Breaking News

ರಾಯಚೂರಿನಲ್ಲಿ ಸೂರ್ಯಗ್ರಹಣ ವೀಕ್ಷಣೆ: ಬಿಸ್ಕೆಟ್ ತಿಂದು ಮೌಢ್ಯಕ್ಕೆ ಬ್ರೇಕ್……..

Spread the love

ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಸಾರ್ವಜನಿಕರಿಗಾಗಿ ಚೂಡಾಮಣಿ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಭಾರತ ಜ್ಞಾನ ವಿಜ್ಞಾನ ಸಮಿತಿ, ಶಿಕ್ಷಣ ಕಿರಣ ಸಂಸ್ಥೆ, ಸೂರ್ಯ ಕಿರಣ ಸಂಸ್ಥೆಯಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.

ಜೊತೆಗೆ ಸೂರ್ಯಗ್ರಹಣ ವೇಳೆ ಮೂಢನಂಬಿಕೆ ಹಾಗೂ ಮೂಢ ಆಚರಣೆಗಳ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕರಿಗೆ ಬಿಸ್ಕೆಟ್ ನೀಡಲಾಗಿದೆ. ಗ್ರಹಣ ಕುರಿತ ವೈಜ್ಞಾನಿಕ ವಿಚಾರಗಳ ಮಾಹಿತಿ ನೀಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ನೀಡುವ ಮೂಲಕ ಸೂರ್ಯಗ್ರಹಣ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಗ್ರಹಣದ ಕ್ಷಣ ಕ್ಷಣದ ದೃಶ್ಯಗಳನ್ನು ನೋಡಿ ಸಾರ್ವಜನಿಕರು ಆನಂದಿಸುತ್ತಿದ್ದಾರೆ. ನಗರದಲ್ಲಿ ಮೋಡಕವಿದ ವಾತಾವರಣವಿದ್ದರೂ ಗ್ರಹಣ ವೀಕ್ಷಣೆಗೆ ಅವಕಾಶ ಸಿಕ್ಕಿದೆ. ಜಿಲ್ಲೆಯಲ್ಲಿ ಗ್ರಹಣ ಭಾಗಶಃ ಗೋಚರವಾಗುತ್ತಿದ್ದು, ಸಾರ್ವಜನಿಕರು ಗ್ರಹಣ ವೀಕ್ಷಣೆ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Spread the loveರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ