Breaking News

ಪ್ರದೋಷ್‌ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ; ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್‌ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರಕ್ಕೆ ಮುಂದೂಡಿದೆ.

ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಾಗಪ್ರಸನ್ನ ಅವರು, ಈಗ ಟ್ರಯಲ್ ಆಗಲ್ಲ, ಮೂರು ದಿನ ರಜೆ ಇದೆ. ಸೋಮವಾರಕ್ಕೆ ಆದೇಶ ಪ್ರಕಟ ಮಾಡುವುದಾಗಿ ತಿಳಿಸಿದ್ದಾರೆ.

14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷ್ಯ ಹೇಳಿಕೆಗೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು‌‌. ಹೈಕೋರ್ಟ್‌ನಲ್ಲಿ ದರ್ಶನ್‌ ಪರ ವಕೀಲರು ನಿನ್ನೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿ ಇಂದಿಗೆ ಹೈಕೋರ್ಟ್‌ ಆದೇಶ ಕಾಯ್ದಿರಿಸಿತ್ತು.

ಸೋಮವಾರ ಆದೇಶ ನೀಡುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!

Spread the loveಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ