ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಓಬಲದಿನ್ನಿ ಗ್ರಾಮದ ಶ್ರೀ ಲಕ್ಕಮ್ಮಾ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಳ,
ಮಳೆಗಾಲ ಆರಂಭವಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಹಾರಂಗಿ, ಲಿಂಗನಮಕ್ಕಿ, ವರಾಹಿ, ಕಬಿನಿ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಹಾಗಾದರೆ ಜೂನ್ 15 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಜಲಾಶಯಗಳ ನೀರಿನ …
Read More »ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ
ಬೆಂಗಳೂರು, ಜೂನ್ 15: ಬೆಂಗಳೂರಿನ (Bengaluru) ಸಾಕ್ಷರತೆ ಹೆಚ್ಚಿಸುವಲ್ಲಿ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಶಾಲೆಗಳ ಪಾತ್ರ ದೊಡ್ಡದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದೀಗ ಈ 2024-25ನೇ ಶೈಕ್ಷಣಿಕ ಸಾಲಿನ ಶಾಲೆ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಬಿಬಿಎಂಪಿ ಶಾಲೆಯಿಂದಲೂ ಬಡವರ ಮಕ್ಕಳು ದೂರ ಉಳಿಯುತ್ತಿದ್ದಾರೆ. ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ …
Read More »ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ,
ಯಾದಗಿರಿ, ಜೂನ್.15: ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡ ಘಟನೆ ನಿನ್ನೆ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಯಾದಗಿರಿ (Yadgir) ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ ವಾಂತಿ ಭೇದಿ ಕಂಡು ಬಂದಿದ್ದು ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಈ ನಾಲ್ಕು ಶಾಲೆಗಳಿಗೂ ಖಾಸಗಿ …
Read More »ನಿತ್ಯಭವಿಷ್ಯ: ಈ ರಾಶಿಯವರಿಂದು ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭದಿನ.
ಮೇಷ: ಆಸ್ತಿ ವಿಚಾರದ ಮಾತುಕತೆ. ಉದ್ಯೋಗದಲ್ಲಿ ಉನ್ನತಿ. ಮಕ್ಕಳಿಂದ ಶುಭವಾರ್ತೆ. ಪ್ರಭಾವಿ ವ್ಯಕ್ತಿಗಳ ಭೇಟಿಯಾಗುವುದು. ಶುಭಸಂಖ್ಯೆ: 5 ವೃಷಭ: ಆರೋಗ್ಯದ ಕಡೆ ಗಮನವಿರಲಿ. ದಾಂಪತ್ಯದಲ್ಲಿ ಸಾಮರಸ್ಯ ಮೂಡಿಸಲು ಬಂಧುಗಳ ಸಹಾಯ. ವಿದ್ಯಾರ್ಥಿಗಳಿಗೆ ಪ್ರಗತಿ.ಶುಭಸಂಖ್ಯೆ:1 ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ. ಮನೆಗೆ ಆತ್ಮೀಯರ ಆಗಮನ. ಹೂವು ಹಣ್ಣು ವ್ಯಾಪಾರಿಗಳಿಗೆ ನಷ್ಟವಾಗುವುದು. ಶುಭಸಂಖ್ಯೆ: 5 ಕಟಕ: ಪದವಿ ಪ್ರಾಪ್ತಿಯಲ್ಲಿ ಶತ್ರುಗಳ ಕಾಟ. ವ್ಯರ್ಥ ಕಾಲಹರಣ. ನ್ಯಾಯಾಲಯದಲ್ಲಿ ಜಯ. ಮಕ್ಕಳ ವಿಚಾರದಲ್ಲಿ ಗಮನವಿರಲಿ. ಶುಭಸಂಖ್ಯೆ: 8 ಸಿಂಹ: ಕರ್ಮಸ್ಥಾನದ ಗುರುವಿನಿಂದ ಧನ ಲಾಭವಾಗಲಿದೆ. ಹೊಸ ಉದ್ಯೋಗದ …
Read More »LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಎಲ್ಐಸಿ ಆರೋಗ್ಯ ವಿಮಾ ಕ್ಷೇತ್ರ ಪ್ರವೇಶಿ ಸುವ ಅಂಶ ಬಹುತೇಕ ಖಚಿತವಾಗಿದೆ. ಅದಕ್ಕಾಗಿ ದೇಶದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಆರೋಗ್ಯ ವಿಮಾ ಕ್ಷೇತ್ರದ ಲ್ಲಿನ 5 ಅಗ್ರ ಕಂಪೆನಿಗಳ ಪೈಕಿ ಒಂದನ್ನು ಖರೀದಿಸಿ ಹೊಸ ಕ್ಷೇತ್ರಕ್ಕೆ ಕಾಲಿಡುವ ಸಾಧ್ಯತೆ ಇದೆ ಎಂದು ಆಂಗ್ಲ ವಾಣಿಜ್ಯ ಪತ್ರಿಕೆಯೊಂದು ವರದಿ ಮಾಡಿದೆ. ಈ ಉದ್ದೇಶಕ್ಕಾಗಿ ಭಾರತೀಯ ವಿಮಾ ನಿಯಂತ್ರಣ ಅಭಿವೃದ್ಧಿ ಪ್ರಾಧಿಕಾರ (ಐಆರ್ಡಿಎಐ)ಕ್ಕೆ ತಾನು ಜಾರಿಗೊಳಿಸ ಲಿರುವ ಉದ್ದೇಶಿತ ಆರೋಗ್ಯ …
Read More »ಇಂಜಿನಿಯರಿಂಗ್ ಶುಲ್ಕ ಶೇ. 10ರಷ್ಟು ಹೆಚ್ಚಳ
ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳು ಸೇರಿದಂತೆ ಈ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕವನ್ನು ಶೇ. 10ರಷ್ಟು ಏರಿಕೆ ಮಾಡಲಾಗಿದೆ. ರಾಜ್ಯದ ಅನುದಾನ ರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ, ಕಾಮೆಡ್ -ಕೆ ಕೋಟಾ ಇಂಜಿನಿಯರಿಂಗ್, ಆರ್ಕಿಟೆಕ್ಚರ್ ಸೀಟುಗಳ ಶುಲ್ಕವನ್ನು 2024- 25 ನೇ ಸಾಲಿನಲ್ಲಿ ಶೇಕಡ 10ರಷ್ಟು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ …
Read More »ಯಡಿಯೂರಪ್ಪ ವಿರುದ್ಧದ ಬಂಧನ ವಾರಂಟ್ ನಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ: ಎಂ.ಬಿ.ಪಾಟೀಲ್
ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೊರಡಿಸಲಾದ ಬಂಧನ ವಾರಂಟ್ನಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಶುಕ್ರವಾರ ಹೇಳಿದ್ದಾರೆ. ಪೋಕ್ಸೊ ಕಾಯ್ದೆ ತುಂಬಾ ಗಂಭೀರವಾಗಿದೆ, ಮತ್ತು ಚಿತ್ರದುರ್ಗ ಶ್ರೀಗಳ ವಿರುದ್ಧದ ಪ್ರಕರಣವನ್ನು ನೀವು ನೋಡಿದ್ದೀರಿ. ಬಂಧನ ವಾರಂಟ್ ಹೊರಡಿಸಿದ್ದು ನ್ಯಾಯಾಲಯವೇ ಹೊರತು ನಾವಲ್ಲ. ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳುತ್ತದೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ …
Read More »ಜು.22ರಂದು ಬಜೆಟ್ ಮಂಡನೆ
ಹೊಸದಿಲ್ಲಿ: ಪ್ರಧಾನಿ ಮೋದಿ ನೇತೃತ್ವದ 3ನೇ ಅವ ಧಿಯ ಸರಕಾರದ ಪೂರ್ಣ ಪ್ರಮಾಣದ ಬಜೆಟ್ ಜು.22ರಂದು ಮಂಡನೆಯಾಗುವ ಸಾಧ್ಯ ತೆಗಳು ಇವೆ. ಕೃಷಿ, ಉದ್ಯೋಗ ಸೃಷ್ಟಿ, ಕೇಂದ್ರ ಸರಕಾರಕ್ಕೆ ಹೆಚ್ಚುವರಿ ಆದಾಯ ಸೇರಿದಂತೆ ಪ್ರಮುಖ ಅಂಶಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂದೆ ಇದೆ. ಈ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂ.17ರಿಂದ ಕೇಂದ್ರ ಸರಕಾರದ ವಿವಿಧ ಸಚಿವಾಲಯಗಳ ಜತೆಗೆ ಸಮಾಲೋಚನೆ ಆರಂಭಿಸುವ ಸಾಧ್ಯತೆ ಇದೆ. ಇದಲ್ಲದೆ ವಿತ್ತ …
Read More »ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ; C.M.
ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರೊಳಗೆ ಕ್ರಿಯಾ ಯೋಜನೆ ರೂಪಿಸಿದ್ದಾರೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಗಳಾದ ಬೀದರ್, ಬಳ್ಳಾರಿ, ವಿಜಯನಗರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಂವಿಧಾನದ 371 (ಜೆ) ವಿಧಿಯಡಿ ವಿಶೇಷ …
Read More »
Laxmi News 24×7