ಖಾನಾಪೂರ: ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದ ಶ್ರೀ ಮಠದ ಉತ್ತರಾಧಿಕಾರಿಗಳಾದ ಪೂಜ್ಯ ಶ್ರೀ ಚನ್ನವೀರ ದೇವರು ಶ್ರೀ ಮಠದಲ್ಲಿ ಗೋ ಶಾಲೆ ನಿರ್ಮಾಣ ಮಾಡಿ ಅಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರಿಗೆ ಮನವಿ ಸಲ್ಲಿಕೆ ಮಾಡಿದರು
ಈ ಸಂದರ್ಭದಲ್ಲಿ ಶ್ರೀ ಚನ್ನವಿರೇಶ್ವರ ಜಾತ್ರಾ ಮಹೋತ್ಸವದ ಅಧ್ಯಕ್ಷರಾದ ಮಹಾಂತೇಶ ವಾಲಿ ,ಮೋರೇಶ್ವರ ಮುನವಳ್ಳಿ, ಪ್ರಕಾಶ್ ಗುಡಿ,ರವಿ ಕಾಡಗಿ,ಅಪ್ಪಯ್ಯ ಕೊಡೋಳ್ಳಿ,ರಾಜು ಜ್ಯೋಡಂಗಿ, ಸೇರಿದಂತೆ ಶ್ರೀ ಮಠದ ಭಕ್ತರು ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.ಈ ಪ್ರಸ್ತಾವನೆ ಕುರಿತು ಮುಂದಿನ ದಿನಗಳಲ್ಲಿ ಪರಿಗಣಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದರು.
Laxmi News 24×7