ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವೈದ್ಯಕೀಯ ಚಿಕಿತ್ಸೆಗೆ ಹಣ ತೆಗೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ₹3,50,000 ಹಣವನ್ನು ಕಳೆದುಕೊಂಡಿದ್ದ. ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಹಣವನ್ನು ಗಮನಿಸಿದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಒಬ್ಬ ಆಟೋ ಚಾಲಕರು ಅದನ್ನು ಗಾಂಧಿ ಚೌಕ್ ಠಾಣೆಗೆ ಒಪ್ಪಿಸಿದರು. ಪೊಲೀಸರು ಹಣ ಕಳೆದುಕೊಂಡ ಯುವಕನನ್ನು ಪತ್ತೆ ಮಾಡಿ, ಪರಿಶೀಲನೆ ಬಳಿಕ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಈ ಮಾನವೀಯ ಕಾರ್ಯಕ್ಕಾಗಿ, ಹಣವನ್ನು ವಾಪಸ್ ನೀಡಿದ ಇಬ್ಬರು ವಿದ್ಯಾರ್ಥಿನಿಯರನ್ನು ಗಾಂಧಿ ಚೌಕ್ ಪೊಲೀಸ್ ಅಧಿಕಾರಿಗಳು ಸನ್ಮಾನಿಸಿದರು. ಈ ವೇಳೆ ಹಿಂದೂ ಮುಖಂಡ ಉಮೇಶ ವಂದಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Laxmi News 24×7