Breaking News

ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್.‌ ಅಶೋಕ್‌

ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್.‌ ಅಶೋಕ್‌ ಬೆಂಗಳೂರು : ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1, ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಆರ್‌. ಅಶೋಕ್‌, ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ …

Read More »

ಸೂರತ್ ಕಟ್ಟಡ ಕುಸಿತ: ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ:ಸುಮಾರು ಮೂರು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯ ನಂತರ, 23 ವರ್ಷದ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಗುಜರಾತ್ನ ಸೂರತ್ ನಗರದಲ್ಲಿ ಜುಲೈ 7 ರಂದು ಆರು ಅಂತಸ್ತಿನ ಕಟ್ಟಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ. ಘಟನೆಯಲ್ಲಿ ಒಂದು ಡಜನ್ ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೊಲೀಸರು ಬಿಲ್ಡರ್ ಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ ಐಆರ್) ದಾಖಲಿಸಿದ್ದಾರೆ. …

Read More »

ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದ ಪೂಜ್ಯ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ. ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಸಿದ್ದರಾಮ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ರವಿವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು …

Read More »

ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಮಾಡಿದ್ರೆ ಕಠಿಣ ಕ್ರಮ;

ಬಳ್ಳಾರಿ : ಬಳ್ಳಾರಿ ತಾಲ್ಲೂಕಿನ ಜಾಲಿಬೆಂಚಿ ಕ್ರಾಸ್ ನಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟ ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಘಟಕದಲ್ಲಿ ಉತ್ಪಾದನಾ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಉತ್ಪಾದನಾ ಘಟಕದ ಕಾರ್ಯನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಅಂಗನವಾಡಿಗಳಿಗೆ ಪೂರೈಕೆ ಮಾಡುವ …

Read More »

ಮಹಾಂತೇಶ ನಗರದಲ್ಲಿ ಮನೆಕಳ್ಳತನ

ಬೆಳಗಾವಿ: ಇಲ್ಲಿನ ಮಹಾಂತೇಶ ನಗರದಲ್ಲಿ ಶನಿವಾರ ರಾತ್ರಿ ಮನೆಗೆ ನುಗ್ಗಿದ ಕಳ್ಳರು, 150 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. ನಿವೃತ್ತ ಎಎಸ್‌ಐ ಮಹಾದೇವ ಬಾಗೋಡಿ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದೆ. ‘ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ತನಿಖೆ ಕೈಗೊಂಡಿದ್ದೇವೆ. ಕೆಲವು ಸುಳಿವು ಸಿಕ್ಕಿದ್ದು, ತ್ವರಿತವಾಗಿ ಆರೋಪಿಗಳನ್ನು ಬಂಧಿಸುತ್ತೇವೆ’ ಎಂದು ಮಾಳಮಾರುತಿ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ತಿಳಿಸಿದರು.

Read More »

ಮಹದಾಯಿ ಜಲಾನಯನ ಪ್ರದೇಶ: ‘ಪ್ರವಾಹ’ ತಂಡದ ಭೇಟಿ

ಖಾನಾಪುರ (ಬೆಳಗಾವಿ ಜಿಲ್ಲೆ): ಮಹದಾಯಿ ನದಿ ನೀರಿನ ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ರಚಿಸಿದ ‘ಪ್ರವಾಹ’ (Progressive River Authority For Water and Harmony) ತಂಡವು ಮಹದಾಯಿ ಜಲಾನಯನ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಮಾಹಿತಿ ಕಲೆಹಾಕಿತು. ಮುಖ್ಯಸ್ಥ ಪಿ.ಎಂ.ಸ್ಕ್ವಾಟ್‌, ಸದಸ್ಯರಾದ ವೀರೇಂದ್ರ ಶರ್ಮಾ, ಮನೋಜ್‌ ತಿವಾರಿ, ನೀರಜ್‌ ಮಂಗಲಿಕ, ಗೌರವ ಗು‍ಪ್ತಾ, ಸುಭಾಷಚಂದ್ರ, ಮಿಲಿಂದ್‌ ನಾಯ್ಕ, ಪ್ರಮೋದ ಬಾದಾಮಿ, ಅಶೋಕಕುಮಾರ್‌ ವಿ. ಅವರನ್ನು ಒಳಗೊಂಡ 9 ಜನರ ತಂಡ …

Read More »

ನೂತನ ಕಮಿಟಿಗೆ ಅಧಿಕಾರ ಮಹತ್ವದ ಆದೇಶ’

ಲಿಂಗಸುಗೂರು: ‘ತಾಲ್ಲೂಕಿನ ಮುದಗಲ್‌ ಪಟ್ಟಣದ ಹುಸೇನಿ ಆಲಂ ಆಶೂರ್‌ ಖಾನಾ ನೂತನ ಸಮಿತಿಯು ಮೊಹರಂನ ಸಾಂಪ್ರದಾಯಿಕ ಆಚರಣೆ ನಡೆಸಲು ಅಧಿಕಾರ ಹೊಂದಿದೆ’ ಎಂದು ಉಪ ವಿಭಾಗೀಯ ದಂಡಾಧಿಕಾರಿ ಶಿಂಧೆ ಅವಿನಾಶ ಸಂಜೀವನ್ ಆದೇಶ ಹೊರಡಿಸಿದ್ದಾರೆ. ಭಾನುವಾರ ಆದೇಶ ಹೊರಡಿಸಿದ ದಂಡಾಧಿಕಾರಿಗಳು, ‘ನೂತನ ಸಮಿತಿ ಅಧ್ಯಕ್ಷ ಎಸ್.ಎ.ನಯೀಮ್ ಜುನೈದಿ ಅವರಿಗೆ ಹಳೆಯ ಸಮಿತಿ ಅಧ್ಯಕ್ಷ ಅಮೀರಬೇಗ್ ಉಸ್ತಾದ್‌ ಹಾಗೂ ಪದಾಧಿಕಾರಿಗಳು ಭಾನುವಾರವೇ ಅಧಿಕಾರ ಹಸ್ತಾಂತರಿಸಬೇಕು. ಅಧಿಕಾರ ಹಸ್ತಾಂತರ ಮಾಡುವಲ್ಲಿ ವಿಫಲರಾದರೆ ಕ್ರಮ …

Read More »

ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರಬರಲಿ: ಅರವಿಂದ ಬೆಲ್ಲದ

ಹುಬ್ಬಳ್ಳಿ: ‘ರಾಜ್ಯ ಸರ್ಕಾರ ಡೆಂಗಿ ನಿಯಂತ್ರಣಕ್ಕೆ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರ ಬಂದು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಈ ಬಗ್ಗೆ ಪರಿಶೀಲಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು. ನಗರದ ಕಿಮ್ಸ್ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಡೆಂಗಿಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, …

Read More »

ಹುಡುಗ, ಹುಡುಗಿಯರ ಸರ್ವಿಸ್ ಬೇಕಾ ಎಂದು ಮೆಸೇಜ್‌; ಆರೋಪಿ ಅರೆಸ್ಟ್​

ಬೆಂಗಳೂರು, ಜು.07: ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕೆಂದು ಮೇಸೆಜ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೂರ್ವ ವಿಭಾಗ ಸೆನ್ ಪೊಲೀಸರು(Police) ಬಂಧಿಸಿದ್ದಾರೆ. ಆನಂದ್ ಶರ್ಮಾ ಬಂಧಿತ ಆರೋಪಿ. ಇತ ಹಲವಾರು ಮೊಬೈಲ್ ನಂಬರ್ ಬಳಸಿ, ಹುಡುಗಿಯರ ಸರ್ವಿಸ್ ಬೇಕಾ? ಎಂದು ಕರೆ ಮಾಡುತ್ತಿದ್ದ. ಅದರಂತೆ ಕರೆ ಮಾಡುತ್ತಿದ್ದರ ಬಗ್ಗೆ ಸುಭಿ ಎಂಬ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮೊಬೈಲ್ ನಂಬರ್ ಆಧರಿಸಿ ಶೇಷಾದ್ರಿಪುರಂ ವಿ ಸ್ಟೇಜ್ ಪಿಜಿ ಬಳಿ …

Read More »

ಹುಬ್ಬಳ್ಳಿಯಲ್ಲಿ ಡೆಂಗ್ಯೂಗೆ ನಾಲ್ವರು ಸಾವು

ಬೆಂಗಳೂರು, ಜುಲೈ 07: ದಿನದಿಂದ ದಿನಕ್ಕೆ ಡೆಂಗ್ಯೂ (Dengue) ಜನರನ್ನ ಕಾಡುತ್ತಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 175 ಡೆಂಗ್ಯೂ ಕೇಸ್ ದೃಢಪಟ್ಟಿವೆ. ಬೆಂಗಳೂರಿನಲ್ಲೇ 115 ಕೇಸ್​ಗಳು ದಾಖಲಾಗಿವೆ. ರಾಜ್ಯದಲ್ಲಿ ಜನವರಿ 1ರಿಂದ ನಿನ್ನೆ ವರೆಗೆ ಒಟ್ಟು 7 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.   ಮೈಸೂರಿನಲ್ಲಿ 3 ದಿನಕ್ಕೆ ಇಬ್ಬರು ಸಾವನ್ನಪ್ಪಿದ್ದರೆ, ಹುಬ್ಬಳ್ಳಿಯಲ್ಲಿ (Hubballi) ನಾಲ್ವರು ಮೃತಪಟ್ಟಿರುವುದಾಗಿ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆ ನಿರ್ದೇಶಕ ಡಾ.ಎಸ್​.ಎಫ್​.ಕಮ್ಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಿಮ್ಸ್​ ಆಸ್ಪತ್ರೆ ನಿರ್ದೇಶಕ …

Read More »