Breaking News

ಇಸ್ರೋ ಅಧ್ಯಕ್ಷ ಡಾ.ವಿ. ನಾರಾಯಣ, ಏಟ್ರಿಯಾ ವಿಶ್ವವಿದ್ಯಾಲಯ ಕುಲಾಧಿಪತಿ ಸಿ.ಎಸ್. ಸುಂದರರಾಜು, ಪದ್ಮಶ್ರೀ ಪುರಸ್ಕೃತ ಪ್ರಶಾಂತ ಪ್ರಕಾಶ

ಬೆಳಗಾವಿ: “ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25ನೇ ಘಟಿಕೋತ್ಸವದ ಭಾಗ-1 ಜುಲೈ 4ರಂದು ನಡೆಯಲಿದೆ. ಈ ವೇಳೆ ವಿಜ್ಞಾನ, ತಾಂತ್ರಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ಡಾಕ್ಟರ್ ಆಫ್ ಸೈನ್ಸ್ ಪ್ರದಾನ ಮಾಡಲಾಗುತ್ತದೆ” ಎಂದು ಕುಲಪತಿ ಪ್ರೊ‌.ಎಸ್. ವಿದ್ಯಾಶಂಕರ ತಿಳಿಸಿದರು. ವಿಟಿಯುದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ವಿಶ್ವವಿದ್ಯಾಲಯದ ಜ್ಞಾನ ಸಂಗಮ ಆವರಣದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ …

Read More »

ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಉಂಡ ಮನೆಗೆ ದ್ರೋಹ ಎಂಬಂತೆ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಲ್ಯಾಪ್ ಟಾಪ್​ಗಳನ್ನು ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡಿ, ಬಂದ ಹಣದಿಂದ ಬೆಟ್ಟಿಂಗ್ ಆಡುತ್ತಿದ್ದ ಮಾಜಿ ನೌಕರನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ಮಂಗಳೂರು ಮೂಲದ ಸುಬ್ರಹ್ಮಣ್ಯ ಪ್ರಸಾದ್ (34) ಬಂಧಿತ ಆರೋಪಿ. ಆರೋಪಿಯಿಂದ 19 ಲಕ್ಷ ರೂ. ಮೌಲ್ಯದ ಲ್ಯಾಪ್ ಟಾಪ್​ಗಳು, 5 ಐಫೋನ್​ಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ 2ನೇ …

Read More »

ರಾಜ್ಯದಲ್ಲಿ ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಸರಕಾರದಿಂದ ಹೆಚ್ಚಿನ ಸಹಕಾರ – ಶೀಘ್ರದಲ್ಲೇ ಕೈಗಾರಿಕೆ ಹಾಗೂ ಐಟಿಬಿಟಿ ಸಚಿವರೊಂದಿಗೆ ಸಭೆ: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು : ದೇಶದಲ್ಲೇ ಮೊದಲ ಕ್ವಾಂಟಮ್‌ ಕಂಪ್ಯೂಟರ್‌ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ. ಈ ಕ್ಷೇತ್ರದ ಹೆಚ್ಚಿನ ಅಭಿವೃದ್ದಿ ಅಗತ್ಯವಿರುವಂತಹ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ದವಿದ್ದು ಹೊಸ ನೀತಿ ರೂಪಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಬೃಹತ್‌ ಕೈಗಾರಿಕೆ ಹಾಗೂ ಐಟಿಬಿಟಿ ಸಚಿವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ …

Read More »

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಸಿ.ಎಂ ಬೆಂಗಳೂರು : ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, …

Read More »

ಮಹಾಪೌರ ಹಾಗೂ ನಗರಸೇವಕರ ಸದಸ್ಯತ್ವ ರದ್ದತಿ ಹೈಕೋರ್ಟ್ ತಡೆಯಾಜ್ಞೆ ಮಹಾಪೌರ ಮಂಗೇಶ್ ಪವಾರ್ ಮತ್ತು ನಗರಸೇವಕ ಜಯಂತ್ ಜಾಧವ್’ಗೆ ತಾತ್ಕಾಲಿಕ ರಿಲೀಫ್

ಮಹಾಪೌರ ಹಾಗೂ ನಗರಸೇವಕರ ಸದಸ್ಯತ್ವ ರದ್ದತಿ ಹೈಕೋರ್ಟ್ ತಡೆಯಾಜ್ಞೆ ಮಹಾಪೌರ ಮಂಗೇಶ್ ಪವಾರ್ ಮತ್ತು ನಗರಸೇವಕ ಜಯಂತ್ ಜಾಧವ್’ಗೆ ತಾತ್ಕಾಲಿಕ ರಿಲೀಫ್ ‘ಖಾವು ಕಟ್ಟಾ’ ಪ್ರಕರಣದಲ್ಲಿ ಪ್ರಾದೇಶಿಕ ಆಯುಕ್ತರ ನಿರ್ಣಯಕ್ಕೆ ತಡೆಯಾಜ್ಞೆ ಸೋಮವಾರದವರೆಗೆ ವಿಚಾರಣೆ ಮುಂದೂಡಿಕೆ ಶಾಸಕ ಅಭಯ ಪಾಟೀಲ್ ಸರಕಾರಕ್ಕೆ ಸವಾಲು ಮಂಗೇಶ್ ಪವಾರ್ ಮತ್ತು ಜಯಂತ ಜಾಧವ್‌ಗೆ ತಾತ್ಕಾಲಿಕ ರಿಲೀಫ್ ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಮಂಗೇಶ್ ಪವಾರ್ ಮತ್ತು ನಗರ ಜಯಂತ ಜಾಧವ್ ಅವರ ಸದಸ್ಯತ್ವ …

Read More »

ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಗೆ ಹೊತ್ತಿಕೊಂಡ ಬೆಂಕಿ

ದಾವಣಗೆರೆ: ಶಾರ್ಟ್ ಸರ್ಕ್ಯೂಟ್​ನಿಂದ ಅಗ್ನಿ ಅವಘಡ ಸಂಭವಿಸಿ ತಾಯಿ‌ – ಮಗ ಮೃತಪಟ್ಟಿರುವ ದಾರುಣ ಘಟನೆ ನಗರದ ಕಾಯಿಪೇಟೆಯಲ್ಲಿ ನಡೆದಿದೆ. ಬೆಂಕಿಯಿಂದ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಮಲಾ (75) ಮತ್ತು ಅವರ ಪುತ್ರ ಕುಮಾರ್ (35) ಪ್ರಾಣ ಕಳೆದುಕೊಂಡ ದುರ್ದೈವಿಗಳು. ಮೃತರು ಬಿಜೆಪಿ ಮುಖಂಡ‌ ರುದ್ರಮುನಿಸ್ವಾಮಿ ಅವರ ಸಂಬಂಧಿಗಳಾಗಿದ್ದಾರೆ. ತಡರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿವೆ. ಇದರಿಂದ ದಟ್ಟ ಹೊಗೆ ಆವರಿಸಿದೆ. ಮನೆಯಲ್ಲಿದ್ದ 6 ಮಂದಿಯ …

Read More »

ಹೃದಯಾಘಾತದಿಂದ ಸಾವನ್ನಪ್ಪಿದ ಡಾ.ಸಂದೀಪ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ

ಶಿವಮೊಗ್ಗ/ತುಮಕೂರು: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ ಶಿವಮೊಗ್ಗದಲ್ಲಿ ಸರ್ಕಾರಿ ವೈದ್ಯ ಹಾಗೂ ತುಮಕೂರಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿದ್ದ ಡಾ.ಸಂದೀಪ್ ಅವರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದರು. ಶುಕ್ರವಾರ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ ನಂತರ ಇವರಿಗೆ ರಾತ್ರಿ ಎದೆನೋವು …

Read More »

ಎಂಬಿಬಿಎಸ್​ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಬಾಗಲಕೋಟೆ: ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕೂವರೆ ವರ್ಷ ಎಂಬಿಬಿಎಸ್ ಮುಗಿಸಿ ಇಂಟರ್ಶಿಪ್‍ನಲ್ಲಿದ್ದ ವಿದ್ಯಾರ್ಥಿ ಲಕ್ಷ್ಮೀಪುತ್ರ ಬಿ.ಕುಲಕರ್ಣಿ (24) ಸೋಮವಾರ ಬೆಂಗಳೂರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಜೆ ಮೇಲೆ ಸಂಬಂಧಿಕರ ಜೊತೆ ಲಕ್ಷ್ಮೀಪುತ್ರ ಬೆಂಗಳೂರಿಗೆ ಹೋಗಿದ್ದರು. ಅಲ್ಲಿಂದ ತಮಿಳುನಾಡಿಗೆ ಪ್ರವಾಸಕ್ಕೆ ಹೋಗಿ ವಾಪಸ್​ ಬರುತ್ತಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಲಕ್ಷೀಪುತ್ರ ಮೂಲತಃ ವಿಜಯಪುರ …

Read More »

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

ಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಾರಾಯಣ್ ಲಾಲ್, ಪುಷ್ಪೇಂದ್ರ ಸಿಂಗ್, ಕೀರ್ತನ್ ರಾಮ್, ಮಹೇಂದ್ರ ಗೆಹ್ಲೋಟ್ ಹಾಗೂ ದಿಲೀಪ್ ಕುಮಾರ್ ಎಂಬಾತನನ್ನ ಬಂಧಿಸಲಾಗಿದ್ದು, 50 ಲಕ್ಷ ರೂಪಾಯಿ ಮೌಲ್ಯದ 480 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆ. ಆರ್. ಪುರಂ ವ್ಯಾಪ್ತಿಯಲ್ಲಿ ಮನೆ, ಅಂಗಡಿಗಳಿಗೆ ಫೆನಾಯಿಲ್ ಸರಬರಾಜು ಮಾಡಿಕೊಂಡಿದ್ದ …

Read More »

ಗೋಕಾಕ ಗ್ರಾಮ ದೇವತೆಯರ ಆಶೀರ್ವಾದ ಪಡೆದ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ರಾಜಕೀಯ ಹಿರಿಯ ಮುಖಂಡರಾದ ಅಶೋಕ್ ಪೂಜಾರಿ

ಗೋಕಾಕ ಗ್ರಾಮ ದೇವತೆಯರ ಆಶೀರ್ವಾದ ಪಡೆದ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ರಾಜಕೀಯ ಹಿರಿಯ ಮುಖಂಡರಾದ ಅಶೋಕ್ ಪೂಜಾರಿ

Read More »