Breaking News
Home / ಜಿಲ್ಲೆ / ರಂಜಾನ್ ಮಾಸಾಚರಣೆ ಪಾಲಿಸಬೇಕಾದ ಮಾರ್ಗಸೂಚಿ…….

ರಂಜಾನ್ ಮಾಸಾಚರಣೆ ಪಾಲಿಸಬೇಕಾದ ಮಾರ್ಗಸೂಚಿ…….

Spread the love

ಮಸೀದಿಯ ಸಿಬ್ಬಂದಿಗಳು ಯಾವುದೇ ತರಹದ ಧ್ವನಿವರ್ಧಕಗಳನ್ನು ಮಸೀದಿಯಲ್ಲಿ ಐದು ಹೊತ್ತಿನ ಪ್ರಾರ್ಥನೆ(ನಮಾಜ್) ಯನ್ನು ಶುಕ್ರವಾರ (ನಮಾಜ್) ಪ್ರಾರ್ಥನೆ ಸಹ ಒಳಗೊಂಡಂತೆ ಮತ್ತು ತರ್ಹಾವಿ (ನಮಾಜ್) ಪ್ರಾರ್ಥನೆಗೆ ಬಳಸಲು ನಿರ್ಬಂಧಿಸಲಾಗಿದೆ.

ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಪ್ರಾರಂಭವಾಗಲಿದ್ದು, ಮೇ 3ರವರೆಗೆ ಅನ್ವಯವಾಗುವಂತೆ ಸರ್ಕಾರದ ಮಾರ್ಗದರ್ಶನಗಳನ್ನು ಮುಂದುವರೆಸುತ್ತಾ ದಾವಣಗೆರೆ ಜಿಲ್ಲೆಯಾದ್ಯಂತ ಬರುವ ಎಲ್ಲಾ ಮಸೀದಿ, ದರ್ಗಾಗಳಲ್ಲಿ ದೈನಂದಿನ ಮತ್ತು ರಂಜಾನ್ ಮಾಸದ ಸಾಮೂಹಿಕ ಪ್ರಾರ್ಥನೆಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡಂತೆ ನಿಬಂಧನೆಗಳನ್ನು ವಿಧಿಸಿ ಮೇ 3ರವರೆಗೆ ನಿಷೇಧಿಸಿ ಆದೇಶಿಸಲಾಗಿದೆ.

• ಯಾವುದೇ ಮುಸ್ಲಿಂರಿಗೆ ಐದು ಹೊತ್ತಿನ ಪ್ರಾರ್ಥನೆ (ನಮಾಜ್)ಯನ್ನು ಶುಕ್ರವಾರ (ನಮಾಜ್) ಪ್ರಾರ್ಥನೆ ಸಹ ಒಳಗೊಂಡಂತೆ ಮತ್ತು ತರಾವಿ (ನಮಾಜ್) ಪ್ರಾರ್ಥನೆಯನ್ನು ಮಸೀದಿಯಲ್ಲಿ ಮಾಡಲು ನಿರ್ಬಂಧಿಸಲಾಗಿರುತ್ತದೆ.

• ಮಸೀದಿಯ ಸಿಬ್ಬಂದಿಗಳು ಯಾವುದೇ ತರಹದ ಧ್ವನಿವರ್ಧಕಗಳನ್ನು ಮಸೀದಿಯಲ್ಲಿ ಐದು ಹೊತ್ತಿನ ಪ್ರಾರ್ಥನೆ(ನಮಾಜ್) ಯನ್ನು ಶುಕ್ರವಾರ (ನಮಾಜ್) ಪ್ರಾರ್ಥನೆ ಸಹ ಒಳಗೊಂಡಂತೆ ಮತ್ತು ತರ್ಹಾವಿ (ನಮಾಜ್) ಪ್ರಾರ್ಥನೆಗೆ ಬಳಸಲು ನಿರ್ಬಂಧಿಸಲಾಗಿದೆ.

ಮಸೀದಿಯ ಮೌಜಿನ್ ಅಥವಾ ಪೇಶ್‍ಇಮಾಂ ಸಹರಿ ಮತ್ತು ಇಫ್ತಾರ್ ಸಮಯವನ್ನು ಜನರಿಗೆ ಧ್ವನಿ ಕಡಿಮೆಗೊಳಿಸಿ ತಿಳಿಸಬೇಕು.

• ಯಾವುದೇ ಇಫ್ತಾರ್ ಮತ್ತು ಸಹರಿಗಳಲ್ಲಿ ಸಾಮೂಹಿಕ ಭೋಜನಕೂಟ ಮಸೀದಿಗಳಲ್ಲಿ ಆಯೋಜಿಸುವಂತಿಲ್ಲ

• ಮಸೀದಿ ಆವರಣದಲ್ಲಿ ಗಂಜಿ, ಆಶ್, ತಂಪುಪಾನೀಯಗಳನ್ನು ತಯಾರಿಸುವಂತಿಲ್ಲ.

• ಮಸೀದಿಗಳ ಸುತ್ತಮುತ್ತ ಯಾವುದೇ ಉಪಹಾರ ಅಂಗಡಿ ಹಾಕುವುದನ್ನು ನಿಷೇಧಿಸಲಾಗಿದೆ.

ಮಸೀದಿ ದರ್ಗಾಗಳ ವ್ಯವಸ್ಥಾಪನ ಕಮಿಟಿಯವರು ಮೇಲ್ಕಂಡ ನಿಬಂಧನೆಗಳನ್ನು ಸಾರ್ವಜನಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 (Covid-19)  ಕೊರೊನಾವೈರಸ್ ಸೋಂಕು ಹರಡದಂತೆ ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ಈ ಹಿಂದೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ನೀಡಿರುವ ಆದೇಶಗಳನ್ನು ಜಾರಿಗೊಳಿಸಲು ನಿರ್ದೇಶಿಸಿರುತ್ತಾರೆ. ತಪ್ಪಿದಲ್ಲಿ ವಕ್ಫ್ ಕಾಯಿದೆ 1995 ರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿರುತ್ತಾರೆ.

ದಾವಣಗೆರೆ ಜಿಲ್ಲಾದ್ಯಂತ ಬರುವ ಎಲ್ಲಾ ಮಸೀದಿ/ದರ್ಗಾಗಳ ವ್ಯವಸ್ಥಾಪನ ಕಮಿಟಿಯವರು ಮೇಲ್ಕಂಡ ಆದೇಶದಲ್ಲಿ ನೀಡಿರುವ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪವಿತ್ರ ರಂಜಾನ್ ಮಾಸಾಚರಣೆಯನ್ನು ಅತ್ಯಂತ ಶಾಂತಿಯಿಂದ ಆಚರಿಸಲು ದಾವಣಗೆರೆ ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ‌ ಮಹಮ್ಮದ್ ಸಿರಾಜ್ ಸಹ ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ