Breaking News

ಬ್ಯಾಲೇಟ್ ಪೇಪರ್ ನಲ್ಲಿ ಬಕೆಟ್ ಬದಲು ಅಲ್ಮೇರಾ ಚಿಹ್ನೆ: ಮತದಾನ ಸ್ಥಗಿತ

Spread the love

ರಾಮದುರ್ಗ: ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ.

ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್​ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್‌ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ.

ಸ್ಥಳಕ್ಕೆ ತಹಶೀಲ್ದಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಲೆಟ್ ಪೇಪರ್ ಯಡವಟ್ಟಿನಿಂದ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಬೇಕಿದ್ದ ಮತದಾನ ಸ್ಥಗಿತಗೊಳಿಸಲಾಗಿದೆ. ಕದಂಪೂರ ವಾರ್ಡ್‌ ನಂಬರ್ 6 ರಲ್ಲಿ ನಡೆಯಬೇಕಿದ್ದ ಮತದಾನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ