Breaking News

ಪೊಲೀಸ್ ಪಥಸಂಚಲನ – ಆರತಿ ಬೆಳಗಿ ಶುಭಕೋರಿದ ಜನ

Spread the love

ರಾಯಚೂರು: ಕೊರೊನಾ ಸೋಂಕು ತಡೆಗಾಗಿ ಜಾಗೃತಿ ಮೂಡಿಸಲು ನಗರದಲ್ಲಿ ಜಿಲ್ಲಾ ಪೊಲೀಸರು ಪಥ ಸಂಚಲನ ನಡೆಸಿದರು. ನಗರದ ಪಟೇಲ್ ವೃತ್ತದಿಂದ ವಿವಿಧ ರಸ್ತೆಗಳಲ್ಲಿ ಜಾಗೃತಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಪಥಸಂಚಲನಕ್ಕೆ ಚಾಲನೆ ನೀಡಿದರು.

ಈ ವೇಳೆ ಕೊರೊನಾ ತಡೆಗಾಗಿ ಮುತುವರ್ಜಿ ವಹಿಸುತ್ತಿರುವ ಪೊಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆರತಿ ಬೆಳಗಿ ಹೂವಿನ ಹಾರ ಹಾಕುವ ಮೂಲಕ ಇಲಾಖೆಗೆ ಶುಭ ಕೋರಿದರು. ರಸ್ತೆಯಲ್ಲಿ ಸಾರ್ವಜನಿಕರು ಚಪ್ಪಾಳೆ ತಟ್ಟುವ ಮೂಲಕ ಪೊಲೀಸರಿಗೆ ಶುಭ ಹಾರೈಸಿದರು. ಜಿಲ್ಲೆಯಲ್ಲಿ ಹೆಚ್ಚು ಭದ್ರತೆ ಒದಗಿಸಿ ಕೊರೊನಾ ವಿರುದ್ಧ ಹೋರಾಡುತ್ತಿರುವುಕ್ಕೆ ಧನ್ಯವಾದ ತಿಳಿಸಿದರು.

ರಾಯಚೂರು ಜಿಲ್ಲೆ ಗ್ರೀನ್ ಝೋನ್‍ನಲ್ಲಿದ್ದರೂ ಬಿಗಿ ಬಂದೋಬಸ್ತ್ ಮೂಲಕ ಕಠಿಣ ಲಾಕ್‍ಡೌನ್ ಮಾಡಲಾಗಿದೆ. ನಗರ, ಪಟ್ಟಣಗಳ ಬಡಾವಣೆಗಳಲ್ಲಿ ಎಲ್ಲಾ ಸೌಲಭ್ಯಗಳನ್ನ ಒದಗಿಸಿ ಸೀಲ್‍ಡೌನ್ ಮಾಡಲಾಗಿದೆ. ಅಲ್ಲದೇ ಅಕ್ಕಪಕ್ಕದ ಜಿಲ್ಲೆಗಳ ಜನ ಕೂಡ ಜಿಲ್ಲೆಗೆ ಬರದಂತೆ ಎಚ್ಚರವಹಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ