Breaking News
Home / Uncategorized / ವಿದ್ಯಾರ್ಥಿ ನಿಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು.

ವಿದ್ಯಾರ್ಥಿ ನಿಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು.

Spread the love

ಗೋಕಾಕ: ನಗರದ ನಾಯಕ ಸ್ಟುಡೆಂಟ್ ಫೆಡರೆಷನ್ ಅನುದಾನಿತ ಮೆಟ್ರಿಕ್ ಪೂರ್ವ ಪರಿಶಿಷ್ಟ ವರ್ಗ ಬಾಲಕ , ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಷಿಕ ಕ್ರೀಡಾಕೂಟಕ್ಕೆ ಮಾಜಿ ಸಚಿವ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಚಾಲನೆ ನೀಡಿದರು.

ಕ್ರೀಡಾ ಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಕ್ರೀಡೆಯಿಂದ ಆರೋಗ್ಯ ಸದೃಢವಾಗಿರಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನೀಡಿದಷ್ಟೇ ಪ್ರಾಮುಖ್ಯತೆನ್ನು ಕ್ರೀಡೆಗೂ ನೀಡಬೇಕು. ನಮ್ಮ ತಂದೆ ಅವರು ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಕಳೆದ 2 ದಶಕಗಳಿಂದ ಹಲವಾರು ಕ್ರೀಡಾಪಟುಗಳು ರಾಷ್ಟ್ರ ಮತ್ತು ರಾಜ್ಯದಲ್ಲಿ ಗುರುತಿಸಿಕೊಂಡಿದ್ದಾರೆ. ತಾವು ಕೂಡ ತಂದೆಯ ಮಾರ್ಗದಲ್ಲಿಯೇ ನಡೆಯುವುದಾಗಿ ರಾಹುಲ್ ಜಾರಕಿಹೊಳಿ ಅವರು ಹೇಳಿದರು.

ಎನ್ಎಸ್ ಫ್ ಶಾಲಾ ಪ್ರಾಚಾರ್ಯ ತಿಪ್ಪಣ್ಣ ಕೋಳಿ, ವಿದ್ಯಾರ್ಥಿ ನಿಲಯ ಮೇಲ್ವಿಚಾರಕಿ ಶ್ರೀದೇವಿ ಮಂದಾನಿ, ಪಿ.ಎಲ್. ಕಂಬಾಳ ಸೇರಿದಂತೆ ಮುಂತಾದವರು ಇದ್ದರು.


Spread the love

About Laxminews 24x7

Check Also

2 ಸಾವಿರ ರೂ. ಕಳ್ಳತನ ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿ ಪರಿಶೀಲನೆ; ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

Spread the loveಬಾಗಲಕೋಟೆ, ಮಾರ್ಚ್​.17: 2 ಸಾವಿರ ರೂ. ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರಿಶೀಲನೆ ನಡೆಸಿದ್ದು ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ