Home / Uncategorized / ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

Spread the love

ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

 

ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್​ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ ರೇಪ್​​ಗೆ ಒಳಗಾಗಿದ್ದರು. ಈ ಬಗ್ಗೆ ಆಕೆಯ ತಂದೆ ಪೊಲೀಸರಿಗೆ ದೂರು ಕೂಡ ನೀಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಆಕೆಯಲ್ಲಿ ಕೊವಿಡ್ 19 ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭವಾಗಿತ್ತು. ಹಾಗಾಗಿ ಏಪ್ರಿಲ್​ 26ರಂದು ಶಿವಮ್​ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಲ್ಲಿ ಕೊವಿಡ್ ದೃಢಪಟ್ಟಿತ್ತು. ಅದಾದ ನಾಲ್ಕೇ ದಿನಗಳಲ್ಲಿ ಅಂದರೆ ಏಪ್ರಿಲ್​ 30ರಂದು ಕೊನೆಯುಸಿರೆಳಿದಿದ್ದಾರೆ.

ಯುವತಿಯ ಮರಣಕ್ಕೆ ಸಂಯುಕ್ತ ಕಿಸಾನ್​ ಮೋರ್ಚಾ ಸಂತಾಪ ವ್ಯಕ್ತಪಡಿಸಿದೆ. ಹಾಗೇ ಆಕೆಗೆ ನ್ಯಾಯ ಸಿಗಬೇಕು, ಈ ಹೋರಾಟದಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಹೇಳಿದೆ.

ನಮ್ಮ ಸಂಘಟನೆಯ ಹೋರಾಟಗಾರ್ತಿಯ ಮೇಲೆ ಅತ್ಯಾಚಾರ ಆಗಿದ್ದು ದುರಂತ ಎಂದು ಹೇಳಿರುವ ಎಸ್​ಕೆಎಂ ನಾಲ್ಕು ದಿನಗಳ ಹಿಂದೆಯೇ ಟಿಕ್ರಿ ಗಡಿಯಲ್ಲಿರುವ ಕಿಸಾನ್ ಸೋಷಿಯಲ್ ಆರ್ಮಿ ಎಂದು ಬರೆದುಕೊಂಡಿದ್ದ ದೊಡ್ಡ ಬ್ಯಾನರ್​, ಟೆಂಟ್​ಗಳನ್ನೆಲ್ಲ ತೆಗೆದುಹಾಕಿದೆ. ಇನ್ನು ಅತ್ಯಾಚಾರದ ಆರೋಪಿಗಳನ್ನು ಚಳುವಳಿಯಿಂದ ಅದಾಗಲೇ ದೂರವಿಟ್ಟಿರುವ ಸಂಘಟನೆ, ಅವರಿಗೆ ಸಾರ್ವಜನಿಕ ಬಹಿಷ್ಕಾರ ಹಾಕುವಂತೆ ಜನರಲ್ಲಿ ಮನವಿಯನ್ನೂ ಮಾಡಿದೆ.

 


Spread the love

About Laxminews 24x7

Check Also

ಯುವ ಮತದಾರರ ಚುನಾವಣೆ ಉತ್ಸಾಹ

Spread the loveಯುವ ಮತದಾರರ ಚುನಾವಣೆ ಉತ್ಸಾಹ ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯುವ ಮತದಾರರ ಪಾತ್ರವೂ ಮಹತ್ವದ್ದಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ