ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವವು ಕಾರ್ತಿಕ ಬಹುಳ ದ್ವಾದಶಿಯ ಪವಿತ್ರ ದಿನವಾದ ಇಂದು (ನ.16) ಬೆಳಗ್ಗೆ 8.10ಕ್ಕೆ ವೃಶ್ಚಿಕ ಲಗ್ನ ಸುಮಹೂರ್ತದಲ್ಲಿ ಕೊಪ್ಪರಿಗೆ ಏರುವ ಆಚರಣೆಯೊಂದಿಗೆ ಆರಂಭವಾಗಿದೆ. ನವೆಂಬರ್ 26ರಂದು ಬೆಳಗಿನಜಾವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಪ್ರಸಿದ್ಧ ಚಂಪಾಷಷ್ಠಿ ಮಹಾರಥೋತ್ಸವ ಜರುಗಲಿದೆ. ಪ್ರತಿ ವರ್ಷವೂ ಕೊಪ್ಪರಿಗೆ ಏರುವ ಮೂಲಕ ಜಾತ್ರೆ ಆರಂಭವಾಗುವುದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವೈಶಿಷ್ಟ್ಯ. ಸಾಮಾನ್ಯವಾಗಿ ಅನೇಕ ದೇವಸ್ಥಾನಗಳಲ್ಲಿ …
Read More »ಸರಣಿ ಅಪಘಾತ: ಬೈಕ್ ಸವಾರ ಸಾವು; ಬಸ್ ಪಲ್ಟಿ, ಕಾರು ನಜ್ಜುಗುಜ್ಜು
ಹಾಸನ/ಶಿವಮೊಗ್ಗ: ಕಾರು, ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದೆ. ಮಸಕನಳ್ಳಿ ಗ್ರಾಮದ ಎಂ.ಸಿ.ದೇವರಾಜ್ (54) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಾಸನ ಕಡೆಯಿಂದ ಬೆಂಗಳೂರು ಕಡೆ ಚಲಿಸುತ್ತಿದ್ದ ಖಾಸಗಿ ಬಸ್ ಅತಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಸರ್ವಿಸ್ ರಸ್ತೆ ಕಡೆಗೆ ನುಗ್ಗಿ ಸ್ಕೂಟರ್ಗೆ ಗುದ್ದಿ ಬಳಿಕ …
Read More »ನೇತ್ರದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ ಎಎಸ್ಐ ಚಂದ್ರಕಾಂತ ಹುಟಗಿ
ಹುಬ್ಬಳ್ಳಿ(ಧಾರವಾಡ): ಹೃದಯಾಘಾತವಾಗಿ ಸಾವನ್ನಪ್ಪಿದ ಎಎಸ್ಐಯೋರ್ವರು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಕಾಂತ ಹುಟಗಿ (58) ಅವರು ಭಾನುವಾರ(ನ.16) ಬೆಳಗ್ಗೆ ಹೃದಯಾಘಾತದಿಂದ ಹುಬ್ಬಳ್ಳಿ ಸುಚರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿ ಆಗದೆ ನಿಧನರಾದರು. ತಮ್ಮವರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೂ ಕೂಡ ಅವರ ಕುಟುಂಬ ಚಂದ್ರಕಾಂತ ಅವರ 2 ಕಣ್ಣುಗಳನ್ನು ದಾನ ಮಾಡಿದ್ದಾರೆ.ಚಂದ್ರಕಾಂತ ಹುಟಗಿ ಪರಿಚಯ: ಅಕ್ಟೋಬರ್ 24, 1993ರಲ್ಲಿ ಪೊಲೀಸ್ ಇಲಾಖೆ …
Read More »ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ; ಗೃಹ ಸಚಿವ ಜಿ. ಪರಮೇಶ್ವರ
ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ; ಗೃಹ ಸಚಿವ ಜಿ. ಪರಮೇಶ್ವರ ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ಸಂಪುಟ ಪುನಾರಚನೆಯಾದ್ರೇ ನಾಯಕತ್ವ ಬದಲಾವಣೆ ಆಗಲ್ಲ. ಇಂದು ಬೆಂಗಳೂರಿನಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸಂಪುಟ ಪುನಾರಚನೆಗೆ ಅನುಮತಿ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಆದರೇ, ಪುನಾರಚನೆಯಾದ್ರೇ, ನಾಯಕತ್ವದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಆಗಲ್ಲ ಎಂದರು. ಇನ್ನು ಹಲವರು ಸಚಿವರಾಗುವ ಅಪೇಕ್ಷೆ ಪಡುತ್ತಿದ್ದಾರೆ.
Read More »ಹಿರಿಯ ಸಾಧಕರನ್ನು ಗೌರವಿಸುವ ಸಂಘದ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ. ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ
ಹಿರಿಯ ಸಾಧಕರನ್ನು ಗೌರವಿಸುವ ಸಂಘದ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ. ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪಂಚ ಸಹಸ್ರ ದೀಪೋತ್ಸವ ಸಾರ್ವಜನಿಕ ಸೇವೆಗಾಗಿ ಜೀವಮಾನವನ್ನೇ ಮುಡುಪಾಗಿಟ್ಟು, ಜೀವವನ್ನು ತೇಯ್ದ ಹಿರಿಯ ಸಾಧಕ ಜೀವಿಗಳನ್ನು ಗುರುತಿಸಿ ಗೌರವಿಸುವ ಸಂಘದ ಕಾರ್ಯ ನಿಜಕ್ಕೂ ಶ್ಲ್ಯಾಘನೀಯ ಎಂದು ಬೆಳಗಾವಿ ನಿವ್ರತ್ತ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು. ಅವರು ಶನಿವಾರ ಬೆಳಗಾವಿ ರಾಮತೀರ್ಥನಗರದ ಶ್ರೀ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ …
Read More »ಗ್ರಾಮಕ್ಕೆ ಆಗಮಿಸಿದ್ದ ಹೆಳವ ಅಲೆಮಾರಿ ಜನಾಂಗದ ಜೋಡಿಗೆ ಮದುವೆ ಮಾಡಿದ ಗ್ರಾಮಸ್ಥರು
ಹಾವೇರಿ: ಜಿಲ್ಲೆಯ ಅಗಡಿ ಗ್ರಾಮ ಶನಿವಾರ ವಿಶಿಷ್ಟ ಮದುವೆಗೆ ಸಾಕ್ಷಿಯಾಯಿತು. ಈ ಗ್ರಾಮಕ್ಕೆ ಆಗಮಿಸಿದ್ದ ಹೆಳವ ಅಲೆಮಾರಿ ಸಮುದಾಯದ ಜೋಡಿಯ ಮದುವೆಯನ್ನು ಸುತ್ತಮುತ್ತಲಿನ ಗ್ರಾಮಗಳ ರೈತರೇ ಎಲ್ಲಾ ಜವಾಬ್ದಾರಿ ವಹಿಸಿಕೊಂಡು ನೆರವೇರಿಸಿದರು. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಶಿಲ್ಲತಹಳ್ಳಿ ಗ್ರಾಮದ ಹೆಳವ ಸಂಗಮೇಶ್ ಮತ್ತು ಗೋಕಾಕ್ ತಾಲೂಕು ಕಂಡ್ರಕಟ್ಟಿ ಗ್ರಾಮದ ನೇತ್ರಾವತಿ ಅವರು ಗ್ರಾಮಸ್ಥರ ಮತ್ತು ರೈತರ ಸಮ್ಮುಖದಲ್ಲಿ ನೂತನ ದಾಂಪತ್ಯಕ್ಕೆ ಕಾಲಿಟ್ಟರು. ಅಗಡಿ ಗ್ರಾಮದ ಹೊರವಲಯದಲ್ಲಿ ಹೆಳವರ ತಾತ್ಕಾಲಿಕ ಶೆಡ್ …
Read More »ಹುಬ್ಬಳ್ಳಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣದ ಪ್ರಮುಖ ಆರೋಪಿಯು ಪೊಲೀಸ್ ಠಾಣೆಗೆ ಬಂದು ಶರಣಾಗತನಾಗಿದ್ದಾನೆ.
ಹುಬ್ಬಳ್ಳಿ: ಕಳೆದ ಗುರುವಾರ ರಾತ್ರಿ ನಗರದ ಮಂಟೂರ ರಸ್ತೆಯಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಶನಿವಾರ ಬೆಂಡಿಗೇರಿ ಠಾಣೆಗೆ ಹಾಜರಾಗಿ ಶರಣಾಗಿದ್ದಾನೆ. ಬಂಗಾರ ಬಾಲ್ಯ ಎಂಬಾತನೇ ಪೊಲೀಸರೆದುರು ಶರಣಾಗತನಾಗಿರುವ ಆರೋಪಿ. ಮಲ್ಲಿಕ್ ಜಾನ್ ಅಹ್ಮದ್ (25) ಎಂಬಾತನಿಗೆ ಜನರ ಗುಂಪೊಂದು ಏಕಾಏಕಿ ದಾಳಿ ಮಾಡಿ ಚಾಕುವಿನಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ನಂತರ ಗಾಯಗೊಂಡಿದ್ದ ಮಲ್ಲಿಕ್ ಜಾನ್ ಅಲಿಯಾಸ್ ಮೆಂಡಾ ಮಲ್ಲಿಕ್ನನ್ನು …
Read More »ನವೆಂಬರ್ ಕ್ರಾಂತಿಯ ಸದ್ದು ಗದ್ದಲದ ಮಧ್ಯೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಇದೀಗ ನಾಯಕತ್ವ ಬದಲಾವಣೆಯೋ ಅಥವಾ ಸಂಪುಟ ಪುನಾರಚನೆಯೋ ಎಂಬ ಗೊಂದಲವನ್ನು ಮತ್ತಷ್ಟು ಹೆಚ್ಚಾಗಿಸಿದೆ. ನವೆಂಬರ್ ಕ್ರಾಂತಿಯ ಚರ್ಚೆಗೆ ಉಭಯ ನಾಯಕರ ದೆಹಲಿ ಭೇಟಿ ಇನ್ನಷ್ಟು ರೆಕ್ಕೆಪುಕ್ಕಗಳನ್ನು ನೀಡಿದೆ. ಒಂದೆಡೆ ಕಾಂಗ್ರೆಸ್ ಪಾಳಯದಲ್ಲಿ ನವೆಂಬರ್ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಕೇಳಿಬರುತ್ತಿದ್ದು, ಇನ್ನೊಂದೆಡೆ ಸಂಪುಟ ಪುನಾರಚನೆಯ ಸಾಧ್ಯತೆಯ ಕೂಗು ಜೋರಾಗಿ ಕೇಳಿ ಬರುತ್ತಿದೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಈ ಗೊಂದಲಕ್ಕೆ ತೆರೆ …
Read More »ಮೈಕ್ರೋ ಸಾಫ್ಟ್ ಹೆಸರಲ್ಲಿ ಅಮೆರಿಕಾ ಪ್ರಜೆಗಳಿಗೆ ಸೈಬರ್ ವಂಚನೆ: ಬೆಂಗಳೂರಲ್ಲಿ 21 ಆರೋಪಿಗಳ ಬಂಧನ
ಮೈಕ್ರೋ ಸಾಫ್ಟ್ ಹೆಸರಲ್ಲಿ ಅಮೆರಿಕಾ ಪ್ರಜೆಗಳಿಗೆ ಸೈಬರ್ ವಂಚನೆ: ಬೆಂಗಳೂರಲ್ಲಿ 21 ಆರೋಪಿಗಳ ಬಂಧನ ಬೆಂಗಳೂರು: ಸೈಬರ್ ವಂಚನೆಗೆ ಕಡಿವಾಣ ಹಾಕಲು ಸಿಐಡಿ ಕಚೇರಿಯಲ್ಲಿ ನೂತನವಾಗಿ ಆರಂಭಿಸಿರುವ ಸೈಬರ್ ಕಮಾಂಡ್ ಸೆಂಟರ್ (ಸಿಸಿಸಿ) ಭರ್ಜರಿ ಕಾರ್ಯಾಚರಣೆ ನಡೆಸಿ, ಮೈಕ್ರೋ ಸಾಫ್ಟ್ ಹೆಸರು ದುರ್ಬಳಕೆ ಮಾಡಿಕೊಂಡು, ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ ಪ್ರಜೆಗಳು ಸೇರಿ ಇತರೆ ನಾಗರಿಕರನ್ನು ಬೆದರಿಸಿ ವಂಚಿಸುತ್ತಿದ್ದ 21 ಸೈಬರ್ ವಂಚಕರ ಜಾಲವನ್ನು ಬಂಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ವಂದನಾ …
Read More »ರಾಯಬಾಗ ಸರ್ಕಾರಿ ಆಸ್ಪತ್ರೆಯ ವೈದ್ಯರ ಭರ್ಜರಿ ಎಣ್ಣೆ ಪಾರ್ಟಿ
ರಾಯಬಾಗ : ಲೋಕೋಪಯೋಗಿ ಸಚಿವರೇ ಇಲ್ಲಿ ಒಮ್ಮೆ ನೋಡಿ ನಿಮ್ಮದೇ ಇಲಾಖೆಯ ಪ್ರವಾಸಿ ಮಂದಿರದಲ್ಲಿ ನಡೆಯುತ್ತಿದೆ ಮದ್ಯ ಸೇವನೆ ಪಾರ್ಟಿ ರಾಯಬಾಗ ಸರ್ಕಾರಿ ಆಸ್ಪತ್ರೆಯ ವೈದ್ಯರ ಭರ್ಜರಿ ಎಣ್ಣೆ ಪಾರ್ಟಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಸರ್ಕಾರಿ ವೈದ್ಯರ ಎಣ್ಣೆ ಪಾರ್ಟಿ ಎತ್ತ ಸಾಗುತ್ತಿದೆ ಈ ವೈದ್ಯರ ಕಾರ್ಯವೈಖರಿ ದಿನಕ್ಕೊಂದು ಸುದ್ದಿಯಲ್ಲಿರುವ ರಾಯಬಾಗ ಸರ್ಕಾರಿ ಆಸ್ಪತ್ರೆಯ ರಾಜ್ಯದ ಗಮನ ಸೆಳೆದಿತ್ತು ಮನಸ್ಸೋ ಇಚ್ಛೆ ಕೆಲಸ ಮಾಡದೇ ಸುದ್ದಿಯಾಗುತ್ತಿದ್ದ ಸರ್ಕಾರಿ ಅಸ್ಪತ್ರೆ ಇದೀಗ …
Read More »
Laxmi News 24×7