Breaking News

ಇಳಕಲ್ | ಶೌಚಾಲಯ ನಿರ್ಮಾಣಕ್ಕೆ ಆಗ್ರಹ: ಚೊಂಬು ಹಿಡಿದು ಪ್ರತಿಭಟನೆ

ಇಳಕಲ್: ಇಲ್ಲಿಯ ಗೌಳೇರಗುಡಿ (ನವನಗರ ) ಯಲ್ಲಿ ವೈಯಕ್ತಿಕ ಶೌಚಾಲಯ ಹಾಗೂ ಸಾರ್ವಜನಿಕ ಶೌಚಾಲಯಗಳಿಲ್ಲ. ಹೀಗಾಗಿ ಬಹಿರ್ದೆಸೆಗೆ ತೊಂದರೆಯಾಗಿದೆ ಎಂದು ಪ್ಲಾಸ್ಟಿಕ್‌ ಚೊಂಬು (ತಂಬಿಗೆ) ಹಿಡಿದು ಮಹಿಳೆಯರು ಮಂಗಳವಾರ ಪ್ರತಿಭಟನೆ ಮಾಡಿದರು. ಈವರೆಗೆ ನವನಗರದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ಮಹಿಳೆಯರು ಬಹಿರ್ದೆಸೆಗೆ ಹೋಗುತ್ತಿದ್ದರು. ಈಗ ಆ ಸ್ಥಳದ ಮಾಲೀಕ ಅಲ್ಲಿ ನಿವೇಶನಗಳನ್ನು ಮಾಡಿ, ಬೇಲಿ ಹಾಕಿದ್ದರಿಂದ ಬಹಿರ್ದೆಸೆಗೆ ಹೋಗಲು ತೊಂದರೆಯಾಗಿದೆ. ಒಳಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ವೈಯಕ್ತಿಕ ಶೌಚಾಲಯ ಕಟ್ಟಿಸಿಕೊಳ್ಳಲು …

Read More »

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ರಾಜ್ಯದಲ್ಲಿಬರ, ನೆರೆ ಹಾಗೂ ಇತರೆ ನೈಸರ್ಗಿಕ ವಿಕೋಪಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಿ ನಿರ್ಣಯ ಕೈಗೊಳ್ಳಲು ರಚನೆಯಾಗಿರುವ ಸಚಿವ ಸಂಪುಟ ಉಪಸಮಿತಿಯ ಸಭೆ ಸೋಮವಾರ ವಿಧಾನಸೌಧದಲ್ಲಿ ನಡೆಯಿತು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಬರದ ಹಿನ್ನೆಲೆಯಲ್ಲಿ …

Read More »

ಗಜೇಂದ್ರಗಡ ಬೆಟ್ಟಗಳ ಮೇಲಿದೆ ಮಿನಿ ಮರುಭೂಮಿ?

ಗದಗ: ಬೆಂಗಳೂರಿನ ಇಬ್ಬರು ಸೇರಿದಂತೆ ಪ್ರಕೃತಿ ಪ್ರೇಮಿಗಳ ತಂಡವೊಂದು ಇತ್ತೀಚೆಗೆ ಗಜೇಂದ್ರಗಡದ ಗುಡ್ಡದ ಮೇಲಿನ ಸಣ್ಣ ಮರುಭೂಮಿಗೆ ತೆರಳಿತ್ತು. 30 ಎಕರೆ ಪ್ರದೇಶದಲ್ಲಿ ಹರಡಿರುವ ಈ ಮರುಭೂಮಿಯ ಕುರಿತು ಅಧ್ಯಯನ ನಡೆಸಲು ಈ ತಂಡ ಭೂವಿಜ್ಞಾನಿಗಳು ಮತ್ತು ಸಂಶೋಧಕರೊಂದಿಗೆ ಕೈಜೋಡಿಸಿದೆ. ಸಂಶೋಧಕರ ಪ್ರಕಾರ, ಅಲ್ಲಿನ ಮರಳು ಮರುಭೂಮಿಗಳಲ್ಲಿ ಕಂಡುಬರುವ ಮರಳನ್ನು ಹೋಲುತ್ತದೆ ಮತ್ತು ಕಟ್ಟಡ ಅಥವಾ ನಿರ್ಮಾಣ ಉದ್ದೇಶಗಳಿಗಾಗಿ ಬಳಸಲಾಗುವುದಿಲ್ಲ. ಇದು ನದಿ ಮರಳಿನಂತೆ ಸಾಂದ್ರವಾಗಿಲ್ಲ. ಇದು ಮರುಭೂಮಿ ಮರಳಿನಂತೆ ಸಡಿಲವಾಗಿದೆ. …

Read More »

ಸಿಎನ್‌ ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್‌ ಗೆದ್ದೆ ಗೆಲ್ಲುತ್ತಾರೆ ಅಂತ 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿ ನೇಣಿಗೆ ಶರಣು!

ರಾಮನಗರ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್‌ ಮಂಜುನಾಥ್‌ ವಿರುದ್ಧ ಕಾಂಗ್ರೆಸ್ ಡಿಕೆ ಸುರೇಶ್‌ ಗೆಲ್ಲುತ್ತಾರೆ ಎಂದು 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಟ್ಟಿಂಗ್ ಕಟ್ಟಿ 50 ಲಕ್ಷ ರೂಪಾಯಿ ಕಟ್ಟಿ ಸೋತು ಸಾಲದ ಸುಳಿಗೆ ಸಿಲುಕಿದ್ದ ರಾಮನಗರ ಜಿಲ್ಲೆಯ ಕೆಂಚನಕುಪ್ಪೆ ನಿವಾಸಿ 44 ವರ್ಷದ ಶಿವರಾಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಿಡದಿ ಠಾಣಾ …

Read More »

ನನಗೇನು ಗೊತ್ತಿಲ್ಲ, ನಾನೇನು ಮಾಡಿಲ್ಲ: ವಕೀಲರ ಮುಂದೆ ನಟ ದರ್ಶನ್ ಕಣ್ಣೀರು!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಿದ್ದು ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ದರ್ಶನ್ ಅವರನ್ನು ವಕೀಲ ಅನಿಲ್ ಭೇಟಿ ಮಾಡಿದರು. ಈ ವೇಳೆ ದರ್ಶನ್ ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಂಬಂಧಿ ಸುಶಾಂತ್ ದರ್ಶನ್ ಅವರನ್ನು ಭೇಟಿಯಾದರು. ನಂತರ ಸಂಬಂಧಿ ಫೋನ್ ಮೂಲಕ ದರ್ಶನ್ ಪತ್ನಿ …

Read More »

ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ನನ್ನ ಮಗನಿಗೆ ಸೋಲಾಯಿತು: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲು ಕಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ ಲಕ್ಷ್ಮಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸಿದ್ದ ಅವರ ಪುತ್ರ ಮೃಣಾಲ್ ಬಿಜೆಪಿಯ ಜಗದೀಶ್ ಶೆಟ್ಟರ್ ವಿರುದ್ಧ 1.78 ಲಕ್ಷ ಮತಗಳ ಅಂತರದಿಂದ …

Read More »

ನೆರೆ ರಾಜ್ಯಗಳಿಂದ ಕರ್ನಾಟಕಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು: ಸಿಎಂ

ಬೆಂಗಳೂರು, ಜೂನ್ 11: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು ಎಂದು …

Read More »

ವಿನಯ ಕುಲಕರ್ಣಿ ವಿರುದ್ಧದ ದೋಷಾರೋಪ ರದ್ದತಿಗೆ ಸುಪ್ರೀಂ ನಕಾರ

ಹುಬ್ಬಳ್ಳಿ,ಜೂ.11- ಬಿಜೆಪಿ ಕಾರ್ಯಕರ್ತ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ರಾಜ್ಯದ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ನಿಗದಿಯಾಗಿರುವ ದೋಷಾರೋಪವನ್ನು ರದ್ದುಪಡಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. 2016ರಲ್ಲಿ ಧಾರವಾಡದಲ್ಲಿ ಯೋಗೇಶ್‌ ಅವರನ್ನು ಹತ್ಯೆ ಮಾಡಲಾಗಿತ್ತು. ನ್ಯಾಯಮೂರ್ತಿಗಳಾದ ಸಂಜಯ್‌ಕುಮಾರ್‌ ಮತ್ತು ಆಗಸ್ಟೀನ್‌ ಜಾರ್ಜ್‌ ಮಸೀಹ್‌ ಅವರು ಇದ್ದ ರಜಾಕಾಲದ ವಿಭಾಗೀಯ ಪೀಠವು ಕರ್ನಾಟಕ ಹೈಕೋರ್ಟ್‌ ನೀಡಿದ ಆದೇಶದಲ್ಲಿ ಮಾರ್ಪಾಡು ಮಾಡಲು ನಿರಾಕರಿಸಿತ್ತು. ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯವು ದೋಷಾರೋಪ …

Read More »

ಶಕ್ತಿ ಯೋಜನೆಗೆ 1 ವರ್ಷ ಪೂರ್ಣ, ಶೂನ್ಯ ಟಿಕೆಟ್ ಮೊತ್ತ ₹1352.68 ಕೋಟಿ, ಅಪ್ಡೇಟ್ಸ್

ಹುಬ್ಬಳ್ಳಿ, ಜೂನ್ 11: ಕರ್ನಾಟಕದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾಗಿ ಒಂದು ವರ್ಷ (ಜೂನ್ 11) ಪೂರ್ಣಗೊಂಡಿದೆ. ಯೋಜನೆಯಿಂದ ರಾಜ್ಯದ ಮಹಿಳೆಯರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್‌ಗಳಲ್ಲಿ 52.12 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಶೂನ್ಯ ಟಿಕೆಟ್ ಮೊತ್ತ 1352.68 ಕೋಟಿ ರೂ. ಗಳಾಗಿವೆ ಎಂದು NWKRTC ಸಂಸ್ಥೆಯ …

Read More »

ಪ್ರಯಾಣಿಕರ ದಾರಿ ತಪ್ಪಿಸುವ ಮಾರ್ಗಸೂಚಿ ಫಲಕಗಳು

ತೆಲಸಂಗ: ರಸ್ತೆಗಳ ಬದಿಗಳಲ್ಲಿ ಅಳವಡಿಸುವ ಗ್ರಾಮಗಳ ಮಾರ್ಗಸೂಚಿ ಫಲಕಗಳು ಮಾರ್ಗಸೂಚಿಯಾಗಿರಬೇಕು. ಆದರೆ ಅಥಣಿ ತಾಲೂಕಿನ ಕಕಮರಿಯಿಂದ ತೆಲಸಂಗ ಸಾವಳಗಿವರೆಗೆ ಅಭಿವೃದ್ಧಿ ಪಡಿಸಿರುವ ಕರ್ನಾಟಕ ಎಸ್‌.ಎಚ್‌ 260 ರಸ್ತೆ ಬದಿಯಲ್ಲಿ ಅಳವಡಿಸಿರುವ ಗ್ರಾಮಗಳ ಕಿ.ಮೀ ಮಾರ್ಗಸೂಚಿ ಫಲಕಗಳು ಪ್ರಯಾಣಿಕರಿಗೆ ದಾರಿ ತಪ್ಪಿಸುತ್ತಿವೆ. ಫಲಕಗಳಲ್ಲಿ ಕಿ.ಮೀ. ಲೋಪದೋಷಗಳಾಗಿವೆ. ಹಾಲಳ್ಳಿ ಮಾರ್ಗದಿಂದ ತೆಲಸಂಗ ಕ್ರಾಸ್‌ ರಸ್ತೆ ದಾಟುವ ಮುನ್ನ ಹಾಕಿರುವ ಫಲಕದಲ್ಲಿ ತೆಲಸಂಗ 2 ಕಿ.ಮೀ. ಬರೆಯುವ ಬದಲು 3 ಕಿ.ಮೀ ಅಂತ ಬರೆಯಲಾಗಿದೆ. ಆಶ್ಚರ್ಯವೆಂದರೆ …

Read More »