Breaking News

ರಾಜ್ಯಸಭಾ ಚುನಾವಣೆ – ನಾಮಪತ್ರ ಸಲ್ಲಿಸಿದ ಖರ್ಗೆ

Spread the love

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕೃತವಾಗಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿರುವ ಚುನಾವಣಾ ಅಧಿಕಾರಿಯ ಕಚೇರಿಗೆ ತೆರಳಿದ ಅವರು, ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ದಾಖಲೆಗಳನ್ನು ಹಸ್ತಾಂತರಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸುವ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾನು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಮ್ಮ ಶಾಸಕರು, ನಮ್ಮ ನಾಯಕರು ನನ್ನನ್ನ ಆಯ್ಕೆ ಮಾಡಿದ್ದಾರೆ. ಜೂನ್ 18 ಚುನಾವಣೆಯಲ್ಲಿ ಎಲ್ಲರು ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸ್ತಾರೆ. ನಿಮ್ಮೆಲ್ಲರ ಬೆಂಬಲ ಬೇಕು ಎಂದು ತಿಳಿಸಿದರು.

ಈ ವೇಳೆ ಮಾಧ್ಯಮಗಳು ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಉತ್ತರ ನೀಡದೇ ತೆರಳಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ