Breaking News

ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸುವಂತಾದ್ರೆ ಮಾತ್ರ ಜನರು ಕಾನೂನು ಪಾಲಿಸುತ್ತಾರೆ: ನ್ಯಾ.ನಟರಾಜ್‌

Spread the love

ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಆರ್‌.ನಟರಾಜ್‌ ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಲಭ್ಯವಿರುವ ಹಕ್ಕುಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಮಧ್ಯಪ್ರಾಚ್ಯ ದೇಶಗಳ ರೀತಿಯಲ್ಲಿಯೇ ನಮ್ಮಲ್ಲೂ ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸಿ ಜನರು ಕಾನೂನು ಪಾಲಿಸುತ್ತಾರೆಂದು ನ್ಯಾಯಮೂರ್ತಿ ಹೇಳಿದ್ದಾರೆ.

ಅತ್ಯಾಚಾರ ಆರೋಪದಲ್ಲಿ ಬಂಧಿನಕ್ಕೊಳಗಾಗಿರುವ ತೆಲಂಗಾಣದ ಯುವಕನೊಬ್ಬ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವೇಳೆ ಈ ಮಾತುಗಳನ್ನಾಡಿದ್ದಾರೆ.

ನಾವು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಕಾರಣ ಕಾನೂನು ತನ್ನ ಹಲ್ಲುಗಳನ್ನು ಕಳೆದುಕೊಂಡಿದೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಅಪರಾಧ ಎಸಗುವುದು ಸುಲಭ ಎನ್ನುವಂತಾಗಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ನೀಡುವ ಕಠಿಣ ಶಿಕ್ಷೆಯನ್ನು ನಮ್ಮಲ್ಲೂ ತಪ್ಪಿತಸ್ಥರಿಗೆ ನೀಡುವಂತಾದರೆ, ಜನರು ತಕ್ಕ ರೀತಿಯಲ್ಲಿ ಕಾನೂನು ಪಾಲಿಸುತ್ತಾರೆಂದು ನುಡಿದಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ