Breaking News

ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಕಂಪ್ಲಿ (ಬಳ್ಳಾರಿ): ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಕರಡಿಗಳು ಕಾಣಿಸಿಕೊಂಡಿದ್ದು, ಅವುಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭವಾಗಿದೆ. ಗ್ರಾಮದ ಅಮರೇಗೌಡ ಅವರು ವಾಯು ವಿಹಾರಕ್ಕೆ ತೆರಳಿದಾಗ ತುಂಗಾಭದ್ರಾ ಬಲದಂಡೆಯ ಕೆಳಮಟ್ಟದ ಕಾಲುವೆ ಬಳಿ ಎರಡು ಕರಡಿಗಳು ಕಾಣಿಸಿಕೊಂಡಿವೆ. ತಕ್ಷಣ ಗ್ರಾಮಕ್ಕೆ ಮರಳಿದ ಅವರು ವಿಷಯ ತಲುಪಿಸಿದ್ದಾರೆ. ಬಳಿಕ ಎರಡು ಕರಡಿಗಳು ಗ್ರಾಮದಲ್ಲೂ ಕಾಣಿಸಿಕೊಂಡಿವೆ. ಗ್ರಾಮಸ್ಥರು ಗಲಾಟೆ ಮಾಡಿದ್ದರಿಂದ ಒಂದು ದೇವಸಮುದ್ರ-ಕಂಪ್ಲಿ ಸಂಪರ್ಕಿಸುವ ಕ್ರಾಸ್ ಕಡೆ ಓಡಿ ಹೋಗಿದೆ. ಮತ್ತೊಂದು …

Read More »

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ …

Read More »

ʻPSIʼ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ

ಬೆಂಗಳೂರು : ಪಿಎಸ್‌ ಐ ನೇಮಕಾತಿ ವಿಚಾರ ಅಂತಿಮ ಹಂತದಲ್ಲಿದ್ದು, ಈ ವಾರ ಅಥವಾ ಮುಂದಿನ ವಾರದಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ತಾಂತ್ರಿಕ ಪ್ರಶ್ನೆಗಳನ್ನು ತೆಗೆಯಲಾಗಿದೆ. ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುತ್ತೇವೆ. ಈ ಸಂಬಂಧ ನಾನು ಎರಡು-ಮೂರು ಸಭೆ ನಡೆಸಿದ್ದೇನೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ತೀರ್ಮಾಣ ಕೈಗೊಳ್ಳಾಗುವುದು ಎಂದು ಹೇಳಿದ್ದಾರೆ. ಇನ್ನು ದರ್ಶನ್‌ …

Read More »

ಯದ್ವಾತದ್ವಾ ಕಾರು ಓಡಿಸಿ ಮಹಿಳೆಗೆ ಡಿಕ್ಕಿ ಹೊಡೆದ ಬಾಲಕ : ಶಾಕಿಂಗ್ ವಿಡಿಯೋ ವೈರಲ್

ಬಾಲಕನೋರ್ವ ಯದ್ವಾತದ್ವಾ ಕಾರು ಓಡಿಸಿ ಮಹಿಳೆಗೆ ಡಿಕ್ಕಿ ಹೊಡೆದ ಅಪಘಾತದ ವಿಡಿಯೋವೊಂದು ವೈರಲ್ ಆಗಿದೆ. ಪುಣೆಯಲ್ಲಿ ಮೇ 19 ರಂದು ಕಲ್ಯಾಣಿ ನಗರದಲ್ಲಿ 17 ವರ್ಷದ ಬಾಲಕನೊಬ್ಬ ತನ್ನ ಪೋರ್ಷೆ ಸ್ಪೋರ್ಟ್ಸ್ ಕಾರಿನಿಂದ ಇಬ್ಬರಿಗೆ ಡಿಕ್ಕಿ ಹೊಡೆದ ಘಟನೆಯನ್ನು ಜನರು ಮರೆತಿಲ್ಲವಾದರೂ, ಆಳಂಡಿಯಲ್ಲಿ ನಡೆದ ಮತ್ತೊಂದು ಭಯಾನಕ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಈ ಘಟನೆಯಲ್ಲಿ, 17 ವರ್ಷದ ಇನ್ನೊಬ್ಬ ಬಾಲಕ ಯದ್ವಾತದ್ವಾ ಕಾರು ಚಲಾಯಿಸಿ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ …

Read More »

ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ʻKSRTCʼಯಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ!

ಬೆಂಗಳೂರು : ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಕೆಎಸ್‌ ಆರ್‌ ಟಿಸಿ (KSRTC) ಸಿಹಿಸುದ್ದಿ ನೀಡಿದ್ದು, ಬಸ್‌ ಗಳಲ್ಲಿನ ರಶ್‌ ತಪ್ಪಿಸಲು 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧಾರ ಮಾಡಿದೆ. ಕೆಎಸ್‌ ಆರ್‌ ಟಿಸಿ ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ. ಕೆಎಸ್‌ಆರ್​​ಟಿಸಿಗೆ ಸೇರ್ಪಡೆಯಾಗಿರುವ 814 ಬಸ್‌ಗಳ ಪೈಕಿ …

Read More »

ಬೆಳಗಾವಿ: ಇನ್ನೂ ಪೂರೈಕೆಯಾಗದ ಸಮವಸ್ತ್ರ

ಬೆಳಗಾವಿ: 2024-25ನೇ ಸಾಲಿನ ತರಗತಿ ಆರಂಭವಾಗಿ ಮೂರು ವಾರವಾದರೂ, ಇನ್ನೂ ಹಲವು ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರದ ಬಟ್ಟೆ ವಿತರಣೆಯಾಗಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಳೇ ಸಮವಸ್ತ್ರದಲ್ಲೇ ಶಾಲೆಯತ್ತ ಹೆಜ್ಜೆ ಹಾಕುವುದು ಅನಿವಾರ್ಯವಾಗಿದೆ. ಪ್ರತಿವರ್ಷ ಶಾಲಾ ಆರಂಭೋತ್ಸವ ದಿನವೇ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ಸಮವಸ್ತ್ರದ ಬಟ್ಟೆ ನೀಡಲಾಗುತ್ತಿತ್ತು. 8ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಚೂಡಿದಾರ್‌ ಬಟ್ಟೆ ಕೊಡಲಾಗುತ್ತಿತ್ತು. ಈ ವರ್ಷದಿಂದ ತಮಗೂ ಚೂಡಿದಾರ್‌ ಬಟ್ಟೆ ಸಿಗುತ್ತದೆ ಎಂದು 6 ಮತ್ತು …

Read More »

ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಸಂಘ ಸಹಕಾರಿ: ಉದ್ಯಮಿ ರಾಜು ಶೆಟ್ಟಿ

ಯರಗಟ್ಟಿ: ‘ಮಹಿಳೆಯರು ಸ್ವಂತ ಉದ್ಯೋಗ ಮಾಡಲು ತರಬೇತಿ ನೀಡುವ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಹಕಾರಿಯಾಗಿದೆ’ ಎಂದು ಹೋಟೆಲ್‌ ಉದ್ಯಮಿ ರಾಜು ಶೆಟ್ಟಿ ಹೇಳಿದರು. ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ವೀಲ್ ಚೇರ್ ಮತ್ತು ವಾಟರ್ ಬೆಡ್ ವಿತರಿಸಿ ಅವರು ಮಾತನಾಡಿದರು. ಸಂಸ್ಥೆಯ ಜಿಲ್ಲಾ ನಿರ್ದೇಶಕ ಲವಕುಮಾರ ಮಾತನಾಡಿ, ‘ಸಂಸ್ಥೆ ಮಹಿಳೆಯರ ಅಭಿವೃದ್ಧಿ ಜೊತೆಗೆ ಕುಟಂಬದ ಪ್ರಗತಿಗೂ ಹಲವು ಯೋಜನೆ …

Read More »

ರಾಯಬಾಗ: ಕೆರೆ-ಕೊಳ್ಳಗಳು ಭರ್ತಿ

ರಾಯಬಾಗ: ಕೆರೆ-ಕೊಳ್ಳಗಳು ಭರ್ತಿಯಾದರೆ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿ ಜನರಿಗೆ ನೀರಿನ ಬವಣೆ ತಪ್ಪುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಹೇಳಿದರು. ತಾಲ್ಲೂಕಿನ ನಂದಿಕುರಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಣೆ ಮಾಡಿ ಅವರು ಮಾತನಾಡಿದರು. ಶಿವನಗೌಡ ಪಾಟೀಲ ಮಾತನಾಡಿ, ‘ವರುಣನ ಕೃಪಾ ಕಟಾಕ್ಷದಿಂದ ಮಳೆ ಬಂದು ಹಲವಾರು ಕೆರೆ, ಕಟ್ಟೆಗಳಿಗೆ ನೀರು ಅಲ್ಪ ಸ್ವಲ್ಪ ಬಂದಿದೆ. ಹಳ್ಳ ಕೊಳ್ಳಗಳು ಹರಿದಿರುವುದರಿಂದ ಕುಡಿಯುವ ನೀರಿನ ಅಭಾವ ತಪ್ಪಿದಂತಾಗಿದೆ. ದನ ಕರುಗಳಿಗೆ ಮೇವಿನ …

Read More »

ರೇಣುಕಸ್ವಾಮಿ ಕೊಲೆ ಪ್ರಕರಣ| ಕಲಾವಿದರ ವ್ಯಕ್ತಿತ್ವ ಮಾದರಿಯಾಗಿರಲಿ: ಕೂಡಲಸಂಗಮಶ್ರೀ

ರೇಣುಕಸ್ವಾಮಿ ಕೊಲೆ ಪ್ರಕರಣ| ಕಲಾವಿದರ ವ್ಯಕ್ತಿತ್ವ ಮಾದರಿಯಾಗಿರಲಿ: ಕೂಡಲಸಂಗಮಶ್ರೀ   ಅಥಣಿ : ‘ಯಾವುದೇ ಕಲಾವಿದರು ಜನರಿಗೆ ಮಾದರಿಯಾಗುವಂಥ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಇಲ್ಲದಿದ್ದರೆ ರೇಣುಕಸ್ವಾಮಿ ಕೊಲೆಯಂಥ ಘಟನೆ ನಡೆಯುತ್ತವೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ರಾಜಕುಮಾರ್, ವಿಷ್ಣುವರ್ಧನ್ ಅವರಂಥ ನಟರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು. ಪರದೆ ಮೇಲೆ ವಿವಿಧ ಪಾತ್ರಗಳನ್ನು ನಿರ್ವಹಿಸುವ ಕಲಾವಿದರು, ವಾಸ್ತವ ಬದುಕಿನಲ್ಲಿ ಜನರಿಗೆ ಮಾದರಿಯಾಗುವಂತೆ …

Read More »

ಚಿಕ್ಕೋಡಿ: ಶಿಕ್ಷಕರ ಕೊರತೆ, ಸುಧಾರಿಸದ ಫಲಿತಾಂಶ

ಚಿಕ್ಕೋಡಿ: ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದರೆ ಸಾಕು ಇಡೀ ರಾಜ್ಯವೇ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯತ್ತ ನೋಡುವ ಕಾಲವೊಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಫಲಿತಾಂಶದ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿಯುತ್ತಲೇ ಇದೆ. ಜಿಲ್ಲೆಯಲ್ಲಿ ಸಾಕಷ್ಟು ಶಿಕ್ಷಕರ ಕೊರತೆ ಇರುವುದೇ ಇದಕ್ಕೆ ಕಾರಣ ಎನ್ನುವುದು ಶಿಕ್ಷಣ ತಜ್ಞರ ಅಭಿಮತ. ಈ ಬಾರಿಯ ಫಲಿತಾಂಶ ಕೂಡ ಇದನ್ನೇ ಸಾಬೀತು ಮಾಡುವಂತಿದೆ. ಕುಸಿಯುತ್ತಿರುವ ಫಲಿತಾಂಶದ ಜತೆಗೆ ಗರಿಷ್ಠ ಫಲಿತಾಂಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕೂಡ ಕಡಿಮೆಯಾಗುತ್ತ ಸಾಗಿದೆ. ಹಿಂದೆ …

Read More »