Breaking News
Home / ಜಿಲ್ಲೆ / ರಾಯಚೂರು / ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು……….

ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು……….

Spread the love

ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ ವೇಳೆ ರಾಜಕಾರಣಿಗಳೇ ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ನಿಂತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಕೊರೊನಾ ಭೀತಿಯಿಂದ ದೇಶವೇ ಲಾಕ್‍ಡೌನ್ ಆಗಿದೆ. ಸೋಂಕನ್ನು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರಗಳು ಮತ್ತು ಪೊಲೀಸರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಹಲವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ವೇಳೆ ಸಾಮಾಜಿಕ ಅಂತರವನ್ನೇ ಮರೆತಿದ್ದರು.

ಶಾಸಕ ಶಿವರಾಜ್ ಪಾಟೀಲ್ ಹಾಗೂ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ನಿಂತು ಫೋಟೋ ತೆಗೆಸಿಕೊಂಡರು. ಸುಮಾರು ಹೊತ್ತು ಒಟ್ಟಾಗಿ ಕುಳಿತು ಮಾತನಾಡಿದರು. ಸಾಮಾಜಿಕ ಅಂತರ ಕಾಪಾಡುವಂತೆ ಪೊಲೀಸರು ಮೈಕ್ ನಲ್ಲಿ ಅನೌನ್ಸ್ ಮಾಡಿದರೂ ತಿಳಿದುಕೊಳ್ಳದ ರಾಜಕಾರಣಿಗಳು ಗುಂಪುಗುಂಪಾಗಿ ಓಡಾಡಿ ಬಳಿಕ ಅಲ್ಲಿಂದ ತೆರಳಿದರು.


Spread the love

About Laxminews 24x7

Check Also

ನಾಗರ ಹಾವು ಕುತ್ತಿಗೆಗೆ ಹಾಕ್ಕೊಂಡು ಚುನಾವಣಾ ಭವಿಷ್ಯ ನುಡಿದ ವ್ಯಕ್ತಿ..!

Spread the love ರಾಯಚೂರು: 2023 ವಿಧಾನಸಭಾ ಚುನಾವಣೆ ರಂಗೇರಿದೆ. ಈಗಾಗಲೇ ಮೂರು ಪಕ್ಷದವರೂ ಸೇರಿದಂತೆ ಬೇರೆ ಬೇರೆ ಪಕ್ಷದವರು ಕೂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ