Breaking News

ಕೈಕಾಲು ಸರಿಯಿದ್ರೂ ಶೋಕಿ ಜೀವನಕ್ಕೆ ಅಂಗವಿಕಲನ ವೇಷ – ಖತರ್ನಾಕ್ ಭಿಕ್ಷುಕನ ಅಸಲಿ ಬಣ್ಣ ಬಯಲು

Spread the love

ಬೆಂಗಳೂರು: ಉದರ ನಿಮಿತ್ತಂ ಬಹುಕೃತ ವೇಷಂ ಎಂಬ ಮಾತಿನ ಹಾಗೆ ಇಲ್ಲೊಬ್ಬ ಹೊಟ್ಟೆಪಾಡಿಗಾಗಿ ಅಂಗವಿಕಲರ  ರೀತಿ ಡ್ರಾಮ ಮಾಡಿ ಸಿಕ್ಕಿಬಿದ್ದಿರುವ ಘಟನೆ ಬ್ಯಾಟರಾಯನಪುರದ  ಐಟಿಐ ಲೇಔಟ್‌ನಲ್ಲಿ ನಡೆದಿದೆ.

ಭಿಕ್ಷಾಟನೆ ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಮುಖೇಶ್ ಎಂಬ ಯುವಕನ ನೈಜ ಬಣ್ಣ ಇದೀಗ ಬಯಲಾಗಿದೆ. ಕೈ-ಕಾಲುಗಳು ಸಂಪೂರ್ಣವಾಗಿ ಚೆನ್ನಾಗಿದ್ದರೂ, ಶೋಕಿ ಜೀವನ ಹಾಗೂ ಸುಲಭವಾಗಿ ಹಣ ಗಳಿಸುವ ದುರಾಸೆಯಿಂದ ಈತ ಮನಕಲುಕುವಂತೆ ಕುಂಟುತ್ತಾ ಅಂಗವಿಕಲನ ರೀತಿ ನಟಿಸಿ ಜನರನ್ನು ವಂಚಿಸುತ್ತಿದ್ದ. ಐಷಾರಾಮಿ ಪ್ರದೇಶಗಳನ್ನೇ ಗುರಿಯಾಗಿಸಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ಈತನ ಚಲನವಲನದ ಬಗ್ಗೆ ಸ್ಥಳೀಯರಿಗೆ ಅನುಮಾನ ಮೂಡಿ ತರಾಟೆಗೆ ತೆಗೆದುಕೊಂಡಾಗ ಈತನ ಅಸಲಿಯತ್ತು ಬೆಳಕಿಗೆ ಬಂದಿದೆ.

ಅಷ್ಟೇ ಅಲ್ಲದೆ, ಈತನ ಬಳಿ ನೀರಜ್ ಎಂಬವರಿಗೆ ಸೇರಿದ ಕಳುವಾದ ಐಫೋನ್ ಪತ್ತೆಯಾಗಿದೆ. ತಕ್ಷಣವೇ ಸ್ಥಳೀಯರು ಬ್ಯಾಟರಾಯನಪುರ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನನ್ನು ಸುಮನಹಳ್ಳಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಸೇರಿಸಲಾಗಿದೆ. ದೇಹಧಾರಢ್ಯವಿದ್ದರೂ ಶೋಕಿ ಜೀವನಕ್ಕಾಗಿ ಭಿಕ್ಷಾಟನೆ ಹಾಗೂ ಕಳ್ಳತನಕ್ಕಿಳಿದ ಯುವಕನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ