Breaking News
Home / ಜಿಲ್ಲೆ / ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ.

ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ.

Spread the love

ಬೆಂಗಳೂರು: ಪುಟ್ಟಗೌರಿ ಮದುವೆ ನಂತರ ‘ಕನ್ನಡತಿ’ ಧಾರಾವಾಹಿ ಮೂಲಕ ಮನೆ ಮಾತಾಗಿರುವ ರಂಜನಿ ರಾಘವನ್ ಏನ್ ಮಾಡ್ತಿದ್ದಾರೆ ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದ್ದು, ಎಲ್ಲ ವಾಹಿನಿಗಳು ಸಂಚಿಕೆಗಳನ್ನು ಮರು ಪ್ರಸಾರ ಮಾಡುತ್ತಿವೆ. ಹೀಗಿರುವಾಗ ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ.

ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುತ್ತಿದ್ದ ನಟಿ ರಂಜನಿ ರಾಘವನ್ ಇದೀಗ ಮೆನಯಲ್ಲೇ ಕಾಲ ಕಳೆಯುತ್ತಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದು, ಆಗಾಗ ಪೋಸ್ಟ್ ಹಾಕುತ್ತಿರುತ್ತಾರೆ. ಇದೀಗ ಅವರು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿರುವ ಪೋಸ್ಟ್ ಭಾರೀ ಸದ್ದು ಮಾಡುತ್ತಿದೆ. ಹೌದು ಇದ್ದಕ್ಕಿದ್ದಂತೆ ಕೆಲಸ ಕೇಳಿಕೊಂಡು ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ಪದವಿ ಮುಗಿಯುತ್ತಿದ್ದಂತೆ ರಂಜನಿ ರಾಘವನ್ ಅವರು ತಮ್ಮ ಪದವಿ ಪ್ರಮಾಣ ಪತ್ರವನ್ನು ಫೇಸ್ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದರಂತೆ. ಇದೀಗ ಅದನ್ನು ಎಫ್‍ಬಿ ನೆನಪಿಸಿದೆ. ಮೂರು ವರ್ಷಗಳ ಹಿಂದಿನ ಪೋಸ್ಟ್ ನ್ನು ಎಫ್‍ಬಿ ನೆನಪಿಸಿತು. ನಾನು ಕಾನ್ವಕೇಶನ್ ಪಡೆದು ಮೂರು ವರ್ಷಗಳಾಯಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಕನ್ನಡದಲ್ಲಿ ‘ಯಾವ್ದಾದ್ರೂ ಕೆಲಸ ಖಾಲಿ ಇದ್ಯಾ?’ ಎಂದು ಕೇಳಿದ್ದಾರೆ.
ಪುಟ್ಟಗೌರಿ ಮದುವೆ ಧಾರಾವಾಹಿ ಮೂಲಕ ನಟನೆಯಲ್ಲಿ ಗುರುತಿಸಿಕೊಂಡ ರಂಜನಿ ರಾಘವನ್ ಅವರಿಗೆ ಸಿನಿಮಾಗಳಲ್ಲಿಯೂ ಅವಕಾಶಗಳು ಬರಲಾರಂಭಿಸಿದವು. ಈಗಾಗಲೇ ರಾಜಹಂಸ ಸಿನಿಮಾದಲ್ಲಿ ನಟಿಸಿದ್ದು, ಇದೀಗ ಟಕ್ಕರ್ ಕೊಡಲು ಸಿದ್ಧವಾಗ್ತಿದ್ದಾರೆ. ಈಗಾಗಲೇ ಕನ್ನಡತಿ ಧಾರಾವಾಹಿಯಲ್ಲಿ ಬ್ಯುಸಿಯಾಗಿರುವ ಭುವನೇಶ್ವರಿ, ಮತ್ತೊಂದೆಡೆ ಸಿನಿಮಾಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಕನ್ನಡತಿ ಧಾರಾವಾಹಿ ತುಂಬಾ ವಿಭಿನ್ನವಾಗಿ ಮೂಡಿಬಂದಿದ್ದು, ಇದರಲ್ಲಿ ಕನ್ನಡ ಶಿಕ್ಷಕಿಯಾಗಿ ಕಾಣಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಈ ಧಾರಾವಾಹಿ ಸಖತ್ ಸದ್ದು ಮಾಡುತ್ತಿದೆ.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ