ಕುಡಚಿ: ಇಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಮರು ಕೋವಿಡ್ ಕಾರಣದಿಂದಾಗಿ ಸರಳವಾಗಿ ಶನಿವಾರ ಆಚರಿಸಿದರು.
ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದ ಬಂದಿದ್ದ ಅವರು ಮಾಸಾಹೇಬಾ ದರ್ಗಾದಿಂದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ದೇವರ ನಾಮಸ್ಮರಣೆ ಮಾಡಿದರು. ಅವರಿಗೆ ಮುಖಂಡರು ಸಿಹಿ, ಶರಬತ್, ಚಹಾ ವಿತರಿಸಿದರು.
ಮುಖಂಡರಾದ ಮಹಮ್ಮದ ಹುಸೇನ ಓಮಿನಿ, ಸುಲ್ತಾನ ವಾಟೆ, ರಾಜು ನಿಡಗುಂದಿ, ಆಶಿಫ ಚಮನಶೇಖ, ಆತೀಫ ಪಟಾಯಿತ, ಅಮೀನ ವಾಟೆ ಇದ್ದರು.
ಮಸೀದಿಗಳನ್ನು ಸಿಂಗರಿಸಲಾಗಿತ್ತು. ಪಿಎಸ್ಐ ಶಿವರಾಜ ಧರಿಗೋಣ ನೇತೃತ್ವದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದರು.