Breaking News
Home / ಜಿಲ್ಲೆ / ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ.

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ.

Spread the love

ಹುಬ್ಬಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿಸಾರ್ವಜನಿಕರಿಗೆ ಆಹಾರ ಭದ್ರತೆ ಒದಗಿಸಲು ಕೇಂದ್ರ ಸರಕಾರ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಲ್ಲಿಮೇ 2020ನೇ ತಿಂಗಳಿನಲ್ಲಿಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ.
ಪಡಿತರ ಚೀಟಿದಾರರು ಓಟಿಪಿ ಅಥವಾ ಬಯೋ ಮೆಟ್ರಿಕ್‌ ಮೂಲಕ ಪಡಿತರವನ್ನು ಪಡೆಯಬಹುದು. ಜಿಲ್ಲೆಗೆ ಹೆಚ್ಚುವರಿ 12,857 ಮೆ. ಟನ್‌ ಅಕ್ಕಿ ಹಾಗೂ 3806 ಮೆ. ಟನ್‌ ತೊಗರಿಬೇಳೆ ಹಂಚಿಕೆಯಾಗಿದೆ. ಈ ಆಹಾರಧಾನ್ಯವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡಿ ಜಿಲ್ಲೆಯ 8 ಸಗಟು ಮಳಿಗೆಗಳ ಮೂಲಕ 508 ನ್ಯಾಯಬೆಲೆ ಅಂಗಡಿಗಳಿಗೆ ಪೂರೈಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಒಟ್ಟು 508 ನ್ಯಾಯಬೆಲೆ ಅಂಗಡಿಗಳಲ್ಲಿಏಕ ಕಾಲಕ್ಕೆ ಮೇ 3ರಿಂದ ಆಹಾರಧಾನ್ಯವನ್ನು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಂಡು ಗ್ರಾಹಕರು ಪಡಿತರ ಪಡೆಯಬಹುದಾಗಿದೆ.
ನ್ಯಾಯಬೆಲೆ ಅಂಗಡಿಯವರು ಸೇವಾ ಶುಲ್ಕವನ್ನು ತೆಗೆದುಕೊಳ್ಳುವುದು ಕಂಡು ಬಂದಲ್ಲಿಅಂತಹ ನ್ಯಾಯಬೆಲೆ ಅಂಗಡಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಒಬ್ಬ ಸದಸ್ಯರಿಗೆ 10 ಕೆಜಿಯಂತೆ ಅಕ್ಕಿಯನ್ನು ಹಾಗೂ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 1 ಕೆಜಿ ತೊಗರಿ ಬೇಳೆಯನ್ನು ಉಚಿತವಾಗಿ ವಿತರಿಸಲಾಗುವುದು. ಬಿಪಿಎಲ್‌ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ಹಾಗೂ ಪ್ರತಿ ಬಿಪಿಎಲ್‌ ಪಡಿತರ ಚೀಟಿಗೆ 1 ಕೆಜಿ ತೊಗರಿಬೇಳೆಯನ್ನು ಉಚಿತವಾಗಿ ವಿತರಿಸಲಾಗುವುದು.
ದೂರು ನೀಡಿ: ನ್ಯಾಯಬೆಲೆ ಅಂಗಡಿಗಳಲ್ಲಿಆಹಾರ ಧಾನ್ಯ ವಿತರಿಸುವಾಗ ಅಕ್ರಮವೆಸಗಿದ ಸಂದರ್ಭದಲ್ಲಿತಕ್ಷಣ ಈ ಕೆಳಕಂಡ ದೂರವಾಣಿಗಳಿಗೆ ದೂರು ಸಲ್ಲಿಸಬೇಕು. ಧಾರವಾಡ: ದೂ: 0836- 2233822 ಆಹಾರ ಶಿರಸ್ತೇದಾರ ಮೊ: 9845059245. ಹುಬ್ಬಳ್ಳಿ ತಾಲೂಕು: ದೂ: 0836 2358388, ಮೊ: 9035074105, 8904840724. ಕಲಘಟಗಿ: ದೂ: 08370 284535, 7899972947. ಕುಂದಗೋಳ: ದೂ: 08304 290239, 9480145628.
ನವಲಗುಂದ: ದೂ: 08380 229240, 9620734505 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿತಿಳಿಸಿದ್ದಾರೆ


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ