ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ತಿಂಗಳು ಮುಂಗಾರು ಬಿರುಸು ಪಡೆಯುವ ಸಾಧ್ಯತೆಯಿದ್ದು, 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯದ ಹಲವೆಡೆ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರು ನಗರದಾದ್ಯಂತ ತುಂತುರು ಮಳೆ ಜೊತೆಗೆ ತಂಪು ಗಾಳಿ ಬೀಸುತ್ತಿರುವ ಪರಿಣಾಮ ತಂಪಾದ ವಾತಾವರಣ ನಿರ್ಮಾಣವಾಗಿದೆ.
Laxmi News 24×7