Breaking News

ಮುಡಾ ಬೆನ್ನಲ್ಲೇ ಸಿದ್ದರಾಮಯ್ಯಗೆ ಮತ್ತೊಂದು ಡಿನೋಟಿಫಿಕೇಷನ್ ಉರುಳು: ರಾಜೀನಾಮೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ಡಿನೋಟಿಫಿಕೇಷನ್ ದೂರು ದಾಖಲಾಗಿದೆ. ಮುಡಾದಂತೆ ತಮ್ಮ ಪ್ರಭಾವ ಬಳಸಿ ಮೈಸೂರು ತಾಲೂಕು ವರುಣ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನ ಡಿನೋಟಿಫೈ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಲಾಗಿದೆ.. ಈ ಸಂಬಂಧ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿ, ಮೈಸೂರು ಚಲೋ ಪಾದಯಾತ್ರೆ ಚಾಮುಂಡಿ ತವರಿಗೆ ತಲುಪುವ ಮುನ್ನಾವೇ ಸಿದ್ದರಾಮಯ್ಯ ಅವರು ಅನಾಚಾರಗಳು ಒಂದೊಂದೆ …

Read More »

ಅವ್ಯವಹಾರ ಬಿಚ್ಚಿಡಬೇಕೇ? ವಿಜಯೇಂದ್ರಗೆ ಡಿಕೆಶಿ ಸವಾಲು

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಲಕ್ಷ್ಮೀ ವಿಲಾಸ್‌ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆಸಿದ್ದು ಅದರ ಬಗ್ಗೆ ಮಾಹಿತಿ ಬಿಚ್ಚಿಡಬೇಕೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಮದ್ದೂರಿನ ಜನಾಂದೋಲನ ಸಮಾವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರ ವಿರುದ್ಧ ವಾಗ್ಧಾಳಿ ಮುಂದುವರಿಸಿದ ಅವರು, “ವಿಜಯೇಂದ್ರ, ನಿನ್ನ ತಂದೆ ನಾಲ್ಕು ಬಾರಿ ಸಿಎಂ ಆಗಿ ರಾಜೀನಾಮೆ ನೀಡಿದ್ದು ಯಾಕೆ? ಸುಪ್ರೀಂಕೋರ್ಟ್‌ ಏನು ಹೇಳಿದೆ? ನೀನು ದುಬಾೖಗೆ ವಿಶೇಷ ವಿಮಾನದಲ್ಲಿ ಹೋಗಿ …

Read More »

ಪೂರ್ವ ದಿಕ್ಕಿನಿಂದ ಶತ್ರುಬಾಧೆ,ಪಂಚಮ ಶನಿಯ ಪ್ರಭಾವ

ಮೇಷ: ಸಾರ್ವಜನಿಕ ರಂಗದಲ್ಲಿ ದುಡಿಯುವ ವ್ಯಕ್ತಿಗಳಿಗೆ ಮಹತ್ವದ ಜವಾಬ್ದಾರಿ. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ ಸಂಭವ. ಪರ್ಯಾಯ ಚಿಕಿತ್ಸೆಯಿಂದ ಹಳೆಯ ಸಮಸ್ಯೆಗೆ ಪರಿಹಾರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ವೃಷಭ: ಎಡ- ಬಲ ಗಮನಿಸಿ ಎಚ್ಚರಿಕೆಯಿಂದ ಮುಂದುವರಿದರೆ ಯಶಸ್ಸು. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಕೈಸೇರಿ ಸಮಾಧಾನ. ಮನೆಯಲ್ಲಿ ಎಲ್ಲರ ಆರೋಗ್ಯ ಸಮಾಧಾನಕರ. ನೂತನ ವಾಹನ ಖರೀದಿಗೆ ಚಿಂತನೆ. ಮಿಥುನ: ದಿಟ್ಟ ನಿರ್ಧಾರದಿಂದ ಮುನ್ನಡೆದರೆ ಯಶಸ್ಸು ಖಂಡಿತ. ಎಂತಹ …

Read More »

ರಾಜಕಾರಣಕ್ಕೆ: ಪ್ರತಾಪ್‌ ಸಿಂಹ

ಬೆಂಗಳೂರು: ಕೊಡಗು- ಮೈಸೂರು ಸಂಸದ ರಾಗಿದ್ದ ಪ್ರತಾಪ್‌ ಸಿಂಹ ರಾಜ್ಯ ರಾಜಕಾರಣಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದು, ಮುಂದಿನ ದಿನ ಗಳಲ್ಲಿ ಅಧಿಕೃತವಾಗಿ ವಿಧಾನಸಭೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. “ಉದಯವಾಣಿ’ಯ “ನೇರಾನೇರ’ ಸಂದರ್ಶನದ ವೇಳೆ ಈ ಕುರಿತು ಮುಕ್ತವಾಗಿ ಮಾತ ನಾಡಿರುವ ಪ್ರತಾಪ್‌, “ನಾನೀಗ ಸದ್ಯಕ್ಕೆ ವಿಧಾನಸೌಧದಲ್ಲಿ ಇಲ್ಲದಿರಬಹುದು. ಆದರೆ ರಾಜ್ಯ ರಾಜ ಕಾರಣದಲ್ಲೇ ಇದ್ದೇನೆ’ ಎಂದಿದ್ದಾರೆ. “ಇತ್ತೀಚೆಗೆ ರಾಜ್ಯದ ವಿಷಯಗಳ ಬಗ್ಗೆ ತಾರ್ಕಿಕವಾಗಿ ಹಾಗೂ ಪ್ರಬಲವಾಗಿ ಮಾತ ನಾಡುತ್ತಿದ್ದೇನೆ. ಮೊದಲು ರಾಜ್ಯದ ಬಗ್ಗೆ ನಾನು ಮಾತನಾಡುತ್ತಿರಲಿಲ್ಲ. ಈಗಾಗಲೇ ನಾನು …

Read More »

ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

ಬೆಳಗಾವಿ: ಗಲಭೆ ಪೀಡಿತ ಬಾಂಗ್ಲಾದೇಶದಿಂದ 25 ವೈದ್ಯಕೀಯ ವಿದ್ಯಾರ್ಥಿಗಳು ಪಾರಾಗಿ ಬೆಳಗಾವಿಗೆ ಆಗಮಿಸಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಈ ಎಲ್ಲ ವಿದ್ಯಾರ್ಥಿಗಳು ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೆರವಿನಿಂದ ಸುರಕ್ಷಿತವಾಗಿ ಬೆಳಗಾವಿಗೆ ಬಂದಿದ್ದಾರೆ.   ಬಾಂಗ್ಲಾಬಾಂಗ್ಲಾದಿಂದ ಬೆಳಗಾವಿಗೆ ಬಂದ ವೈದ್ಯಕೀಯ ವಿದ್ಯಾರ್ಥಿ ನೇಹಲ್ ಸವಣೂರು ಮಾಧ್ಯಮದವರೊಂದಿಗೆ ಮಾತನಾಡಿ, ಬಾಂಗ್ಲಾದಲ್ಲಿ ನಾನೂ ಭಯಭೀತನಾಗಿದ್ದೆ. ಈಗಿನ ಪರಿಸ್ಥಿತಿ ‌ಇನ್ನೂ ಭಯಂಕರ ಇದೆ. ಹೇಗೋ ಬಚಾವ್ …

Read More »

ನಾವಗೆಯ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ

ಬೆಳಗಾವಿ: ತಾಲೂಕಿನ ನಾವಗೆ ಗ್ರಾಮದ ಹೊರವಲಯದಲ್ಲಿರುವ ಸ್ನೇಹಂ ಟಿಕ್ಸೋ ಟೇಪ್ ತಯಾರಿಸುವ ಕಾರ್ಖಾನೆಗೆ ಮಂಗಳವಾರ ರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಭೀಕರ ಅವಘಡ ಸಂಭವಿಸಿದ್ದು, ಕಾರ್ಖಾನೆಯೊಳಗೆ ಹಲವರು ಸಿಲುಕಿರುವ ಸಾಧ್ಯತೆ ಇದೆ.‌ ತಾಲೂಕಿನ‌ ನಾವಗೆ ಗ್ರಾಮದ ಬಳಿ ಇರುವ ಸ್ನೇಹಂ ಎಂಬ ಟಿಸ್ಕೋ ಟೇಪ್‌ ತಯಾರಿಸುವ ಈ ಕಾರ್ಖಾನೆಯಲ್ಲಿ ಬೆಂಕಿ ತಗುಲಿದೆ.‌ ಹೆಚ್ಚಿನ‌ ಪ್ರಮಾಣದಲ್ಲಿ ಪ್ಲಾಸ್ಟಿಕ್ ಇದ್ದಿದ್ದರಿಂದ ಬೆಂಕಿ ಆವರಿಸಿಕೊಂಡಿದೆ. ಬೃಹತ್ ಪ್ರಮಾಣದಲ್ಲಿ ಬೆಂಕಿ ಆವರಿಸಿಕೊಂಡಿದೆ. ಸುಮಾರು60ಕ್ಕೂ ಹೆಚ್ಚು ಜನ ಒಳಗೆ …

Read More »

ನಿಂಗಾಪುರ ಗ್ರಾಮಸ್ಥರಲ್ಲಿ ಹರ್ಷ ವರದಿ ಬೆನ್ನಲ್ಲೆ ಗ್ರಾಮಕ್ಕೆ ಬಂತು ಹೊಸ ಬೋಟ್

ವರದಿ ಬೆನ್ನಲ್ಲೆ ಗ್ರಾಮಕ್ಕೆ ಬಂತು ಹೊಸ ಬೋಟ್ ನಿಂಗಾಪುರ ಗ್ರಾಮಸ್ಥರಲ್ಲಿ ಹರ್ಷ *ಬೆಳಗಾವಿ:* ನಿಂಗಾಪುರ ಗ್ರಾಮಸ್ಥರು ಹೊಸ ಬೋಟ್ ಸಿಗುತ್ತಿದ್ದಂತೆಯೇ ಹರ್ಷದಿಂದ ಕುಣಿದರು. ಬೋಟ್ ವ್ಯವಸ್ಥೆ ಇಲ್ಲದೆ, ಗಾಳಿ ತುಂಬಿದ ಟ್ಯೂಬ್‌ ಮೇಲೆ ಶಾಲಾ ಮಕ್ಕಳು ಹಿಂಜರಿಯುತ್ತಿದ್ದ ನಂತರ, ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ, ಜಿಲ್ಲಾಡಳಿತವು ತಕ್ಷಣ ಪ್ರತಿಕ್ರಿಯಿಸಿತು.   ನಿಂಗಾಪುರ ಗ್ರಾಮ, ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿರುವ ಹಿಂದುಳಿದ ಪ್ರದೇಶವಾಗಿದೆ, ಇತ್ತೀಚಿನ ಭಾರಿ ಮಳೆಯಿಂದಾಗಿ ಗ್ರಾಮಸ್ಥರು ಹುಲಿಕೆರೆಯನ್ನು ದಾಟಲು …

Read More »

ತಿಂಗಳಲ್ಲಿ ಚರಕ ಆಸ್ಪತ್ರೆ ಉದ್ಘಾಟನೆ: ಡಾ.ಶರಣ ಪ್ರಕಾಶ ಪಾಟೀಲ

ಬೆಂಗಳೂರು: ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಚರಕ ಆಸ್ಪತ್ರೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೌರಿಂಗ್ ಆಸ್ಪತ್ರೆಯ ಡೆಂಗಿ ವಾರ್ಡ್‌ಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ, ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ಆಸ್ಪತ್ರೆ ಯಲ್ಲಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿ ದ್ದಾರೆಯೆ? ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೆ? ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಅಲ್ಲಿಂದ ಶಿವಾಜಿನಗರದ …

Read More »

ಸಿಡಿಲು ಬಡಿದು ಆರು ಜನರಿಗೆ ಗಾಯ

ರೋಣ (ಗದಗ ಜಿಲ್ಲೆ): ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಆರು ಜನರು ಗಾಯಗೊಂಡ ಘಟನೆ ತಾಲ್ಲೂಕಿನ ಹೊನ್ನಿಗನೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಅಂದಾನಗೌಡ ಪವಾಡಿಗೌಡ್ರ, ಸುನಂದಾ ಪವಾಡಿಗೌಡ್ರ, ಕಸ್ತೂರೆವ್ವ ಪವಾಡಿಗೌಡ್ರ, ಶರಣವ್ವ ಮಾದರ, ರೂಪ ಪಾಟೀಲ, ಸುಜಾತಾ ಪಾಟೀಲ ಸಿಡಿಲು ಬಡಿದು ಗಾಯಗೊಂಡವರು. ಎಲ್ಲರನ್ನೂ ರೋಣ ಪಟ್ಟಣದ ಭೀಮಸೇನ ಜೋಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊನ್ನಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು …

Read More »

ವೇಮನರ ತತ್ವ ಜಗತ್ತಿಗೆ ಮಾದರಿ: ಸಚಿವ ಎಚ್.ಕೆ.ಪಾಟೀಲ

ಲೋಕಾಪುರ: ವೇಮನರ ತತ್ವ, ಸಿದ್ಧಾಂತಗಳು ಜಗತ್ತಿಗೆ ಮಾದರಿಯಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು. ಸಮೀಪದ ಮೆಟಗುಡ್ಡ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ಧಾನ ಹಾಗೂ ಹೇಮ ವೇಮ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ರಚನಾತ್ಮಕ ಕೆಲಸಗಳನ್ನು ಮಾಡುವುದರಿಂದ ಒಳ್ಳೆ ಸಮಾಜ ನಿರ್ಮಾಣ ಸಾಧ್ಯ ಎಂದರು. ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ವಚನ ಮತ್ತು ಬದುಕನ್ನು ನಾಡಿಗೆ ತಿಳಿಸುವ ಕಾರ್ಯ ನಡೆಯಬೇಕು. ಸಮುದಾಯಗಳ ಮಧ್ಯೆ ಸಮನ್ವಯ …

Read More »