Breaking News

ವಿದ್ಯುತ್‌ ದರ ಏರಿಕೆ ವಾಪಸ್‌ ಪಡೆದು ಜನ ನೆಮ್ಮದಿಯಾಗಿ ಬದುಕೋಕೆ ಅವಕಾಶ ಮಾಡಿ – ಸರ್ಕಾರಕ್ಕೆ ಬಿಎಸ್‌ವೈ ಆಗ್ರಹ

Spread the love

ಚಿಕ್ಕಮಗಳೂರು: ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಹುಚ್ಚಂಬಟ್ಟೆ ಏರಿಕೆ ಮಾಡಿದೆ. ಇದು ಸರಿಯಾದ ನಿರ್ಧಾರ ಅಲ್ಲ. ದರ ಹೀಗೆ ಏರಿಕೆಯಾದ್ರೆ ಸಾಮಾನ್ಯ ಜನ ಬದುಕೋದು ಹೇಗೆ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ  ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ವೀರಶೈವ ಲಿಂಗಾಯತ ಸಮುದಾಯ ಭವನ ಉದ್ಘಾಟನೆಗೆ ಅವರು ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿ, ವಿದ್ಯುತ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಸರ್ಕಾರ ವಿದ್ಯುತ್‌ ದರ ಏರಿಸಿರುವ ನಿರ್ಧಾರ ಖಂಡಿತಾ ಸರಿ ಇಲ್ಲ. ಸರಿಯಾಗಿ ಆಡಳಿತ ಮಾಡಲು ಬಾರದೆ ಬೇಕಾಬಿಟ್ಟಿ ಜಾಸ್ತಿ ಮಾಡಿದ್ದಾರೆ. ಸರ್ಕಾರ ಕೂಡಲೇ ವಿದ್ಯುತ್ ದರ ಏರಿಕೆ ನಿರ್ಧಾರ ವಾಪಸ್ ಪಡೆದು ಜನ ನೆಮ್ಮದಿಯಿಂದ ಬದುಕೋಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಕಾರ್ಯಕ್ರಮಕ್ಕೆ ತೆರಳೋ ಮುನ್ನ ಎಂಎಲ್‌ಸಿ ಸಿ.ಟಿ.ರವಿಯವರ ಮನೆಗೆ ಅವರು ಭೇಟಿ ನೀಡಿದ್ದರು. ಈ ವೇಳೆ ಸಿ.ಟಿ.ರವಿ ದಂಪತಿ ಆರತಿ ಮಾಡಿ ಮನೆಯೊಳಗೆ ಕರೆದೊಯ್ದರು. ಬಳಿಕ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಅಲ್ಲಿಂದ ಕಾರ್ಯಕ್ರಮಕ್ಕೆ ತೆರಳಿ, ಸಮುದಾಯ ಭವನ ಉದ್ಘಾಟಿದರು. ನಂತರ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ