Breaking News

ಇಂದು ಭೂಮಿ ದಿನ : ಕೊರೊನಾ ಹೋರಾಟಗಾರರಿಗೆ ಪ್ರಧಾನಿ ಕೃತಜ್ಞತೆ

Spread the love

ನವದೆಹಲಿ, ಏ.22- ಇಂದು ಭೂಮಿ ದಿನ. ಈ ಸಂದರ್ಭದಲ್ಲಿ ಭೂಮಿ ತಾಯಿಯ ರಕ್ಷಣೆಗಾಗಿ ನಾವೆಲ್ಲರೂ ಪಣ ತೊಟ್ಟು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗೋಣ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ನಮ್ಮ ಭೂಮಂಡಲವು ಹೆಚ್ಚು ಶುದ್ಧವಾಗಿ, ಆರೋಗ್ಯಕರವಾಗಿ ಮತ್ತು ಮತ್ತಷ್ಟು ಸಮೃದ್ಧವಾಗಿರಬೇಕು. ಇದಕ್ಕಾಗಿ ನಾವೆಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಇದಕ್ಕಾಗಿ ದೃಢಸಂಕಲ್ಪ ಮಾಡೋಣ ಎಂದು ಮೋದಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಇಂಟರ್‍ನ್ಯಾಷನಲ್ ಅರ್ಥ್ ಡೇ. ಭೂಮಿತಾಯಿ ದಿನ. ಈ ಭೂಮಿ ನಮ್ಮೆಲ್ಲರಿಗೂ ನೀಡುರವ ಸಂಪತ್ತು, ಆರೈಕೆ ಮತ್ತು ಒಡನಾಟವನ್ನು ನಾವೆಲ್ಲರೂ ಕೃತಜ್ಞತೆಯಿಂದ ಸ್ಮರಿಸೋಣ ಎಂದು ಪ್ರಧಾನಿ ಹೇಳಿದ್ದಾರೆ.

ಇಡೀ ವಿಶ್ವಕ್ಕೆ ಕೊರೊನಾ ಕಂಟಕವಾಗಿದ್ದು, ಈ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಲ್ಲರಿಗೂ ಧನ್ಯವಾದಗಳು ಎಂದು ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ