Breaking News

ರಾಜ್ಯದಲ್ಲಿ ಜನಪರವಾದ ಮೈತ್ರಿ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್‌ಡಿಕೆ

ತುಮಕೂರು: ರಾಜ್ಯದ ಈಗಿನ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್  ಮೈತ್ರಿಯ ಜನಪರವಾದ, ಜನರಿಗೆ ಗೌರವ ತರುವಂತಹ ಸರ್ಕಾರ ತರಲು ರಾಜ್ಯದ ಜನರು ಆಶೀರ್ವಾದ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು. ತುಮಕೂರು ತಾಲೂಕು ಮುಳಕುಂಟೆ ಗ್ರಾಮದಲ್ಲಿ ಮಂಗಳವಾರ ನಡೆದ ವಿಜಯ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ, ದೇವಸ್ಥಾನದಲ್ಲಿ ದೇವಿಯ ದರ್ಶನ ಮಾಡಿ …

Read More »

ಮೇ 10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು: ಇದೇ ಮೇ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.

Read More »

ದೀದಿಗೆ ಮಣ್ಣುಮುಕ್ಕಿಸಿದ ‘ಬಂಗಾಳದ ಹುಲಿ’ ಸುವೇಂದು ಅಧಿಕಾರಿ ಮುಸ್ಲಿಂ ಮತದಾರರ ಬಗ್ಗೆ ಸ್ಪೋಟಕ ಹೇಳಿಕೆ! ಹೇಳಿದ್ದೇನು? 

ಇಡೀ ದೇಶವೇ ಕುತೂಹಲದಿಂದ ನೋಡುತ್ತಿದ್ದ ಭವಾನಿಪುರದ ಮಹಾಸಂಗ್ರಾಮದಲ್ಲಿ ದೀದಿಯನ್ನೇ ಸೋಲಿಸಿ ಇತಿಹಾಸ ಬರೆದ ಸುವೇಂದು ಅಧಿಕಾರಿ ಅವರು ಈಗ ನೀಡಿರುವ ಒಂದು ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮಮತಾ ಬ್ಯಾನರ್ಜಿ ಅವರ ಅತಿ ನಿಕಟವರ್ತಿಯಾಗಿದ್ದು, ನಂತರ ಬಿಜೆಪಿಗೆ ಸೇರಿ ದೀದಿಯ ವಿರುದ್ಧವೇ ತೊಡೆತಟ್ಟಿದ್ದ ಸುವೇಂದು ಅಧಿಕಾರಿ, ತಮ್ಮ ಗೆಲುವಿನ ನಂತರ ಮುಸ್ಲಿಂ ಮತದಾರರ ನಡೆಯ ಬಗ್ಗೆ ಅಚ್ಚರಿಯ ಸಂಗತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಸುವೇಂದು ಅಧಿಕಾರಿ ಹೇಳಿದ್ದೇನು? ಗೆಲುವಿನ ನಂತರ ಮಾಧ್ಯಮಗಳೊಂದಿಗೆ …

Read More »

ವಿಡಿಯೋ ಕಾಲ್‌ನಲ್ಲಿ ಮಗು ತೋರಿಸಿಲ್ಲವೆಂದು ಅತ್ತೆಗೆ ಚಾಕು ಇರಿದ ಪಾಪಿ ಅಳಿಯ!

ಬೆಳಗಾವಿ : ಕ್ಷುಲ್ಲಕ ಕಾರಣಕ್ಕಾಗಿ ಅಳಿಯನೊಬ್ಬ ತನ್ನ ಅತ್ತೆಗೆ ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಮಂಟೂರಿನ ಅರವಿಂದ ಗವಳಿ(26) ಎಂಬಾತನಿಗೆ ಮಹಾದೇವಿ ಕರಿಗಾರ(45) ಎಂಬುವವರು ಒಂದೂವರೆ ವರ್ಷದ ಹಿಂದೆ ತಮ್ಮ ಮಗಳನ್ನು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಎರಡು ತಿಂಗಳ ಹಿಂದೆಯಷ್ಟೇ ಮಗಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಆಕೆ ತವರು ಮನೆಯಲ್ಲಿದ್ದಾಳೆ. ಆದರೆ, ಅಳಿಯ …

Read More »

ರಜನಿ, ಕಮಲ್ ಮಾಡದ ಸಾಧನೆ ‘ದಳಪತಿ’ ವಿಜಯ್‌ಗೆ ಹೇಗೆ ಸಾಧ್ಯವಾಯಿತು? ಇಲ್ಲಿದೆ ಅಸಲಿ ‘ಸಕ್ಸಸ್’ ಸೀಕ್ರೆಟ್! 

ತಮಿಳುನಾಡು ಚುನಾವಣಾ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯ ಬರೆಯಲಾಗಿದೆ. ಸೂಪರ್‌ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬಂದು ಹಿಂದೆ ಸರಿದರು, ‘ಉಳಗನಾಯಗನ್’ ಕಮಲ್ ಹಾಸನ್ ಪಕ್ಷ ಕಟ್ಟಿದರೂ ಹೇಳಿಕೊಳ್ಳುವ ಯಶಸ್ಸು ಕಾಣಲಿಲ್ಲ. ಆದರೆ ವಿಜಯ್ ಮಾತ್ರ ಮೊದಲ ಯತ್ನದಲ್ಲೇ ಸೆಂಚುರಿ ಬಾರಿಸಿದ್ದು ಹೇಗೆ? ವಿಜಯ್ ಅವರ ಗೆಲುವಿನ ಹಿಂದೆ ಈ ಕೆಲವು ಮುಖ್ಯ ಕಾರಣಗಳಿವೆ: 1. “ಕ್ಯಾಮಿಯೋ ಅಲ್ಲ, ಫುಲ್ ಟೈಮ್ ರೋಲ್!” ರಜನಿಕಾಂತ್ ವರ್ಷಗಟ್ಟಲೆ ಯೋಚಿಸಿ ಕೊನೆಗೆ ಹಿಂದೆ ಸರಿದರು. ಕಮಲ್ …

Read More »

ಸಚಿವ ಜಮೀರ್ ಮನೆಯಲ್ಲೇ ಕೈಚಳಕ ತೋರಿಸಿದ ‘ಅತ್ತೆ’ ಮಗ! ಬರೋಬ್ಬರಿ 1.13 ಕೋಟಿಯ ಚಿನ್ನಾಭರಣ ಮಾಯ! 

ಬೆಂಗಳೂರು: ಯಾವಾಗಲೂ ಹೈ ಸೆಕ್ಯೂರಿಟಿ, ಸಿಸಿಟಿವಿ ಕಣ್ಗಾವಲು, ಅನುಮತಿ ಇಲ್ಲದೆ ಯಾರೂ ಪ್ರವೇಶಿಸಲು ಸಾಧ್ಯವಿಲ್ಲದ ಸಚಿವ ಜಮೀರ್ ಅಹ್ಮದ್ ಅವರ ಐಷಾರಾಮಿ ಮನೆಯಲ್ಲೇ ಈಗ ಭಾರೀ ಕಳ್ಳತನ ನಡೆದಿದೆ! ಆದರೆ ಇಲ್ಲಿ ಕನ್ನ ಹಾಕಿದ್ದು ಯಾರೋ ಹೊರಗಿನ ಕಳ್ಳರಲ್ಲ, ಬದಲಾಗಿ ಸ್ವಂತ ಸಂಬಂಧಿಕನೇ ಎಂಬುದು ಈಗ ಬಯಲಾಗಿದೆ. ಏನಿದು ಘಟನೆ? ಜಮೀರ್ ಅಹ್ಮದ್ ಅವರ ತಾಯಿಯ ಹತ್ತಿರದ ಸಂಬಂಧಿ ಸೈಯದ್ ಅಮೀನ್ ಮತ್ತು ಆತನ ಸ್ನೇಹಿತ ಅಮೀರ್ ಅಹ್ಮದ್ ಎಂಬುವವರನ್ನು …

Read More »

ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ

ಬೆಂಗಳೂರು: 48 ವರ್ಷಗಳ ಕನ್ನಡ ಹೋರಾಟದಲ್ಲಿ ನಾನು ಯಾವತ್ತೂ ರಾಜಿ ಆಗಿಲ್ಲ. ಅದಕ್ಕೆ ಶಕ್ತಿ, ಸ್ಫೂರ್ತಿ ಡಾ. ರಾಜ್‌ಕುಮಾರ್ ಎಂದು ಹೇಳುವ ಮೂಲಕ ನಟ ಚೇತನ್ ಅಹಿಂಸಾ  ಅವರ ಆರೋಪಕ್ಕೆ ನಿರ್ಮಾಪಕ ಸಾ.ರಾ ಗೋವಿಂದು  ತಿರುಗೇಟು ನೀಡಿದರು. ರಾಜ್‌ಕುಮಾರ್ ಸಮಾಧಿ ವಿಚಾರದಲ್ಲಿ ಸಾರಾ ಗೋವಿಂದು ವಿರುದ್ಧ ನಟ ಚೇತನ್ ದೂರು ನೀಡಿದ್ದ ವಿಚಾರಕ್ಕೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಎಲ್ಲಿಂದ ಬಂದಿದೀಯ, ಸಂಸ್ಕೃತಿ ಇಲ್ವಾ ನಿನಗೆ? ಡಾ. ರಾಜ್‌ಕುಮಾರ್ ಅವರ ಬಗ್ಗೆ …

Read More »

ಅಂಚೆ ಮತಗಳ ತಿರುಚಿದ ಆರೋಪ – ಶಾಸಕ ಜೀವರಾಜ್ ವಿರುದ್ಧ ದಾಖಲಾಗಿದ್ದ FIRಗೆ ಹೈಕೋರ್ಟ್ ಮಧ್ಯಂತರ ತಡೆ

ಚಿಕ್ಕಮಗಳೂರು: ಅಂಚೆ ಮತಗಳನ್ನ ತಿರುಚಿದ ಆರೋಪದ ಮೇಲೆ ಶೃಂಗೇರಿ ಶಾಸಕ ಜೀವರಾಜ್ ಮೇಲೆ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತನ್ನ ಮೇಲಿನ ಕ್ರಿಮಿನಲ್ ಪ್ರಕರಣ ರದ್ದುಪಡಿಸುವಂತೆ ಕೋರಿ ಜೀವರಾಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ನ್ಯಾಯಮೂರ್ತಿ ಶ್ರೀಶಾನಂದ ಅವರ ರಜಾಕಾಲದ ಪೀಠ ಇಂದು (ಮೇ 5) ಅರ್ಜಿ ವಿಚಾರಣೆ ನಡೆಸಿದ್ದು, ಸರ್ಕಾರದ ನಡೆಗೆ ಎಸ್‌ಪಿಪಿ ಬೆಳ್ಳಿಯಪ್ಪ ಮೇಲೆ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. 2023ರ ಮೇ 13ರಂದು ನಡೆದ ಘಟನೆಗೆ …

Read More »

ಕೇಂದ್ರ ಚುನಾವಣಾ ಆಯುಕ್ತರಿಂದ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆದ್ದಿದೆ: ಸಂತೋಷ್ ಲಾಡ್

ಬೆಂಗಳೂರು: ಪಶ್ಚಿಮ ಬಂಗಾಳ  ಮತ್ತು ಅಸ್ಸಾಂನಲ್ಲಿ ಕೇಂದ್ರ ಚುನಾವಣೆ ಆಯುಕ್ತ ಜ್ಞಾನೇಶ್ ಕುಮಾರ್‌ರಿಂದ  ಬಿಜೆಪಿಗೆ  ಗೆಲುವಾಗಿದೆ ಎಂದು ಸಚಿವ ಸಂತೋಷ್ ಲಾಡ್  ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಪಂಚರಾಜ್ಯ ಚುನಾವಣೆ ಮತ್ತು ಉಪ ಚುನಾವಣೆ ಫಲಿತಾಂಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ 2 ಕ್ಷೇತ್ರದಲ್ಲಿ ನಾವು ಗೆದ್ದಿದ್ದೇವೆ. ಸರ್ಕಾರದ ಕಾರ್ಯಕ್ರಮ ಅದರ ಜೊತೆ ಕಾರ್ಯಕರ್ತರು, ಮುಖಂಡರ ಕೆಲಸದಿಂದ ಜನ ವೋಟ್ ಹಾಕಿ ಗೆಲ್ಲಿಸಿದ್ದಾರೆ ಎಂದು …

Read More »

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ  ದಿನ ಕಳೆದಂತೆ ಸ್ವಾಮೀಜಿ  ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ಜೋರಾಗುತ್ತಿದೆ. ಈ ಹಿನ್ನೆಲೆ ಮಠದಲ್ಲಿ ಸಭೆ, ಸಮಾರಂಭ ಮಾಡದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಮಠದಲ್ಲಿ ಕಳೆದ ಮಾ.10 ರಿಂದ ಎರಡು ಕಡೆ ಬೆಂಬಲಿಗರಿಂದ ಸಭೆ, ಸಮಾರಂಭ, ಸುದ್ದಿಗೋಷ್ಠಿಗಳು ನಡೆಯುತ್ತಿವೆ. ಇವುಗಳು ವಿಕೋಪಕ್ಕೆ ತಿರುಗಿದ್ದು, ಗಲಾಟೆಗಳು, ಪ್ರಚೋದನಕಾರಿ ಹೇಳಿಕೆಗಳು ಬರುತ್ತಿವೆ. ಇದರಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ, ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಪೊಲೀಸ್‌ ಇಲಾಖೆ …

Read More »