ರಾಮದುರ್ಗ: ನಗರದ ಸಮೀಪದ ಹಲಗತ್ತಿ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ರಾಮದುರ್ಗ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿದ ಪೊಲೀಸರು ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಕೆರೂರ ಗ್ರಾಮದ ನವೀನ ಲಕ್ಷ್ಮಣ ಹೆದ್ದೇರಿ (21) ಎಂಬಾತನಿಂದ 180 ಗ್ರಾಂ ಗಾಂಜಾ, ಬೈಕ್, ಒಂದು ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಪಿಐಎಸ್ ಸವಿತಾ ಮುನ್ಯಾಳ, ಗ್ರೇಡ್-2 ತಹಸೀಲ್ದಾರ್ ಸಂಜಯ ಖಾತೇದಾರ, ಪೊಲೀಸ್ ಸಿಬ್ಬಂದಿ ಹಣಮಂತ ವಾಸನ, ಕಷ್ಣಾ ಮಾದರ, ಸುರೇಶ ಕೋತಿನ, ಶ್ರೀಕಾಂತ ಜಾಧವ, ಶೇಷಪ್ಪ ಕಮಕೇರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Laxmi News 24×7