Breaking News

ಮಾನವೀಯತೆ ಮೆರೆದ ವಿದ್ಯಾರ್ಥಿನಿಯರಿಗೆ ಪೊಲೀಸರಿಂದ ಸನ್ಮಾನ

Spread the love

ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವೈದ್ಯಕೀಯ ಚಿಕಿತ್ಸೆಗೆ ಹಣ ತೆಗೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ₹3,50,000 ಹಣವನ್ನು ಕಳೆದುಕೊಂಡಿದ್ದ. ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಹಣವನ್ನು ಗಮನಿಸಿದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಒಬ್ಬ ಆಟೋ ಚಾಲಕರು ಅದನ್ನು ಗಾಂಧಿ ಚೌಕ್ ಠಾಣೆಗೆ ಒಪ್ಪಿಸಿದರು. ಪೊಲೀಸರು ಹಣ ಕಳೆದುಕೊಂಡ ಯುವಕನನ್ನು ಪತ್ತೆ ಮಾಡಿ, ಪರಿಶೀಲನೆ ಬಳಿಕ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಈ ಮಾನವೀಯ ಕಾರ್ಯಕ್ಕಾಗಿ, ಹಣವನ್ನು ವಾಪಸ್ ನೀಡಿದ ಇಬ್ಬರು ವಿದ್ಯಾರ್ಥಿನಿಯರನ್ನು ಗಾಂಧಿ ಚೌಕ್ ಪೊಲೀಸ್ ಅಧಿಕಾರಿಗಳು ಸನ್ಮಾನಿಸಿದರು. ಈ ವೇಳೆ ಹಿಂದೂ‌ ಮುಖಂಡ ಉಮೇಶ ವಂದಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕನಿಷ್ಠ ವೇತನ ಹೆಚ್ಚುವರಿ ಆದೇಶ ವಾಪಸ್ಸು ಪಡೆಯಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

Spread the loveಬೆಳಗಾವಿ : ರಾಜ್ಯ ಸರ್ಕಾರದ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ನಗರದಲ್ಲಿ  ವಿವಿಧ ವ್ಯಾಪಾರ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ