ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯ ಹೆಸರು ಆಕಾಶ ಅಲಿಯಾಸ …

Read More »

ಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆತನುಜ್ ಸಿಂಗ್ ಮತ್ತು ವೇದಾ ಖಾನೋಲ್ಕರ್’ಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಪ್ರಶಸ್ತಿಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆ

ಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆತನುಜ್ ಸಿಂಗ್ ಮತ್ತು ವೇದಾ ಖಾನೋಲ್ಕರ್’ಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಪ್ರಶಸ್ತಿಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆ ತನುಜ್ ಸಿಂಗ್ ಮತ್ತು ವೇದಾ ಖಾನೋಲ್ಕರ್’ಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಪ್ರಶಸ್ತಿಯುವಜನ ಸೇವಾ ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜನೆ ಯುವಜನ ಸೇವಾ ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬೆಳಗಾವಿ ಗೋವಾವೇಸ್’ನ ಮಹಾನಗರ ಪಾಲಿಕೆ ಈಜುಕೊಳದಲ್ಲಿ ಆಯೋಜಿಸಲಾದ …

Read More »

ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ

ನಿಪ್ಪಾಣಿಯ ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ತವಂದಿ ಘಾಟ್‌ನಲ್ಲಿ ಕಂಟೇನರ್ ವಾಹನ ಪಲ್ಟಿಯಾದ ಪರಿಣಾಮ ಅದೃಷ್ಟವಶಾತ ಯಾವುದೇ ಸಾವುನೋವು ಸಂಭವಿಸಿಲ್ಲ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿಯಾಗಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಕಂಟೇನರ್ ಚಾಲಕ ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ ವಾಹನ ಕಂದಕಕ್ಕೆ ಬಿದ್ದಿದೆ.

Read More »

ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ… ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿದೆ. ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದ್ದು, ವಸತಿ ಇಲಾಖೆಯಿಂದ ರಾಜ್ಯದಲ್ಲಿ ಕೈಗೊಂಡಿರುವ ಕೆಲಸಗಳು ಹಾಗೂ ಮುಂದೆ ಕೈಗೊಳ್ಳಲ್ಲಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಹಲವಾರು …

Read More »

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. ಜೊತೆಗೆ 1.10 ಕೋಟಿ ವಿದ್ಯುತ್ ಬಿಲ್ ಸಹ ಕಟ್ಟಿಲ್ಲ. ಅಲ್ಲದೇ ಇಲ್ಲಿನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು 11 ಕೋಟಿ ಅನುದಾನಕ್ಕಾಗಿ ಕಳುಹಿಸಿದ್ದ ಪ್ರಸ್ತಾವನೆಗೂ ರಾಜ್ಯ ಸರ್ಕಾರ ಸೊಪ್ಪು ಹಾಕದೇ ಇರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.   ಹೌದು, ಒಂದೆಡೆ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳ ಸ್ಥಳಾಂತರ ಆಗಿಲ್ಲ. ಮತ್ತೊಂದೆಡೆ …

Read More »

ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ; ತಾಯಿ, ಓರ್ವ ಮಗ ಪಾರು

ಬೀದರ್​: ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರ ಕಾಲುವೆ ಬಳಿ ಮಂಗಳವಾರ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮರೂರ ಹತ್ತಿರ ಹಾದುಹೋಗುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಬದುಕುಳಿದಿದ್ದಾರೆ. ಬೀದರ್​​ ನಗರದ ಮೈಲೂರು ಬಡಾವಣೆಯ ಶಿವಮೂರ್ತಿ ಮಾರುತಿ (45), ಮತ್ತು ಅವರ 9 ವರ್ಷ, 7 ವರ್ಷ ಹಾಗೂ ಏಳು ತಿಂಗಳು ವಯಸ್ಸಿನ ಮಕ್ಕಳು ದುರಂತ ಅಂತ್ಯ ಕಂಡಿದ್ದಾರೆ. ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮತ್ತು …

Read More »

ನೇಪಾಳಕ್ಕೆ ಪ್ರವಾಸ ಹೋದ 39 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ CSಗೆ ಸಿಎಂ ಸೂಚನೆ

ಬೆಂಗಳೂರು: ಹಿಂಸಾಚಾರಪೀಡಿತ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ(ಸಿಎಸ್) ಶಾಲಿನಿ ರಜನೀಶ್ ಅವರಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ‌ ಸೂಚನೆ ನೀಡಿದ್ದಾರೆ. ನೇಪಾಳಕ್ಕೆ ಪ್ರವಾಸ ಹೋಗಿರುವ 39 ಮಂದಿ ಕನ್ನಡಿಗರು ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಮಾಹಿತಿ ಇದೆ. ಸಾಮಾಜಿಕ ಜಾಲತಾಣಗಳ ನಿಷೇಧ, ಭ್ರಷ್ಟಾಚಾರ ಮತ್ತು ಹಗರಣಗಳ ವಿರುದ್ಧ ನೇಪಾಳದಲ್ಲಿ ಯುವಜನರು …

Read More »