Breaking News

ನವದೆಹಲಿ: ಏಳು ಬಾರಿ ಸಂಸದರಾಗಿರುವ ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ ವಿರೋಧ-ಗದ್ದಲದ ನಡುವೆ, 18 ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ. ಇಂದು ವಿಶೇಷ ಸಂಸತ್ ಅಧಿವೇಶನದ ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಂಡಲ ಸೇರಿದಂತೆ ಹೊಸದಾಗಿ ಚುನಾಯಿತರಾದ 280 ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಉಳಿದ 264 ಸಂಸದರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26 ರಂದು ಲೋಕಸಭಾ ಸ್ಪೀಕರ್ ಆಯ್ಕೆ ಮತ್ತು ಜೂನ್ 27 ರಂದು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ. ನೂತನ ಸ್ಪೀಕರ್ ಆಯ್ಕೆಯ ತನಕ ಸದನದ ಕಲಾಪಗಳನ್ನು ಕೈಗೊಳ್ಳಲು ಮಹತಾಬ್‌ಗೆ ಸಹಾಯ ಮಾಡಲು ಮೂವರು ವಿರೋಧ ಪಕ್ಷದ ಸಂಸದರು ಅಧ್ಯಕ್ಷರ ಸಮಿತಿಯಿಂದ ಹಿಂದೆ ಸರಿಯಲು ಪರಿಗಣಿಸಿರುವುದರಿಂದ ಹಂಗಾಮಿ ಸ್ಪೀಕರ್ ನೇಮಕ ಕುರಿತ ಗದ್ದಲ ಇಂದು ಸದನದಲ್ಲಿ ಉಲ್ಬಣಗೊಳ್ಳುವ ಸಾಧ್ಯತೆಯಿದೆ. ಕಳೆದ ವಾರದ ಆರಂಭದಲ್ಲಿ ರಾಷ್ಟ್ರಪತಿಗಳು ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದರು. ಮಹತಾಬ್ ಅವರಿಗೆ ಸಹಾಯ ಮಾಡಲು ಕಾಂಗ್ರೆಸ್‌ನ ಕೋಡಿಕುನ್ನಿಲ್ ಸುರೇಶ್, ಡಿಎಂಕೆ ಸಂಸದ ಟಿ ಆರ್ ಬಾಲು, ಟಿಎಂಸಿಯ ಸುದೀಪ್ ಬಂಡೋಪಾಧ್ಯಾಯ ಮತ್ತು ಬಿಜೆಪಿ ನಾಯಕರಾದ ರಾಧಾ ಮೋಹನ್ ಸಿಂಗ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಸೇರಿದಂತೆ ಹಿರಿಯ ಸಂಸದರ ಸಮಿತಿಯನ್ನು ನಾಮನಿರ್ದೇಶನ ಮಾಡಿದರು. ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಪ್ರತಿನಿಧಿಯೊಂದಿಗೆ ಮಾತನಾಡಿದ ಕೆ.ಸುರೇಶ್, ಸಮಿತಿಯನ್ನು ಬಹಿಷ್ಕರಿಸುವ ಕುರಿತು ಸೋಮವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮಹತಾಬ್ ನೇಮಕದ ಬಗ್ಗೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿವೆ. ಎಂಟನೇ ಅವಧಿಯ ಸಂಸದ ಕೆ.ಸುರೇಶ್‌ ಅವರ ಸ್ಥಾನದ ಹಕ್ಕನ್ನು ಸರ್ಕಾರ ಬೈಪಾಸ್ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. ಈ ಮಧ್ಯೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಮಹತಾಬ್ ಅವರು ಲೋಕಸಭೆ ಸದಸ್ಯರಾಗಿ ಏಳು ಬಾರಿ ಆಯ್ಕೆಯಾಗಿದ್ದು, ಹಂಗಾಮಿ ಲೋಕಸಭಾ ಹುದ್ದೆಗೆ ಅರ್ಹರಾಗಿದ್ದಾರೆ. ಕಾಂಗ್ರೆಸ್ ನವರು ಜನರ ದಾರಿತಪ್ಪಿಸುತ್ತಿದ್ದಾರೆ ಎಂದರು. ಸಭಾಧ್ಯಕ್ಷ ಮತ್ತು ಉಪಸಭಾಪತಿ ಹುದ್ದೆಗಳ ಆಯ್ಕೆ ವಿಚಾರದಲ್ಲಿ ಪ್ರತಿಪಕ್ಷಗಳು ಮತ್ತು ಸರಕಾರಗಳು ಜಟಾಪಟಿ ನಡೆಸುವ ಸಾಧ್ಯತೆ ಇದೆ. ಸರ್ಕಾರ ತನ್ನ ಸ್ಪೀಕರ್ ಅಭ್ಯರ್ಥಿಯ ಬಗ್ಗೆ ಗೌಪ್ಯವಾಗಿ ಉಳಿದಿದೆ, ಆದರೆ ಪ್ರತಿಪಕ್ಷಗಳು ಉಪಸಭಾಪತಿ ಹುದ್ದೆಗೆ ತನ್ನ ಹಕ್ಕನ್ನು ಪ್ರತಿಪಾದಿಸಲು ಮುಂದಾಗಿವೆ. ಜೂನ್ 28 ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯು ಸದನದಲ್ಲಿ ಭಾರೀ ಗದ್ದಲ-ಕೋಲಾಹಲಕ್ಕೆ ಕಾರಣವಾಗಬಹುದು. NEET-UG ಮತ್ತು UGC-NET ಪರೀಕ್ಷೆಗಳು, ಹೊಸ ಕ್ರಿಮಿನಲ್ ಕಾನೂನುಗಳು ಮತ್ತು ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಮುಂದಾಗಿವೆ. ಸಿದ್ಧತೆ ಮಾಡಿಕೊಂಡಿವೆ. ಜುಲೈ 2 ಅಥವಾ 3 ರಂದು ಪ್ರಧಾನ ಮಂತ್ರಿಗಳು ಸದನದಲ್ಲಿ ಚರ್ಚೆಗೆ ಪ್ರತಿಕ್ರಿಯಿಸುವ ಸಾಧ್ಯತೆಯಿದೆ. ನಂತರ ಸಂಸತ್ ಕಲಾಪ ಅಲ್ಪ ವಿರಾಮ ಪಡೆದು ಜುಲೈ 22ರಂದು ಬಜೆಟ್ ಮಂಡನೆ ವೇಳೆ ಮತ್ತೆ ಸೇರಲಿದೆ.

18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ ಗದ್ದಲ ಸಾಧ್ಯತೆ   ನವದೆಹಲಿ: ಏಳು ಬಾರಿ ಸಂಸದರಾಗಿರುವ ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ ವಿರೋಧ-ಗದ್ದಲದ ನಡುವೆ, 18 ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗುತ್ತಿದೆ. ಇಂದು ವಿಶೇಷ ಸಂಸತ್ ಅಧಿವೇಶನದ ಮೊದಲ ದಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಮಂತ್ರಿ ಮಂಡಲ ಸೇರಿದಂತೆ …

Read More »

ಕರ್ನಾಟಕದ ಕುದುರೆಗಳಿಗೆ ‘ಮಹಾ’ ಮರ್ಯಾದೆ

ಚಿಕ್ಕೋಡಿ: ಹೀರಾ ಮತ್ತು ಮೋತಿ ಅವರಿಗೆ ಮಹಾರಾಷ್ಟ್ರದ ಪಂಢರಪುರದ ವಿಠ್ಠಲನ ಸನ್ನಿಧಿಯಲ್ಲಿ ಆಷಾಢ ಏಕಾದಶಿಯಲ್ಲಿ ರಾಜ ಮರ್ಯಾದೆ ಸಿಗುತ್ತದೆ. ಪ್ರತಿ ವರ್ಷ ಪಂಢರಪುರಕ್ಕೆ ಹೊರಡುವ ದಿಂಡಿಯಲ್ಲಿ 315 ಕಿ.ಮೀ ದಾರಿಯುದ್ದಕ್ಕೂ ಇವರೂ ಹೆಜ್ಜೆ ಹಾಕುತ್ತಾರೆ..! ಇದರಲ್ಲೇನು ವಿಶೇಷ ಎಂದುಕೊಳ್ಳಬೇಡಿ. ಹೀರಾ, ಮೋತಿ ಎಂಬುದು ಎರಡು ಕುದುರೆಗಳ ಹೆಸರು. ತಾಲ್ಲೂಕಿನ ಅಂಕಲಿ ಗ್ರಾಮದ ಶಿಥೋಳೆ ಮನೆತನದವರು ಸಾಕಿರುವ ಈ ಕುದುರೆ ಜೋಡಿಗೆ ಪಂಢರಪುರದ ದೇವಸ್ಥಾನದಲ್ಲಿ ವಿಶೇಷ ಆತಿಥ್ಯ ಸಿಗುತ್ತದೆ. ಪ್ರತಿವರ್ಷ ಜ್ಯೇಷ್ಠ …

Read More »

ಜಾತಿಗೊಂದು ಡಿಸಿಎಂ ಹುದ್ದೆ ಬೇಕು: ಸಚಿವ ರಾಜಣ್ಣ

ಬಾಗಲಕೋಟೆ: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಕೆಲವು ಜಾತಿಗೆ ಆದ್ಯತೆ ನೀಡಲಯ ಸಮುದಾಯ ಆಧಾರಿತ ಡಿಸಿಎಂ ಹುದ್ದೆ ನೀಡಬೇಕು ಎಂಬುದು ನಮ್ಮ ಪ್ರಬಲ ಬೇಡಿಕೆ ಇದ್ದೇ ಇದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆ ಆಕಾಂಕ್ಷಿ ಅಲ್ಲ. ಮುಂದೆ ನಾನು ಚುನಾವಣೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಸಮುದಾಯ ಆಧಾರಿತ ಡಿಸಿಎಂ ಹುದ್ದೆಯ …

Read More »

ಸೋಮವಾರದಿಂದ ಲೋಕಸಭೆ ಅಧಿವೇಶನ: ಸ್ಪೀಕರ್ ಯಾರು?

ನವದೆಹಲಿ, ಜೂನ್ 23: ಲೋಕಸಭೆ ಚುನಾವಣೆ 2024ರ ಬಳಿಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರ ಸೋಮವಾರ ಆರಂಭವಾಗಲಿದೆ. ಲೋಕಸಭೆ ಸದಸ್ಯರ ಪ್ರಮಾಣ ವಚನ ಎರಡು ದಿನಗಳ ಕಾಲ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಬಿಜೆಪಿ ನಾಯಕ ಮತ್ತು 7 ಅವಧಿಗೆ ಸದಸ್ಯರಾಗಿ ಆಯ್ಕೆಯಾದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಾರೆ. ನೂತನ ಸದಸ್ಯರ ಪ್ರಮಾಣ ವಚನ …

Read More »

ಹಾವೇರಿಯಲ್ಲಿ ಮಳೆ ಬರುತ್ತಿಲ್ಲವೆಂದು ‘ಹೂತಿದ್ದ ಶವ’ಗಳನ್ನೇ ಹೊರ ತೆಗೆದ ಜನರು

ಹಾವೇರಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡ ನಂತ್ರ, ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಈ ಗ್ರಾಮದ ಜನರು ತಮ್ಮ ಊರಿನಲ್ಲಿ ಮಳೆ ಬರುತ್ತಿಲ್ಲ ಅನ್ನೋ ಕಾರಣಕ್ಕೆ ಹೂತಿದ್ದಂತ ಶವಗಳನ್ನೇ ಹೊರತೆಗೆದಿರುವಂತ ಶಾಕಿಂಗ್ ಸುದ್ದಿ ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ಹಲವೆಡೆ ಮುಂಗಾರು ಮಳೆ ಆರಂಭಗೊಂಡ ನಂತ್ರವೂ ಸಮರ್ಪಕವಾಗಿ ಮಳೆಯಾಗಿರಲಿಲ್ಲ. ಇದಕ್ಕೆ ಕಾರಣ ಚರ್ಮ ರೋಗ(ತೊನ್ನು) ಇದ್ದಂತ ವ್ಯಕ್ತಿಯನ್ನು ಹೂತು ಹಾಕಿದ್ದೇ ಕಾರಣ ಎಂಬುದಾಗಿ ಹೇಳಲಾಗುತ್ತಿದೆ. ಮೂಡನಂಬಿಕೆಗೆ ಜೋತು ಬಿದ್ದಂತ …

Read More »

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಶಿವಮೊಗ್ಗ: ಯುವತಿಗೆ ಮುದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಗ್ವೆ ಬಂಧಿತ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ. ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಸಾಗರದ ನಿವಾಸದಲ್ಲಿ ಅರುಣ್ ಕುಗ್ವೆಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ಮೊದಲು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಕಾರಣಾಂತರಗಳಿಂದ ಆರೋಪಿ ಅರುಣ್ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಯುವತಿ ಶಿವಮೊಗ್ಗಕ್ಕೆ ಬಂದು ಮಹಿಳಾ ಠಾಣೆಯಲ್ಲಿ …

Read More »

ದರ್ಶನ್​ ನ್ಯಾಯಾಂಗ ಬಂಧನ: ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದ ರೇಣುಕಾಸ್ವಾಮಿ ತಂದೆ

ಚಿತ್ರದುರ್ಗ, ಜೂನ್​ 22: ನಟ ದರ್ಶನ್ (Darshan)​ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ದರ್ಶನ್​ ಜೈಲು ಸೇರಿದ್ದಾರೆ. ಈ ವಿಚಾರವಾಗಿ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ (Renukaswamy) ತಂದೆ ಕಾಶಿನಾಥಯ್ಯ ಪ್ರತಿಕ್ರಿಯಿಸಿದ್ದು, ಪೊಲೀಸರ ನ್ಯಾಯಯುತ ಶ್ರಮದಿಂದ ದರ್ಶನ್‌ ಜೈಲುಪಾಲಾಗಿದ್ದಾರೆ. ನನ್ನ ಮಗ ಅನುಭವಿಸಿದ ನೋವಿನ ಶಿಕ್ಷೆ ಆರೋಪಿಗಳಿಗೂ ಆಗಬೇಕು. ಜೈಲು ಶಿಕ್ಷೆ, ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದಿದ್ದಾರೆ. ನನ್ನ ಮಗ ರೇಣುಕಾಸ್ವಾಮಿಗೆ ಯಾವ ರೀತಿ ಗಾಯಗಳು ಆಗಿದ್ದವೋ ಅದೇ ರೀತಿ ಗಾಯ ಆಗಬೇಕು, ವಿದ್ಯುತ್ ಶಾಕ್ …

Read More »

ಜೊಲ್ಲೆ ಸೊಕ್ಕಿನಿಂದ ಚಿಕ್ಕೋಡಿಯಲ್ಲಿ ಬಿಜೆಪಿ ಸೋಲು : ಮುತಾಲಿಕ್

ಬೆಳಗಾವಿ : ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ‌ಮೋದಿ ಹಾಗೂ ಬಿಜೆಪಿಯ ಸೋಲು ಆಗಿಲ್ಲ. ಅಲ್ಲಿ ಅಣ್ಣಾಸಾಹೇಬ ಜೊಲ್ಲೆಯ ಸೊಕ್ಕು, ಅಹಂಕಾರದ ಸೋಲಾಗಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ ಹೇಳಿದರು. ಶನಿವಾರ ಬೆಳಗಾವಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದರು. ಚಿಕ್ಕೋಡಿಯಲ್ಲಿ ಸೋಲು ಕಂಡಿದ್ದು ಅಣ್ಣಾ ಸಾಹೇಬ ಜೊಲ್ಲೆ ಮಾತ್ರ. ಹಿಂದೂಗಳು, ಬಿಜೆಪಿ ಕಾರ್ಯಕರ್ತರು ಸೋತಿಲ್ಲ. ಯಾವುದೇ ರೀತಿಯ ಕಾರ್ಯಕರ್ತರ ಜೊತೆಗೆ ಸಂಪರ್ಕ ಇಲ್ಲದ ವ್ಯಕ್ತಿ. ಕ್ಷೇತ್ರದದಲ್ಲಿ ಏನೇನೂ ಕೆಲಸ …

Read More »

ಸೂರಜ್ ರೇವಣ್ಣ ಪ್ರಕರಣ ಸಿಐಡಿಗೆ ; ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಜೆಡಿಎಸ್ ಕಾರ್ಯಕರ್ತನ ಮೇಲೆ ಸಲಿಂಗಕಾಮದ ಆರೋಪದ ಮೇಲೆ ಅರೆಸ್ಟ್ ಆಗಿರುವ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇವರು. ರೇವಣ್ಣ ಕುಟುಂಬದ ಮತ್ತೊಂದು ಪ್ರಕರಣ ಸಧ್ಯ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ಸಲಿಂಗಕಾಮದ ಆರೋಪದ ಮೇಲೆ ಶನಿವಾರ ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ವಿಚಾರಣೆಗೆ ಬಂದಾಗ ವಶಕ್ಕೆ ಪಡೆದುಕೊಂಡಿದ್ದಾರೆ. …

Read More »

ಮಕ್ಕಳಿಬ್ಬರೂ ಲೈಂಗಿಕ ಆರೋಪಗಳಲ್ಲಿ ಜೈಲು ಸೇರಿದರೂ ರೇವಣ್ಣನ ಮೊಗದಲ್ಲಿ ಮಾಸದ ಮುಗುಳ್ನಗು!

ಮಕ್ಕಳಿಬ್ಬರೂ ಲೈಂಗಿಕ ಆರೋಪಗಳಲ್ಲಿ ಜೈಲು ಸೇರಿದರೂ ರೇವಣ್ಣನ ಮೊಗದಲ್ಲಿ ಮಾಸದ ಮುಗುಳ್ನಗು! ಬೆಂಗಳೂರು: ಲೈಂಗಿಕ ದುರಾಚಾರದ ಆರೋಪಗಳಲ್ಲಿ ತನ್ನಿಬ್ಬರು ಮಕ್ಕಳು ಜೈಲು ಸೇರಿದರೂ ಹೆಚ್ ಡಿ ರೇವಣ್ಣ (HD Revanna) ಅವರ ಮುಖದಲ್ಲಿ ಮುಗುಳ್ನಗು ಮಾಸಿಲ್ಲ. ಇವತ್ತು ಬೆಂಗಳೂರಿಗೆ ಆಗಮಿಸಿದ ಅವರನ್ನು ಮಾಧ್ಯಮ ಪ್ರತಿನಿಧಿಗಳು ಸೂರಜ್ ರೇವಣ್ಣ (Suraj Revanna) ಬಗ್ಗೆ ಪ್ರಶ್ನೆ ಕೇಳಿದಾಗ ರೇವಣ್ಣ ನಗುತ್ತಲೇ, ನಾನೀಗ ಯಾವುದೇ ಹೇಳಿಕೆ ನೀಡಲ್ಲ. ಇಂಥ ಷಡ್ಯಂತ್ರಗಳಿಗೆಲ್ಲ (conspiracy) ನಾನು ಹೆದರಲ್ಲ, ನನಗೆ ದೇವರ ಮೇಲೆ …

Read More »