Breaking News
Home / Uncategorized / ಪ್ರಧಾನಿ ಮೋದಿಗೆ ಒಂದೇ ವಾಕ್ಯದಲ್ಲಿ ವಿಶ್​​ ಮಾಡಿದ ರಾಹುಲ್​ ಗಾಂಧಿ; ಇದು ಅವಮಾನ ಎಂದ ನೆಟ್ಟಿಗರು

ಪ್ರಧಾನಿ ಮೋದಿಗೆ ಒಂದೇ ವಾಕ್ಯದಲ್ಲಿ ವಿಶ್​​ ಮಾಡಿದ ರಾಹುಲ್​ ಗಾಂಧಿ; ಇದು ಅವಮಾನ ಎಂದ ನೆಟ್ಟಿಗರು

Spread the love

ಪ್ರಧಾನಿ ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬವಾದ (PM Modi Birthday) ಇಂದು ಬಿಜೆಪಿ ದೇಶಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರೆ, ಅತ್ತ ಕಾಂಗ್ರೆಸ್​ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡುತ್ತಿದೆ. ಈ ಮಧ್ಯೆ ರಾಹುಲ್​ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಗೆ ಒಂದೇ ಸಾಲಿನಲ್ಲಿ ಹುಟ್ಟುಹಬ್ಬದ ವಿಶ್​ ಮಾಡಿದ್ದಾರೆ. ಇಷ್ಟು ವರ್ಷ ಪ್ರಧಾನಿಗೆ ಜನ್ಮದಿನದ ಶುಭಾಶಯ ಕೋರುವಾಗ ನಾಲ್ಕು ಸಾಲು ಬರೆಯುತ್ತಿದ್ದರು. ವ್ಯಂಗ್ಯ ಮಾಡುತ್ತಿದ್ದರು. ಆದರೆ ಈ ಬಾರಿ ಹೆಚ್ಚೇನೂ ಬರೆಯದೇ ಒಂದೇ ಸಾಲಿನಲ್ಲಿ ‘ಹ್ಯಾಪಿ ಬರ್ತ್​ ಡೇ, ಮೋದಿ ಜಿ’ ಎಂದಿದ್ದಾರೆ. ಪ್ರಧಾನಿ ಮೋದಿಯವರಿಗೆ ಅವಮಾನ ಮಾಡಲೆಂದೇ ರಾಹುಲ್​ ಗಾಂಧಿ ಹೀಗೆ ಒಂದೇ ಸಾಲಿನಲ್ಲಿ ಟ್ವೀಟ್​ ಮಾಡಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೂ ರಾಹುಲ್​ ಗಾಂಧಿಗೆ ಜನ್ಮದಿನದ ಶುಭಾಶಯ ಕೋರುತ್ತಾರೆ. ಆದರೆ ಎಂದಿಗೂ ಹೀಗೆ ಬರ್ತ್​ ಡೇ ವಿಶ್​​​ನಲ್ಲಿ ವ್ಯಂಗ್ಯ, ಅವಮಾನ ಮಾಡುವುದಿಲ್ಲ. ಆದರೆ, ರಾಹುಲ್​ ಗಾಂಧಿ ಯಾಕೆ ಹಾಗೆ ಮಾಡುತ್ತಾರೆ ಎಂದೂ ಟ್ವಿಟರ್​ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ. ಹಾಗೇ, ಇಂದು ಯುವ ಕಾಂಗ್ರೆಸ್ಸಿಗರು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡುತ್ತಿರುವಾಗ, ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಯಾಕೆ ಪ್ರಧಾನಿಗೆ ವಿಶ್​ ಮಾಡುತ್ತಿದ್ದಾರೆ? ಎಂದೂ ಹಲವರು ಪ್ರಶ್ನಿಸಿದ್ದಾರೆ.

ವಿವಿಧ ಕಾರ್ಯಕ್ರಮ ಆಯೋಜಿಸಿದ ಕಾಂಗ್ರೆಸ್​
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ನಿಮಿತ್ತ  ರಾಷ್ಟ್ರೀಯ ನಿರುದ್ಯೋಗ ದಿನವನ್ನು ಹಮ್ಮಿಕೊಂಡಿದ್ದು, ಅದರ ಅಂಗವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಂದೇ ವರ್ಷದ ನಿರುದ್ಯೋಗ ಸಮಸ್ಯೆ ಶೇ.2.4ರಿಂದ 10.3ಕ್ಕೆ ಏರಿಕೆಯಾಗಿದೆ ಎಂದು ಯುವ ಕಾಂಗ್ರೆಸ್​ ಪ್ರತಿಪಾದಿಸಿದೆ.  ‘ದೇಶದ ಯುವಕರು ನಿರುದ್ಯೋಗದಿಂದ ಕಂಗಾಲಾಗಿ ಬೀದಿಬೀದಿಗಳಲ್ಲಿ ಅಲೆಯುತ್ತಿದ್ದಾರೆ. ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗ ಒದಗಿಸುವ ಭರವಸೆ ನೀಡಿಯೇ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದರೆ ಈಗ ಸಂಪೂರ್ಣವಾಗಿ ಅದನ್ನು ಮರೆತಿದೆ’ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ತಮಗೆ ಬೇಕಾದ ಉದ್ಯಮಿಗಳಿಗೆ ಮಾತ್ರ ಅನುಕೂಲ ಮಾಡಿಕೊಡುತ್ತಿದೆ. ಇನ್ನು ನಿರುದ್ಯೋಗವನ್ನು ಹೆಚ್ಚಿಸುವ ಮೂಲಕ ಪ್ರಧಾನಿ ಮೋದಿ ಸರ್ಕಾರ ಯುವಕರನ್ನು ಸ್ವಾವಲಂಬಿಗಳನ್ನಾಗಿ ಮಾಡಿದೆ ಎಂದು ಕಾಂಗ್ರೆಸ್​ ಟ್ವೀಟ್ ಮಾಡಿ ಕೂಡ ವ್ಯಂಗ್ಯವಾಡಿದೆ.  ಇನ್ನು ಕೊರೊನಾ ಸಮಯದಲ್ಲಿ ಫೇಕ್​ ಸುದ್ದಿಗಳು ಹೆಚ್ಚಾಗಿ ಹರಡಲೂ ಕೇಂದ್ರ ಸರ್ಕಾರವೇ ಕಾರಣ.  ಅವರಿಗೆ ಹೇಳಿಕೊಳ್ಳಲು ಸಾಧನೆಗಳು ಏನೂ ಇಲ್ಲದಾಗ ಹೀಗಿದ್ದನ್ನೇ ಏನಾದರೂ ಮಾಡುತ್ತಾರೆ ಎಂದು ಕಾಂಗ್ರೆಸ್​ ಸಾಮಾಜಿಕ ಜಾಲತಾಣಗಳ ಮೂಲಕ ಆರೋಪ ಮಾಡಿದೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಡಿಕೆಶಿ ಕೈವಾಡ

Spread the loveಬೆಂಗಳೂರು: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ