ಕಲಬುರಗಿ: ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಯ ಪರ ಮತಯಾಚಿಸಿದ್ದ ಮೋದಿ ಹಾಗೂ ಅಮಿತ್ ಶಾ ಈಗಲಾದರೂ ಉತ್ತರಿಸಿಲಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಆಗ್ರಹಿಸಿದರು. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಕಾಂಗ್ರೆಸ್ ಪರ ಮತಯಾಚಿಸಿ ಮಾತನಾಡಿದ ಅವರು, ಮಹಿಳೆಯರ ಅತ್ಯಾಚಾರ ಎಸಗಿದ ಅದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ವಿದೇಶಕ್ಕೆ …
Read More »ಎಸ್ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ 18 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿಯಿದ್ದು, ವಿಡಿಯೋದಲ್ಲಿರುವ ಮಹಿಳೆಯರ ತನಿಖೆಗೆ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ ಎಂದು ಗೊತ್ತಾಗಿದೆ. ವಿಶೇಷ ತನಿಖಾ ತಂಡದಿಂದ ತನಿಖೆ ಚುರುಕಾಗುತ್ತಿದ್ದು, ವಿಡಿಯೋ ಪರಿಶೀಲನೆಗೆ ಪ್ರತ್ಯೇಕ ಟೀಂ ಮಾಡಲಾಗಿದೆ. ಇನ್ಸ್ಪೆಪಕ್ಟರ್ ಸೇರಿ ನಾಲ್ವರ ಪ್ರತ್ಯೇಕ ತಂಡದಿಂದ …
Read More »ರಾಕೇಶ್ ಸಾವಿನ ರಹಸ್ಯವೂ ಬಯಲಾಗಲಿದೆ.’ ಎಂದ ಹೆಚ್ಡಿಕೆ!
ಹುಬ್ಬಳ್ಳಿ: ಹಾಸನದ ಸಂಸದ ಹೆಚ್ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ರಹಸ್ಯವನ್ನೂ ಬಯಲಿಗೆ ತರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ಡಿಕೆ, ಸಿದ್ದರಾಮಯ್ಯ ಅವರ ಮನೆಯಲ್ಲಿ ನಡೆದ ವಿಚಾರವನ್ನು ಹೊರಗಡೆ …
Read More »HDK vs DKS: ಪೆನ್ಡ್ರೈವ್ ಪ್ರಕರಣಕ್ಕೆ ಆ ‘ಮಹಾನಾಯಕ’ ಕಾರಣ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಗರಂ
ಬೆಂಗಳೂರು, ಏಪ್ರಿಲ್ 30: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಹಳೆಯದು ಎಂದು ಹೇಳಿದ್ದಾರೆ. ಹಾಗಾದರೆ ಚುನಾವಣೆ ಹೊತ್ತಲ್ಲಿ ಎಳೆದು ತಂದವರು ಯಾರು, ಆ ಮಹಾನಾಯಕನ ಕೈಗೆ ಪೆನ್ಡ್ರೈವ್ ಸಿಕ್ಕಿದ್ದು ಹೇಗೆ? ಇದಕ್ಕೆಲ್ಲ ಅವರೇ ಕಾರಣ. ಕಾಂಗ್ರೆಸ್ ಪುಡಾರಿಗಳು ನನ್ನ ಮನೆ ಮುಂದೆ ಪ್ರತಿಭಟನೆ ಮಾಡುವ ಅವಶ್ಯಕತೆ ಇದಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್ಡಿ ಕುಮಾರಸ್ವಾಮಿ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಮಂಗಳವಾರ ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ …
Read More »ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
ಚಿಕ್ಕಬಳ್ಳಾಪುರ: ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ತಾಲೂಕು ಪಂಚಾಯತ್ ಇಒ ಒಬ್ಬರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕು ಪಂಚಾಯತ್ ನಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕು ಪಂಚಾಯತ್ ನ ಇಒ ಮುನಿರಾಜು ಲೋಕಾಯುಕ್ತ ಬಲೆಗೆ ಬಿದ್ದ ಅದಿಕಾರಿಯಾಗಿದ್ದಾರೆ. ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿ ಘಟ್ಟಮಾರನಹಳ್ಳಿ ಗ್ರಾಮದ 39 ಗುಂಟೆ ಭೂಪರಿವರ್ತಿತ ಜಮೀನಿಗೆ ಪ್ಲಾನ್ ಮಾಡಿಕೊಡಲು ನಂಜೇಗೌಡ …
Read More »60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
ಬೆಳಗಾವಿ: ದೇಶದಲ್ಲಿ ಸತತ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಮೇಲೆ ಶೋಷಣೆ ನಡೆಯುತ್ತಿದೆ ಎಂದು ಕೇಂದ್ರ ಕರ್ಮಚಾರಿ ನಿಗಮದ ಮಾಜಿ ಸದಸ್ಯ ಜಗದೀಶ ಹಿರೇಮನಿ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ದಲಿತ ಜನರಿಗೆ ಶಾಪವಾಗಿ ಪರಿಣಮಿಸಿದೆ. ಈ ರಾಜ್ಯ ಸರಕಾರ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಚಿಪ್ ಕೊಟ್ಟಿದೆ. ಅಲ್ಲದೆ ದಲಿತರ ಅಭಿವೃದ್ಧಿಗಾಗಿ ಮೀಸಲಿದ್ದ ಹಣವನ್ನು …
Read More »5 ವರ್ಷದವರೆಗೆ ಯಾಕೆ ಬಾಯಿ ಮುಚ್ಚಿಕೊಂಡಿದ್ರು? ‘ ಸಂತ್ರಸ್ತೆ ವಿರುದ್ಧ ತಿರುಗಿಬಿದ್ದ ಕುಟುಂಬ
ಹಾಸನ : ಲೈಂಗಿಕ ದೌರ್ಜನ್ಯ ಆರೋಪ(Sexual harassment case) ವಿಚಾರದಲ್ಲಿ ಟ್ವಿಸ್ಟ್ ಸಿಕ್ಕಿದ್ದು ಸಂತ್ರಸ್ತೆ(Victim) ದೂರಿನ ವಿರುದ್ದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಸುದ್ದಿಘೋಷ್ಟಿ ನಡೆಸಿದ ಸಂತ್ರಸ್ತೆಯ ಗಂಡನ ತಾಯಿ ಮತ್ತು ಕುಟುಂಬಸ್ಥರು, ಸಂತ್ರಸ್ತೆ ಹಾಗೂ ದೂರುದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ದೇವೇಗೌಡರು ಕುಟುಂಬದವರು ನಮಗೆ ಎಂದೂ ಮೋಸ ಮಾಡಿಲ್ಲ, ನಮಗೆ ಒಳ್ಳೆಯದನ್ನೇ ಮಾಡಿದ್ದಾರೆ, ಭವಾನಿ ಅಮ್ಮ ನಮಗೆ ತುಂಬಾ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ. ದೂರು ನೀಡಿದ ಮಹಿಳೆ …
Read More »ಚಿನ್ನದ ಬೆಲೆ ಭರ್ಜರಿ ಇಳಿಕೆ
ಚಿನ್ನ ಖರೀದಿ ಮಾಡಬೇಕು ಎಂದು ಕಾಯುತ್ತಿರುವ ಮಹಿಳೆಯರಿಗೆ ಹಾಗೂ ಚಿನ್ನವನ್ನು ತುಂಬಾ ಇಷ್ಟಪಡುವ ಜನರಿಗೆ ಇಲ್ಲಿದೆ ಗುಡ್ನ್ಯೂಸ್. ಯಾಕಂದ್ರೆ ದಿಢೀರ್ ಚಿನ್ನದ ಬೆಲೆ ಇಳಿಕೆ ಆಗಿದೆ. ಹಾಗಾದ್ರೆ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ? ಸದ್ಯ ಚಿನ್ನವನ್ನ ಖರೀದಿ ಮಾಡಬಹುದಾ? ಬನ್ನಿ ತಿಳಿಯೋಣ. ಏಪ್ರಿಲ್ ತಿಂಗಳಲ್ಲಿ ಚಿನ್ನಕ್ಕೆ ಭರ್ಜರಿ ಬೇಡಿಕೆ ಬಂದಿತ್ತು, ಹಾಗೇ ಭರ್ಜರಿ ಏರಿಕೆಯನ್ನ ಕೂಡ ಕಂಡಿತ್ತು ಚಿನ್ನ. ಆದ್ರೆ ಇದೀಗ ನಿಧಾನವಾಗಿ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ …
Read More »ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ
ವಿಡಿಯೋ ವಿವಾದಕ್ಕೆ ಡಿ.ಕೆ.ಶಿವಕುಮಾರ್ ಕಾರಣ: ಕುಮಾರಸ್ವಾಮಿ ಆರೋಪ ನವದೆಹಲಿ: ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ಟೇಪ್ ವಿವಾದದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. “ಇದಕ್ಕೆ ಪುರಾವೆ ಏನು? ವೀಡಿಯೊಗಳಲ್ಲಿ ಪ್ರಜ್ವಲ್ ಮುಖ ಕಾಣಿಸುತ್ತಿದೆಯೇ? ಆದರೂ ನಾವು ನೈತಿಕ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಗೆ ಕೆಲವೇ ಗಂಟೆಗಳ ಮೊದಲು ಕುಮಾರಸ್ವಾಮಿ ಹೇಳಿದರು. ಕೇಂದ್ರ ಗೃಹ …
Read More »ಸುಣಧೋಳಿಯ ಜಡಿಸಿದ್ಧೇಶ್ವರ ಜಾತ್ರಾ ಮಹೋತ್ಸವ: ರಂಗೇರಿದ ಜಂಗೀ ಕುಸ್ತಿಗಳು
ಮೂಡಲಗಿ: ಎತ್ತ ಕಣ್ಣು ಹಾಯಿಸಿದರೂ ಕುಸ್ತಿ ಪೈಲ್ವಾನರು ಮತ್ತು ಪೈಲ್ವಾನರನ್ನು ಹುರದುಂಬಿಸುವ ಕುಸ್ತಿ ಅಭಿಮಾನಗಳು. ಒಂದೊಂದು ಜೋಡಿಗಳು ಕುಸ್ತಿ ಅಖಾಡಕ್ಕೆ ಇಳಿಯುತ್ತಿದ್ದಂತೆ ಸೇರಿದ ಜನರು ಹೋ ಎಂದು ಚಪ್ಪಾಳೆಯೊಂದಿಗೆ ಪೈಲ್ವಾನರನ್ನು ಬರಮಾಡಿಕೊಳ್ಳುತ್ತಿದ್ದರು. ‘ಹಾಕು ಪೇಚು, ಒಗಿ ಡಾವು, ಚಿತ್ ಮಾಡು ಎಂದೆಲ್ಲ ಚಪ್ಪಾಳೆ ತಟ್ಟೆ, ಸಿಳ್ಳೇ ಹಾಕಿ ಜಟ್ಟಿಗಳನ್ನು ಸೇರಿದ ಪ್ರೇಕ್ಷಕರು ಹುರುದುಂಬಿಸುತ್ತಿದ್ದರು’ ಇದು ಮೂಡಲಗಿ ತಾಲ್ಲೂಕಿನ ಪವಾಡ ಪ್ರಸಿದ್ಧಿಯ ಸುಣಧೋಳಿಯ ಜಡಿಸಿದ್ಧೇಶ್ವರ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಕುಸ್ತಿ ಹಣಹಣಿಯ ಚಿತ್ರಣ. …
Read More »
Laxmi News 24×7