Breaking News

ಗೋಮಾತಾ ಗೌರವ ದಿನದ ಪ್ರಯುಕ್ತ ಗೋ ಸಂರಕ್ಷಣೆಗಾಗಿ ಹಸುವಿನ ಸಮೇತ ಪ್ರತಿಭಟನೆ

Spread the love

 ಬೆಳಗಾವಿ : ಗೋಮಾತಾ ಗೌರವ ದಿನದ ಪ್ರಯುಕ್ತ ನಗರದಲ್ಲಿ ಸೋಮವಾರ ಗೋ ರಕ್ಷಣೆಯ ಜಾಗೃತಿಗಾಗಿ ಗೋವು ಸಮೇತ ರ‌್ಯಾಲಿ ಕೈಗೊಳ್ಳಲಾಯಿತು.
ನಗರದ ಅಂಬೇಡ್ಕರ ಉದ್ಯಾನದಿಂದ ಆರಂಭಗೊಂಡ ಗೋ ಮಾತಾ ಗೌರವ ಅಭಿಯಾನ ಸಂಘಟನೆಯ ನೇತೃತ್ವದ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದ ಗೋ ಭಕ್ತರು, ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಚನ್ನಮ್ಮ ವೃತ್ತದ ಮೂಲಕ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ತೆರಳಿ ಮನವಿ ಸಲ್ಲಿಸಿದರು.
ಗೋವುಗಳಿಗೆ ರಾಷ್ಟ್ರೀಯ ಗೌರವದ ಅಧಿಕೃತ ಸ್ಥಾನ ನೀಡಬೇಕು. ದೇಶಾದ್ಯಂತ ಗೋ ಹತ್ಯೆ ಸಂಪೂರ್ಣ ನಿಷೇಧಿಸಬೇಕು. ಗೋ ಹತ್ಯೆ ಮತ್ತು ಗೋವುಗಳ ಕಳ್ಳ ಸಾಗಣಿಕೆಯಲ್ಲಿ ತೊಡಗಿದವರಿಗೆ ಜೀವಾವಧಿ ಶಿಕ್ಷೆ ನೀಡಬೇಕು. ಗೋವು ಕಳ್ಳಸಾಗಣಿಕೆಯ ವಾಹನಗಳನ್ನು ಶಾಶ್ವತ ಮುಟ್ಟುಗೋಲು ಹಾಕಿಕೊಳ್ಳಬೇಕು. ಗೋ ಮೂತ್ರ ಉತ್ಪನ್ನಗಳನ್ನು ಉತ್ತೇಜಿಸಲು ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಬೇಕು. ಬೃಹತ್ ಮಾರಾಟ ಮಳಿಗೆಗಳಲ್ಲಿ ದೇಸಿ ಗೋವಿನ ಹೈನುಗಾರಿಕೆ ಉತ್ಪನ್ನ, ಸಗಣಿ, ಗೋ ಮೂತ್ರಗಳಿಗೆಗೆ ಕಡ್ಡಾಯವಾಗಿ ಕೌಂಟರ್ ರಚಿಸಬೇಕು ಎಂದು ಆಗ್ರಹಿಸಿದರು.
ನಿಲೇಶ ಪಾಟೀಲ, ಪ್ರಕಾಶ ಲದ್ವಾ, ರಾಜ್ಯಸ್ಥಾನದ ಗೋಲ್ವಾನಂದ ಸ್ವಾಮೀಜಿ, ಆನಂದ ನವಲೆ, ಮಾರುತಿ ಕೋಳಿ, ರವಿ ಕೋಕಿತಕರ, ಭರತ ಪಾಟೀಲ, ಕಿರಣ ಗಾವಡೆ ಇತರರಿದ್ದರು.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ