Breaking News

ಇಂದು ಭೂಮಿ ದಿನ : ಕೊರೊನಾ ಹೋರಾಟಗಾರರಿಗೆ ಪ್ರಧಾನಿ ಕೃತಜ್ಞತೆ

Spread the love

ನವದೆಹಲಿ, ಏ.22- ಇಂದು ಭೂಮಿ ದಿನ. ಈ ಸಂದರ್ಭದಲ್ಲಿ ಭೂಮಿ ತಾಯಿಯ ರಕ್ಷಣೆಗಾಗಿ ನಾವೆಲ್ಲರೂ ಪಣ ತೊಟ್ಟು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗೋಣ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನಮ್ಮ ಭೂಮಂಡಲವು ಹೆಚ್ಚು ಶುದ್ಧವಾಗಿ, ಆರೋಗ್ಯಕರವಾಗಿ ಮತ್ತು ಮತ್ತಷ್ಟು ಸಮೃದ್ಧವಾಗಿರಬೇಕು. ಇದಕ್ಕಾಗಿ ನಾವೆಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಇದಕ್ಕಾಗಿ ದೃಢಸಂಕಲ್ಪ ಮಾಡೋಣ ಎಂದು ಮೋದಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಇಂಟರ್‍ನ್ಯಾಷನಲ್ ಅರ್ಥ್ ಡೇ. ಭೂಮಿತಾಯಿ ದಿನ. ಈ ಭೂಮಿ ನಮ್ಮೆಲ್ಲರಿಗೂ ನೀಡುರವ ಸಂಪತ್ತು, ಆರೈಕೆ ಮತ್ತು ಒಡನಾಟವನ್ನು ನಾವೆಲ್ಲರೂ ಕೃತಜ್ಞತೆಯಿಂದ ಸ್ಮರಿಸೋಣ ಎಂದು ಪ್ರಧಾನಿ ಹೇಳಿದ್ದಾರೆ.

ಇಡೀ ವಿಶ್ವಕ್ಕೆ ಕೊರೊನಾ ಕಂಟಕವಾಗಿದ್ದು, ಈ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಲ್ಲರಿಗೂ ಧನ್ಯವಾದಗಳು ಎಂದು ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ