Breaking News

ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

Spread the love

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ.

ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ.

ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ 3.30 ರಿಂದ 4.30ರವರೆಗೆ ಚಾಮರಾಜನಗರ ಮೆಡಿಕಲ್ ಕಾಲೇಜಿನ 450 ಹಾಸಿಗೆಗಳ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.

ಅ.08 ರ ಬೆಳಗ್ಗೆ 11.50ಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿಗಳ ಪ್ರವಾಸ ಪಟ್ಟಿಯನ್ನು ರಾಷ್ಟ್ರಪತಿಗಳ ಆಪ್ತ ಕಾರ್ಯದರ್ಶಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಾನಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಚರಂಡಿ ನೀರು ಮನೆಗಳ ಮುಂದೆ:ಚರಂಡಿ ಸ್ವಚ್ಛಗೊಳಿಸಲು ನಾಗರೀಕರ ಆಗ್ರಹ!!

Spread the love ಬೆಳಗಾವಿಯಲ್ಲಿ ಚರಂಡಿ ನೀರು ಮನೆಗಳ ಮುಂದೆ:ಚರಂಡಿ ಸ್ವಚ್ಛಗೊಳಿಸಲು ನಾಗರೀಕರ ಆಗ್ರಹ!! ಚರಂಡಿ ನೀರು ಮನೆಗಳ ಮುಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ