Breaking News

ಬೆಳಗಾವಿ-109 ಜನ ಕ್ವಾರಂಟೈನ್ ನಲ್ಲಿರುವವರಿಗೂ ಬಿಡುಗಡೆಯ ಭಾಗ್ಯ

Spread the love

ಬೆಳಗಾವಿ- ಹುಬ್ಬಳ್ಳಿ,ಧಾರವಾಡ,ದಾವಣಗೇರೆ,ಹಾವೇರಿ ,ಸೇರಿದಂತೆ, ವಿವಿಧ ಭಾಗಗಳಿಂದ ಲಾರಿಗಳ ಮೂಲಕ ಕದ್ದು ಮುಚ್ಚಿ ರಾಜಸ್ಥಾನ ಕ್ಕೆ ತೆರಳುವ ಸಂಧರ್ಭದಲ್ಲಿ ಬೆಳಗಾವಿಯಲ್ಲಿ ಕ್ವಾರಂಟೈನ್ ಆಗಿದ್ದ 150 ಕ್ಕೂ ಹೆಚ್ಚು ರಾಜಸ್ಥಾನ ಮೂಲದ ಕಾರ್ಮಿಕರಿಗೆ ಇಂದು ಬಿಡುಗಡೆಯ ಭಾಗ್ಯ ಬಂದಿದೆ.

ಬೆಳಗಾವಿಯ ರಾಮದೇವ ಹೊಟೇಲ್ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿರುವ ಮೆಟ್ರಿಕ್ ಪೂರ್ವ ವಿಧ್ಯಾರ್ಥಿಗಳ ಹಾಸ್ಟೇಲ್ ನಲ್ಲಿ 169 ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು .

ನಿನ್ನೆ ಕಾರ್ಮಿಕ ದಿನಾಚರಣೆಯ ದಿನದಂದು ಈ ಕಾರ್ಮಿಕರ ಕ್ವಾರಂಟೈನ್ ಅವಧಿ ಮುಕ್ತಾಯವಾಗಿದೆ ಎಂದು ಹೇಳಲಾಗಿದ್ದು ಈ ಎಲ್ಲ ಕಾರ್ಮಿಕರ ರಿಪೋರ್ಟ್ ನೆಗೆಟಿವ್ ಬಂದಿರುವದರಿಂದ ಕಾರ್ಮಿಕರನ್ನು ಇಂದು ಜಿಲ್ಲಾಡಳಿತ ಬಿಡುಗಡೆ ಮಾಡುತ್ತಿದೆ .

ಆರು ಬಸ್ ಗಳಲ್ಲಿ ಕಾರ್ಮಿಕರು ಇನ್ನು ಕೆಲವೇ ಗಂಟೆಗಳಲ್ಲಿ ರಾಜಸ್ತಾನಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

109 ಜನ ಕ್ವಾರಂಟೈನ್ ನಲ್ಲಿರುವವರಿಗೂ ಬಿಡುಗಡೆಯ ಭಾಗ್ಯ

ಬೆಳಗಾವಿ ನಗರದ ವಿವಿಧ ಲಾಡ್ಜ್ ಗಳಲ್ಲಿ ಕ್ವಾರಂಟೈನ್ ಮಾಡಲಾಗಿದ್ದ 109 ಜನರನ್ನು ಇಂದು ಬಿಡುಗಡೆ ಮಾಡುವ ಪ್ರಕ್ರಿಯೆ ನಡೆದಿದೆ,ಹಿರೇಬಾಗೇವಾಡಿ ಸೇರಿದಂತೆ ವಿವಿಧ ಗ್ರಾಮಗಳ ಒಟ್ಟು 109 ಜನ ಕೆಲವೇ ಗಂಟೆಗಳಲ್ಲಿ ಬಿಡುಗಡೆಯಾಗಲಿದ್ದಾರೆ.


Spread the love

About Laxminews 24x7

Check Also

43 ವರ್ಷಗಳ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ದೇವಿಯ ಮಂಟಪ ಸ್ಥಳದಲ್ಲಿ ಚನ್ನರಾಜ ಹಟ್ಟಿಹೊಳಿ ಪೂಜೆ

Spread the loveಬೆಳಗಾವಿ: ಸುಮಾರು 43 ವರ್ಷಗಳ ದೀರ್ಘ ವಿರಾಮದ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ