Breaking News

ಕೃಷ್ಣಾರೋಗಿಗೆ ‘ಡ್ರೋನ್‌’ನಿಂದ ಮಾತ್ರೆ ರವಾನೆ

Spread the love

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಕೃಷ್ಣಾನದಿಯ ಕರಕಲಗಡ್ಡಿ ನಡುಗಡ್ಡೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ರೋಗಿಗೆ ಡ್ರೋನ್‌ ಮೂಲಕ ಮಾತ್ರೆ ಹಾಗೂ ಔಷಧಿಗಳನ್ನು ಶುಕ್ರವಾರ ಯಶಸ್ವಿಯಾಗಿ ತಲುಪಿಸಲಾಯಿತು.

ಕರಕಲಗಡ್ಡಿಯಲ್ಲಿ ಒಂದೇ ಕುಟುಂಬದ ನಾಲ್ಕು ಜನರು ಉಳಿದುಕೊಂಡಿದ್ದಾರೆ. ತಿಪ್ಪಣ್ಣ ಎನ್ನುವವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ವೈದ್ಯರ ಸಲಹೆಯಂತೆ ಅವರು ನಿರಂತರ ತೆಗೆದುಕೊಳ್ಳುತ್ತಿದ್ದ ಮಾತ್ರೆಗಳು ಖಾಲಿಯಾಗಿದ್ದವು. ಮಾತ್ರೆಗಳನ್ನು ಕಳುಹಿಸುವ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಡುಗಡ್ಡೆ ಜನರು ಗುರುವಾರ ಮನವಿ ಮಾಡಿದ್ದರು.

ನಾರಾಯಣಪುರ ಜಲಾಶಯದಿಂದ 2.72 ಲಕ್ಷ ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದ್ದು, ಕೃಷ್ಣಾ ನದಿಯಲ್ಲಿ ಪ್ರವಾಹ ರಭಸವಾಗಿದೆ. ಹೀಗಾಗಿ ನಡುಗಡ್ಡೆಗೆ ಬೋಟ್‌ ಹಾಕುವುದು ಅಪಾಯಕಾರಿ ಎಂದು ಎನ್‌ಡಿಆರ್‌ಎಫ್‌ ತಂಡದವರು ತಿಳಿಸಿದ್ದರು.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಎನ್‌. ಕಟ್ಟಿಮನಿ ಅವರು ಮಾರ್ಗದರ್ಶನ, ಕೃಷಿ ತಾಂತ್ರಿಕ ಕಾಲೇಜಿನ ಡೀನ್‌ ವೀರನಗೌಡ, ಸಹಾಯಕ ಪ್ರಾಧ್ಯಾಪಕರಾದ ಅಭಿಷೇಕ್‌ ಮತ್ತು ಸುನೀಲ್‌ ಶಿರವಾಳ ಅವರು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ್‌ ಸಹಕಾರದೊಂದಿಗೆ ಡ್ರೋನ್‌ ಕಾರ್ಯಾಚರಣೆ ನಡೆಸಲಾಯಿತು.

ಕೃಷ್ಣಾನದಿ ಪ್ರವಾಹದಿಂದಾಗಿ ಕರಕಲಗಡ್ಡಿ, ಮ್ಯಾದರಗಡ್ಡಿ ಎರಡು ನಡುಗಡ್ಡೆಗಳಿಗೆ ಸಂಪರ್ಕ ಕಡಿತವಾಗಿದೆ. ಮ್ಯಾದರಗಡ್ಡಿಯಲ್ಲಿದ್ದ 13 ಜನರ ಪೈಕಿ ನಾಲ್ಕು ಜನರನ್ನು ಸುರಕ್ಷಿತ ಜಾಗಕ್ಕೆ ಮೂರು ದಿನಗಳ ಹಿಂದೆಯೇ ಸ್ಥಳಾಂತರ ಮಾಡಲಾಗಿದೆ. ಆನಂತರ ಪ್ರವಾಹ ಏರಿಕೆ ಆಗಿದ್ದರಿಂದ ಕಾರ್ಯಾಚರಣೆ ಸ್ಥಗಿತ ಮಾಡಲಾಯಿತು. ನಡುಗಡ್ಡೆಯಲ್ಲೇ ಕೃಷಿ ಜಮೀನುಗಳಿದ್ದು, ಅಲ್ಲಿಯೇ ಕೆಲವು ಕುಟುಂಬಗಳು ವಾಸಿಸುತ್ತಿವೆ. ಪ್ರತಿವರ್ಷ ಪ್ರವಾಹ ಬಂದಾಗೊಮ್ಮೆ ಅಧಿಕಾರಿಗಳು ಮನವೊಲಿಸಿ ನಡುಗಡ್ಡೆಯಿಂದ ಜನರನ್ನು ಸುರಕ್ಷಿತ ಜಾಗಕ್ಕೆ ಕರೆತರುವುದು ವಾಡಿಕೆಯಾಗಿದೆ. ನಡುಗಡ್ಡೆ ಹೊರಗಡೆ ಕೃಷಿ ಜಮೀನು ಹಾಗೂ ಮನೆಗಳನ್ನು ನಿರ್ಮಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎನ್ನುವುದು ಅಲ್ಲಿರುವ ಜನರ ಬೇಡಿಕೆಯಾಗಿದ್ದು, ಇದುವರೆಗೂ ಈಡೇರಿಲ್ಲ. ಅಧಿಕಾರಿಗಳು ಭರವಸೆ ನೀಡುತ್ತಾ ಬಂದಿದ್ದಾರೆ.

ಡ್ರೋನ್‌ ಮೂಲಕ ನಡುಗಡ್ಡೆ ಜನರಿಗೆ ಮಾತ್ರೆಗಳನ್ನು ತಲುಪಿಸುವ ವಿಡಿಯೋ ಇದೀಗ ವೈರಲ್‌ ಆಗಿದೆ.


Spread the love

About Laxminews 24x7

Check Also

ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವಿರೋಧ ಆಯ್ಕೆ

Spread the loveಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ, ಇತರ 14 ಪದಾಧಿಕಾರಿಗಳು ಹಾಗೂ ಕಾರ್ಯಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ