Breaking News

ಮಾನವೀಯತೆ ಮೆರೆದ ವಿದ್ಯಾರ್ಥಿನಿಯರಿಗೆ ಪೊಲೀಸರಿಂದ ಸನ್ಮಾನ

Spread the love

ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವೈದ್ಯಕೀಯ ಚಿಕಿತ್ಸೆಗೆ ಹಣ ತೆಗೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ₹3,50,000 ಹಣವನ್ನು ಕಳೆದುಕೊಂಡಿದ್ದ. ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಹಣವನ್ನು ಗಮನಿಸಿದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಒಬ್ಬ ಆಟೋ ಚಾಲಕರು ಅದನ್ನು ಗಾಂಧಿ ಚೌಕ್ ಠಾಣೆಗೆ ಒಪ್ಪಿಸಿದರು. ಪೊಲೀಸರು ಹಣ ಕಳೆದುಕೊಂಡ ಯುವಕನನ್ನು ಪತ್ತೆ ಮಾಡಿ, ಪರಿಶೀಲನೆ ಬಳಿಕ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಈ ಮಾನವೀಯ ಕಾರ್ಯಕ್ಕಾಗಿ, ಹಣವನ್ನು ವಾಪಸ್ ನೀಡಿದ ಇಬ್ಬರು ವಿದ್ಯಾರ್ಥಿನಿಯರನ್ನು ಗಾಂಧಿ ಚೌಕ್ ಪೊಲೀಸ್ ಅಧಿಕಾರಿಗಳು ಸನ್ಮಾನಿಸಿದರು. ಈ ವೇಳೆ ಹಿಂದೂ‌ ಮುಖಂಡ ಉಮೇಶ ವಂದಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ