Breaking News

ಕಾಂಗ್ರೆಸ್‌ಗೆ ಮತ್ತೆ ಶಾಕ್ ನೀಡಿದ ಆದಾಯ ತೆರಿಗೆ ಇಲಾಖೆ, ₹1700 ಕೋಟಿ ತೆರಿಗೆ ಪಾವತಿಸಲು ನೋಟಿಸ್!

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election) ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್‌ಗೆ ದಿನದಿಂದ ದಿನಕ್ಕೆ ಸಂಕಷ್ಟಗಳು ನಿರಂತರವಾಗಿ ಹೆಚ್ಚುತ್ತಿದ್ದು, ಮರುಮೌಲ್ಯಮಾಪನ ಪ್ರಕ್ರಿಯೆಗಳ (Revaluation Proceedings) ವಿರುದ್ಧ ಪಕ್ಷದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಆದಾಯ ತೆರಿಗೆ ಇಲಾಖೆ ಕೂಡ ಕಾಂಗ್ರೆಸ್‌ಗೆ (Congress) ಶಾಕ್ ನೀಡಿದೆ.   ಸುಮಾರು 1,700 ಕೋಟಿ ರೂಪಾಯಿ ಮೊತ್ತದ ತೆರಿಗೆ ಪಾವತಿಸುವಂತೆ ವಿರೋಧ ಪಕ್ಷ ಕಾಂಗ್ರೆಸ್‌ಗೆ ಆದಾಯ ತೆರಿಗೆ …

Read More »

ಬೆಳಗಾವಿ: ಪುತ್ರನ ಪರ ಪ್ರಚಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ಒತ್ತಡ – ಸಚಿವೆ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಸಮನ್ಸ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯ ಕುವೆಂಪುನಗರದ ತಮ್ಮ ಗೃಹಕಚೇರಿ ಪಕ್ಕದ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಸಭೆಯನ್ನು ಮಾರ್ಚ್ 20ರಂದು ನಡೆಸಿದ್ದರು. ಅದಕ್ಕೆ ಅನುಮತಿ ಪಡೆದಿರಲಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿತ್ತು. …

Read More »

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

ಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. ಇಲ್ಲಿನ ಕೆಎಂಎಫ್ ಕಚೇರಿಯ ಪಕ್ಕದಲ್ಲಿ ಕಳೆದ 10 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಪಾಟೀಲ್ ಅವರು ನಗರಸಭೆ ಸದಸ್ಯರಾಗಿದ್ದ ಅವಧಿಯಲ್ಲಿ ಈ ಮಹಿಳಾ ಶೌಚಾಲಯ ನಿರ್ಮಿಸಲಾಗಿತ್ತು.ಇದರ ನಿರ್ವಹಣೆ ಮಾಡುವ ಜವಾಬ್ದಾರಿಯನ್ನು ಪೌರ ಕಾರ್ಮಿಕ ಮಹಿಳೆಯೊಬ್ಬರಿಗೆ ವಹಿಸಿಕೊಟ್ಟು, ಪಕ್ಕದಲ್ಲಿಯೇ ವಾಸಿಸಲು ಅವಕಾಶ ಕಲ್ಪಿಸಲಾಗಿದೆ.   ಆದರೆ, ಎರಡು ವರ್ಷಗಳಿಂದ ಶೌಚಾಲಯದಲ್ಲಿ ವಿದ್ಯುತ್‌ (ಅರ್ಥಿಂಗ್) ಸಮಸ್ಯೆ …

Read More »

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

ಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ ಅರಣ್ಯ ಇಲಾಖೆ ಸಿಬ್ಬಂದಿ ಪ್ರಾಣಿ-ಪಕ್ಷಿಗಳಿಗೆ ನೀರಿನ ದಾಹ ತಣಿಸಲು ತಾಲ್ಲೂಕಿನ ವಿವಿಧ ಭಾಗಗಳ ದಟ್ಟ ಕಾಡಿನಲ್ಲಿ ಕೃತಕ ತೊಟ್ಟಿಗಳನ್ನು ನಿರ್ಮಿಸಿ ನೀರು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತಾಲ್ಲೂಕಿನ ಕಾಡು ಪ್ರದೇಶದ 6 ಭಾಗಗಳಲ್ಲಿ ಕಾಂಕ್ರೀಟ್ ತೊಟ್ಟಿಗಳನ್ನು ನಿರ್ಮಿಸಲಾಗಿತ್ತು. ವೃತ್ತಾಕಾರದ ಈ ತೊಟ್ಟಿಗಳು ಒಂದು ಬದಿಯಿಂದ ಮತ್ತೊಂದು ತುದಿಗೆ …

Read More »

‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಹುದ್ದೆಗಳ ನೇಮಕಾತಿಗಾಗಿ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಒಟ್ಟು 545 ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ …

Read More »

ಮಹಿಳೆಯ ಹಣ ಕದ್ದ ಖದೀಮರು: ಮಕ್ಕಳೊಂದಿಗೆ ಬಸ್​ ನಿಲ್ದಾಣದಲ್ಲೇ ಅಳುತ್ತಾ ಕುಳಿತ ತಾಯಿ

 ಊರಿಗೆ ತೆರಳಲು ಬಸ್ ಹತ್ತುವಾಗ ಬಡ ಮಹಿಳೆಯ ಪರ್ಸ್‌ನಲ್ಲಿಟ್ಟಿದ್ದ ಹದಿನೈದು ಸಾವಿರ ರೂ. ಹಣವನ್ನು ಕಳ್ಳರು ಎಗರಿಸಿದ್ದಾರೆ. ಹಾಸನದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಇತ್ತ ಹಣ ಕಳೆದುಕೊಂಡ ಮಹಿಳೆ ಊರಿಗೆ ಹೋಗದೆ ಬಸ್ ನಿಲ್ದಾಣದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಕಣ್ಣೀರು ಹಾಕಿದ್ದಾರೆ.ಬಳಿಕ ತಾಯಿ-ಮಕ್ಕಳ ಗೋಳಾಟ ಕಂಡು ಸ್ಥಳೀಯರು ನೆರವು ನೀಡಿದ್ದಾರೆ. ಹಾಸನ, ಮಾರ್ಚ್​ 28: ಸಾರ್ವಜನಿಕ ಸ್ಥಳಗಳಲ್ಲಿ ಮೈಯಲ್ಲಾ ಕಣ್ಣಾಗಿದ್ದರು ಸಾಕಾಗುವುದಿಲ್ಲ. ನಮ್ಮ ಹಣ (money) , ವಸ್ತುಗಳನ್ನು ಎಷ್ಟೇ ಎಚ್ಚರಿಕೆಯಿಂದ ಕಾಯಿದು …

Read More »

ನರಗುಂದ: ಕೃಷಿಹೊಂಡವೇ ಜೀವನಕ್ಕೆ ಆಧಾರ, ಬಹುಹಂತದ ಕೃಷಿಯಿಂದ ಲಕ್ಷಾಂತರ ಆದಾಯ

ನರಗುಂದ: ಬರದ ನೆಪ ಒಡ್ಡಿ ಕೈ ಕಟ್ಟಿ ಕುಳಿತರೆ ಕೃಷಿ ಸಾಗಿಸಲಾಗದು. ಮನಸ್ಸಿಟ್ಟು ಕಾಯಕ ಮಾಡಿದರೆ ಕೃಷಿಯಿಂದ ಲಕ್ಷಾಂತರ ರೂಪಾಯಿ ಆದಾಯ ಪಡೆಯಲು ಸಾಧ್ಯ ಎಂದು ಕೃಷಿಯಲ್ಲಿ ಖುಷಿ ಕಾಣುತ್ತಿರುವ ತಾಲ್ಲೂಕಿನ ಹದ್ಲಿಯ ರೈತ ಯಲ್ಲಪ್ಪ ಸೋನಕೊಪ್ಪ ತಮ್ಮ ಅನುಭವದ ಮಾತುಗಳನ್ನು ಖುಷಿಯಿಂದ ಹೇಳಿಕೊಳ್ಳುತ್ತಾರೆ. ತಾಲ್ಲೂಕಿನ ಮಾದರಿ ರೈತನಾಗಿ, ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದಾರೆ ಅವರು. ಪದವೀಧರನಾದರೂ ಕೃಷಿಯನ್ನೇ ವೃತ್ತಿಯಾಗಿಸಿಕೊಂಡಿದ್ದಾರೆ. ಇರುವ ಕೃಷಿ ಹೊಂಡದಲ್ಲಿನ ಅಲ್ಪ ನೀರಿನಲ್ಲಿ ವಿವಿಧ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂಪಾಯಿ …

Read More »

ದಿನ ಕಳೆದಂತೆ ಬೆಳಗಾವಿ ಲೋಕಸಭಾ ಅಖಾಡ ರಂಗು ಪಡೆಯುತ್ತಿದ್ದು

ಬೆಳಗಾವಿ : ದಿನ ಕಳೆದಂತೆ ಬೆಳಗಾವಿ ಲೋಕಸಭಾ ಅಖಾಡ ರಂಗು ಪಡೆಯುತ್ತಿದ್ದು ನಾಯಕರ ಆರೋಪ, ಹಾಗೂ ಪ್ರತ್ಯಾರೋಪಗಳು ಜೋರಾಗಿವೆ.‌ ಈ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೂ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಜಕೀಯ ಬದ್ಧ ಎದರುರಾಳಿಗಳಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಬ್ಬರೂ ನಾಯಕು ಅಖಾಡಕ್ಕೆ ಇಳಿದ ಕಾರಣ ಲೋಕಸಭಾ ಕಣ ಮತ್ತಷ್ಟು ರಂಗು ಪಡೆದಿದೆ. ಈಗಾಗಲೇ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯ ಅನೇಕ ಕ್ಷೇತ್ರದಲ್ಲಿ …

Read More »

ಗುದದ್ವಾರಕ್ಕೆ ಏರ್‌ಬಿಟ್ಟು ಯುವಕ ದುರ್ಮರಣ!

ಬೆಂಗಳೂರು: ಇಬ್ಬರು ಸ್ನೇಹಿತರು ತಮಾಷೆ ಮಾಡುವ ಬರದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾಹನ ಸರ್ವೀಸ್‌ ಸೆಂಟರ್‌ನಲ್ಲಿದ್ದ ಏರ್‌ ಪ್ರೆಶರ್‌ ಮೆಶಿನ್‌ ಗಾಳಿಯು ಗುದದ್ವಾರದ ಮೂಲಕ ಕರಳಿಗಿ ನುಗ್ಗಿ ಯುವಕ ಸಾವಿಗೀಡಾಗಿದ್ದಾನೆ.ಅಶ್ವತ್ಥ ನಗರದ ಯೋಗೇಶ್‌ (23) ಮೃತ ದುರ್ದೈವಿ. ಮಾರ್ಚ್‌ 25 ರಂದು ರಾತ್ರಿ ಯೋಗೇಶ್‌ ಗುದದ್ವಾರಕ್ಕೆ ಏರ್‌ಪ್ರೆಶರ್‌ ಗನ್‌ ಇಟ್ಟು ಸಾವಿಗೆ ಕಾರಣವಾದ ಆರೋಪದ ಮೇರೆಗೆ ಥಣಿಸಂದ್ರದ ಮುರುಳಿ (24) ಎಂಬುವನನ್ನು ಪೊಲೀಸರುಬಂಧಿಸಿದ್ದಾರೆ. ಯೋಗೇಶ್ ಹಾಗೂ ಮುರುಳಿ ಹಲವು …

Read More »

ಲೋಕಸಭೆ ಅಖಾಡ 2024 ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬೆಳಗಾವಿ: ಟಿಕೆಟ್‌ ಪಡೆಯುವ ವಿಚಾರದಲ್ಲಿ ಸಾಕಷ್ಟು ಆಕ್ಷೇಪಣೆಗಳನ್ನು ಎದುರಿಸಿದ್ದ ಜಗದೀಶ ಶೆಟ್ಟರ್‌ ಈಗ ಒಂದು ಹಂತದ ಆತಂಕ ನಿವಾರಿಸಿಕೊಂಡಿದ್ದಾರೆ. ಪಕ್ಷದ ಪ್ರಮುಖ ಪ್ರಭಾವಿ ನಾಯಕ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲಾ ನಾಯಕರ ಜತೆ ನಡೆದ ಸಂಧಾನ ಸಭೆ ಹಾಗೂ ಪ್ರಚಾರ ರ್ಯಾಲಿ ಶೆಟ್ಟರ್‌ ಅವರಿಗೆ ನೈತಿಕ ಬಲ ತಂದುಕೊಟ್ಟಿದೆ.   ಸಭೆಯಲ್ಲಿ ಜಗದೀಶ ಶೆಟ್ಟರ್‌ ಬಗ್ಗೆ ನಿರೀಕ್ಷೆ ಮಾಡಿದಂತೆ ಸ್ಥಳೀಯ ಮುಖಂಡರಿಂದ ಹಾಗೂ ಕಾರ್ಯಕರ್ತರಿಂದ ಅಂತಹ ಅಸಮಾಧಾನಗಳು ಕಂಡು ಬರಲಿಲ್ಲ. ಆದರೆ ಟಿಕೆಟ್‌ …

Read More »