Breaking News

ಪಿಂಚಣಿದಾರರ ಸೌಲಭ್ಯ ಕಡಿತ ಆಗ್ರಹಿಸಿ ಪ್ರತಿಭಟನೆ

Spread the love

ಬೆಳಗಾವಿ: ಸರ್ಕಾರಿ ನೌಕರರಿಗೆ ನೀಡುತ್ತಿರುವ ಪಿಂಚಣಿಯಲ್ಲಿ ಯಾವುದೇ ಸೌಲಭ್ಯ ಕಡಿತಗೊಳಿಸಬಾರದು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಕನ್ನಡ ಭವನದಿಂದ ಜಿಲ್ಲಾಧಿಕಾರಿ ಕಚೇರಿ ಮೂಲಕ ರ‌್ಯಾಲಿಯಲ್ಲಿ ತೆರಳಿದ ನಿವೃತ್ತ ನೌಕರರು ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕಳೆದ ಮಾರ್ಚ್‌ನಲ್ಲಿ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಆರ್ಥಿಕ ಬಿಲ್‌ನಲ್ಲಿ 2025ರ ಏಪ್ರಿಲ್ 1ಕ್ಕಿಂತ ಮುನ್ನ ಸೇವಾನಿವೃತ್ತಿ ಹೊಂದಿದ ಸರ್ಕಾರಿ ನೌಕರರಿಗೆ ನೀಡುವ ಪಿಂಚಣಿ ಮತ್ತು ಕೌಟುಂಬಿಕ ಪಿಂಚಣಿಯಲ್ಲಿನ ಕೆಲವು ಸೌಲಭ್ಯ ಕಡಿತಗೊಳಿಸುವುದಾಗಿ ತಿಳಿಸಿದ್ದಾರೆ. ಇದರಿಂದ ನೌಕರರು ಮತ್ತು ಅವಲಂಬಿತರು ಸಂಕಷ್ಟಕ್ಕೆ ಸಿಲುಕಲಿದ್ದು, ಯಾವುದೇ ಸೌಲಭ್ಯ ಕಡಿತಗೊಳಿಸಬಾರದು ಎಂದು ಮನವಿ ಮಾಡಿದರು.
ಸಂಘದ ಅಧ್ಯಕ್ಷ ಎಸ್.ಜಿ.ಸಿದ್ನಾಳ, ಮಹಾಂತೇಶ ಹಿರೇಮಠ, ಎಂ.ಎಸ್.ಮುದಕವಿ, ಸಂಜೀವ ಬಡಿಗೇರ, ಎಂ.ಕೆ.ಅಗಸರ, ಸುಶೀಲಾ ರಜಪೂತ, ಕುಸುಮಾ ಕುರುಬಗೊಂಡ ಇದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ